ಚಿನ್ನದ ಗಣಿ ನೌಕರ ಸೇರಿ ಮೂವರಿಗೆ ಸೋಂಕು
Team Udayavani, Jul 6, 2020, 9:33 AM IST
ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ನೌಕರರೊಬ್ಬರು ಸೇರಿದಂತೆ ಪಟ್ಟಣದಲ್ಲಿ 3 ಜನರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಗಣಿ ಕಂಪನಿ ಕಾರ್ಮಿಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಓರ್ವ ಸೋಂಕಿತ ವ್ಯಕ್ತಿ ಕೋವಿಡ್ ವರದಿ ಬರುವ ಮುನ್ನವೇ ಹೈದರಾಬಾದ್ ಗೆ ತೆರಳಿದ್ದು, ನಂತರ ಪಾಸಿಟಿವ್ ಬಂದಿದೆ. ಆತನ ಪತ್ತೆಗಾಗಿ ಪೊಲೀಸರು ತೊಡಗಿದ್ದಾರೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
ತಾಲೂಕು ವೈದ್ಯಾಧಿಕಾರಿ ರುದ್ರಗೌಡ ಪಾಟೀಲ ಪೊಲೀಸ್ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸೋಂಕಿತರು ವಾಸಿಸುವ ಮನೆಯ ಸುತ್ತಲಿನ ಪ್ರದೇಶದಲ್ಲಿ ಸೋಂಕು ನಾಶಕ ಸಿಂಪಡಿಸಿದ್ದು, ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ. ಪಿಎಸ್ಐ ಮುದ್ದುರಂಗ ಸ್ವಾಮಿ, ವೈದ್ಯಾಧಿಕಾರಿ ಲಕ್ಷ್ಮೀಕಾಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ