ಉಪ ಚುನಾವಣೆ ಬಳಿಕ ಮಸ್ಕಿಯಲ್ಲಿ ಕೋವಿಡ್ ಆಘಾತ!


Team Udayavani, Apr 27, 2021, 4:49 PM IST

ಉಪ ಚುನಾವಣೆ ಬಳಿಕ ಮಸ್ಕಿಯಲ್ಲಿ ಕೋವಿಡ್ ಆಘಾತ!

ಮಸ್ಕಿ: ಕೋವಿಡ್ ಎರಡನೇ ಅಲೆ ಭೀತಿ ನಡುವೆಯೇ ನಡೆದಿದ್ದ ಉಪ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ ಭಾರೀಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಪ್ರಚಾರಕ್ಕೆಬಂದಿದ್ದ ನಾಯಕರಲ್ಲಿ ಮಾತ್ರವಲ್ಲ, ಈಗಸಾಮಾನ್ಯ ಜನರಲ್ಲೂ ಸೋಂಕು ವ್ಯಾಪಿಸಿದ್ದು, ತಳಮಳಕ್ಕೆ ಕಾರಣವಾಗಿದೆ!.

ಏ.17ರಂದು ಮತದಾನ ನಡೆದಿತ್ತು. ಪ್ರಚಾರಕ್ಕೆ ಸಿಎಂ, ಮಾಜಿ ಸಿಎಂ ಸೇರಿದಂತೆ ಹಲವುಘಟಾನುಘಟಿ ನಾಯಕರು ಆಗಮಿಸಿದ್ದರು. ಪ್ರಚಾರದ ವೇಳೆಯೇ ಡಿಸಿಎಂ ಗೋವಿಂದಕಾರಜೋಳ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡಪಾಟೀಲ್‌, ಸುರಪುರ ಶಾಸಕ ರಾಜುಗೌಡ,ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಬಿಜೆಪಿಮುಖಂಡರಾದ ತಮ್ಮೇಶಗೌಡ, ಪ್ರತಾಪಗೌಡ ಪಾಟೀಲ್‌ ಕುಟುಂಬದ ಐವರು ಸದಸ್ಯರಿಗೂಸೋಂಕು ತಗುಲಿತ್ತು. ಅಲ್ಲದೇ ಮಾಜಿ ಶಾಸಕಶಿವರಾಜ ತಂಗಡಗಿ ಸೇರಿ ಕಾಂಗ್ರೆಸ್‌ನ ಹಲವು ನಾಯಕರಿಗೂ ಸೋಂಕು ಹರಡಿತ್ತು.

ಉಪ ಚುನಾವಣೆ ಬಳಿಕ ಮಸ್ಕಿ, ತುರುವಿಹಾಳ, ಬಳಗಾನೂರು ಸೇರಿ ಹಲವು ಪ್ರಾಥಮಿಕಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಕುರಿತಾಗಿಟೆಸ್ಟ್‌ ಮಾಡಲಾಗುತ್ತಿದೆ. ಪ್ರತಿದಿನ 100-120ಜನರಿಗೆ ಕೋವಿಡ್‌ ಪರೀಕ್ಷೆಗೆ ನಡೆಸಲಾಗುತ್ತಿದ್ದು, ಕಳೆದ ರವಿವಾರ ಒಂದೇ ದಿನ ಬರೋಬ್ಬರಿ 28ಕೇಸ್‌ಗಳು ಪತ್ತೆಯಾಗಿದ್ದರೆ, ಸೋಮವಾರ 12ಜನರಿಗೆ ಸೋಂಕು ತಗುಲಿದೆ. ಏ.17ರ ಮತದಾನಮುಗಿದ ದಿನದಿಂದ ಇಲ್ಲಿವರೆಗೆ (ಏ.26ರವರೆಗೆ)ಒಟ್ಟು 90ಕ್ಕೂ ಹೆಚ್ಚು ಜನರಲ್ಲಿ ಸೋಂಕುಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ಮಸ್ಕಿ ಕ್ಷೇತ್ರ ಲಿಂಗಸುಗೂರು, ಸಿಂಧನೂರುತಾಲೂಕಿನ ವ್ಯಾಪ್ತಿಯಲ್ಲಿರುವುದರಿಂದ ಅಲ್ಲೂಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತರ್ಯಾಲಿ, ರಾಜಕೀಯ ಸಭೆಗಳು ನಡೆದ ಸ್ಥಳಗಳವ್ಯಾಪ್ತಿಯಲ್ಲಿ ರ್‍ಯಾಂಡಂ ಟೆಸ್ಟ್‌ ಮಾಡಿದರೆ ಪ್ರಕರಣಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ತಹಶೀಲ್ದಾರ್‌ಗೂ ಸೋಂಕು :  ಚುನಾವಣೆ ಸಮಯದಲ್ಲಿ ಕರ್ತವ್ಯದಮೇಲೆ ಓಡಾಡಿದ ಮಸ್ಕಿ ತಹಶೀಲ್ದಾರ್‌ಮಹೇಂದ್ರಕುಮಾರ್‌ ಅವರಿಗೂ ಕೋವಿಡ್ ಪಾಸಿಟಿವ್‌ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಕೋವಿಡ್‌ ಪತ್ತೆಯಾಗಿದ್ದು, ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ. ತಹಶೀಲ್ದಾರ್‌ ಕಚೇರಿಯ ಇತರ ಇಬ್ಬರು ಸಿಬ್ಬಂದಿಗಳಲ್ಲೂ ಕೋವಿಡ್‌ ದೃಢಪಟ್ಟಿದೆ.ಪ್ರಾಥಮಿಕ ಸಂಪರ್ಕದಲ್ಲಿದ್ದವರುಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‌ ಆಗಿದ್ದಾರೆ.

ವ್ಯಕ್ತಿ ಸಾವು :

ಕೋವಿಡ್‌ ಸೋಂಕಿಗೆ ಒಳಗಾಗಿದ್ದ ಮಸ್ಕಿ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ವಾರದ ಹಿಂದೆಸೋಂಕಿಗೆ ಒಳಗಾಗಿದ್ದ ಈ ವ್ಯಕ್ತಿ ಬಳ್ಳಾರಿಯಲ್ಲಿಚಿಕಿತ್ಸೆಗೆ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಿಸದೇಎರಡು ದಿನದ ಹಿಂದೆ ಮೃತಪಟ್ಟಿದ್ದಾನೆ ಎಂದು ತಾಲೂಕು ಆಡಳಿತ ತಿಳಿಸಿದೆ.

 

ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.