ರಂಗಮಂದಿರದಲ್ಲಿ ದನಕರುಗಳ ಡ್ರಾಮಾ!

•ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆ ತಾಣವಾಗಬೇಕಿದ್ದ ಸ್ಥಳದಲ್ಲಿ ಕಸದ ರಾಶಿ •2015ರಲ್ಲೇ ಕಾಮಗಾರಿ ಆರಂಭ

Team Udayavani, May 27, 2019, 9:53 AM IST

rc-tdy-1..

ಸಿಂಧನೂರು: ನಗರದ ಕೋಟೆ ಬಡಾವಣೆ ರಸ್ತೆಯಲ್ಲಿ ನನೆಗುದಿಗೆ ಬಿದ್ದ ರಂಗಮಂದಿರ ಕಟ್ಟಡದ ಸುತ್ತ ಎಸೆದಿರುವ ತ್ಯಾಜ್ಯ ಮತ್ತು ದನಕರುಗಳು.

ಸಿಂಧನೂರು: ನಗರದ ಕೋಟೆ ಬಡಾವಣೆ ರಸ್ತೆಯಲ್ಲಿ ಕೈಗೊಂಡ ರಂಗಮಂದಿರ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದ್ದು,ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಯ ತಾಣವಾಗಬೇಕಿದ್ದ ಕಟ್ಟಡ ಇದೀಗ ತಾಜ್ಯ, ದನಕರುಗಳು, ಹಂದಿಗಳ ತಾಣವಾಗಿ ಮಾರ್ಪಟ್ಟಿದೆ.

2011ರಲ್ಲಿ ಆಗ ಶಾಸಕರಾಗಿದ್ದ ನಾಡಗೌಡರ ಅವಧಿಯಲ್ಲೇ ರಂಗಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಬುನಾದಿ ಹಾಕಿ ಕೈಬಿಡಲಾಗಿತ್ತು. ಕಲಾಸಕ್ತರು ಜಿಲ್ಲಾ ಮತ್ತು ತಾಲೂಕು ಆಡಳಿತ ಗಮನ ಸೆಳೆದಾಗ ಪಿಲ್ಲರ್‌ ಹಾಕಲಾಯಿತು. ಪ್ರತಿ ಬಾರಿ ಸಾರ್ವಜನಿಕರು, ಸಂಘಟನೆಗಳಿಂದ ಒತ್ತಡ ಬಂದಾಗ ಮಾತ್ರ ಕಾಮಗಾರಿ ಕೈಗೊಳ್ಳುವ ಸಂಬಂಧಿಸಿದ ಅಧಿಕಾರಿಗಳು, ಜಿಲ್ಲಾಡಳಿತ ನಂತರ ಇತ್ತ ತಲೆ ಹಾಕಿಲ್ಲ. ಹೀಗಾಗಿ ರಂಗಮಂದಿರ ಕಾಮಗಾರಿ ಅರ್ಧಕ್ಕೆ ನಿಂತಿದೆ. ರಂಗಮಂದಿರ ಶೀಘ್ರ ಪೂರ್ಣಗೊಂಡು ಸಾಂಸ್ಕೃತಿಕ ಚಟುವಟಿಕೆಗೆ ವೇದಿಕೆ ಆಗಬಹುದೆಂಬ ನಗರದ ಜನತೆ, ಕಲಾಸಕ್ತರ ನಿರೀಕ್ಷೆ ಹುಸಿಯಾಗಿದೆ. ಜಿಲ್ಲಾಡಳಿತ ಮತ್ತು ನಗರಸಭೆ ಕುಂಭಕರ್ಣ ನಿದ್ರೆಗೆ ಜಾರಿದೆ.

ಅನುದಾನ ಎಷ್ಟು: ವೆಂಕಟರಾವ್‌ ನಾಡಗೌಡ ಅವರು ಶಾಸಕರಾಗಿದ್ದಾಗ 83 ಕೋಟಿ ರೂ. ವೆಚ್ಚದ ರಂಗಮಂದಿರ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಅದರಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 20 ಲಕ್ಷ, ರಾಜ್ಯಸಭಾ ಸದಸ್ಯರಾದ ರಾಜೀವ್‌ ಚಂದ್ರಶೇಖರ ಮತ್ತು ವಿಜಯ್‌ ಮಲ್ಯ ಅವರ ಅನುದಾನದಿಂದ ತಲಾ 10 ಲಕ್ಷ, ವಿಧಾನ ಪರಿಷತ್‌ ಸದಸ್ಯ ಕೃಷ್ಣಪ್ಪ ಅವರ ಅನುದಾನದಿಂದ 6 ಲಕ್ಷ ಹಾಗೂ ನಗರಸಭೆಯ ಅನುದಾನದಿಂದ 30 ಲಕ್ಷ ಸೇರಿದಂತೆ ಒಟ್ಟು 83 ಲಕ್ಷ ರೂ. ಬಿಡುಗಡೆಯಾಗಿದೆ. ಇದರಲ್ಲಿ 50 ಲಕ್ಷದಷ್ಟು ಮಾತ್ರ ಕೆಲಸ ಆಗಿದೆ. ಕಾಮಗಾರಿ ಹೊಣೆಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಹಣ ದುರ್ಬಳಕೆ ಪ್ರಕರಣಗಳ ಸುಳಿಗೆ ಸಿಲುಕಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸಿಬಿಐ ತನಿಖೆಗೆ ಎದುರಿಸಬೇಕಾಗಿ ಬಂದ ಹಿನ್ನೆಲೆಯಲ್ಲಿ ರಂಗಮಂದಿರ ಕಾಮಗಾರಿಗೆ ಅರ್ಧಕ್ಕೆ ನಿಂತಿದ್ದು ಮೇಲೇಳುತ್ತಲೇ ಇಲ್ಲ. ಈ ಕುರಿತು 3 ಬಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಚೂರುಪಾರು ಕೆಲಸ ಮಾಡಿದ್ದು ಬಿಟ್ಟರೆ ನಂತರ ಹೇಳಿಕೊಳ್ಳುವಂತಹ ಕೆಲಸ ಆಗಿಲ್ಲ. ಇದು ಸಾರ್ವಜನಿಕರು, ಕಲಾಸಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜ್ಯ ಎಸೆಯುವ ತಾಣ: ರಂಗಮಂದಿರ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸುತ್ತಲಿನ ಅಂಗಡಿಕಾರರು, ನಿವಾಸಿಗಳು ಈ ಜಾಗದಲ್ಲಿ ತ್ಯಾಜ್ಯ ಎಸೆಯುತ್ತಿದ್ದಾರೆ. ದನಕರುಗಳು, ಹಂದಿ-ನಾಯಿಗಳು ಇಲ್ಲಿಯೇ ಹೊರಳಾಡುತ್ತಿವೆ. ಮಳೆ ಬಂದರೆ ಈ ಜಾಗೆ ಕೊಳಚೆ ಪ್ರದೇಶದಂತಾಗುತ್ತದೆ. ದುರ್ನಾತ ಹರಡುತ್ತಿದೆ. ಕೆಲವರು ಇಲ್ಲಿಯೇ ಮೂತ್ರ ವಿಸರ್ಜಿಸುತ್ತಾರೆ. ನಗರದ ಸಾಂಸ್ಕೃತಿಕ ಚಟುವಟಿಕೆಗೆ ವೇದಿಕೆ ಆಗಬೇಕಿದ್ದ ಕಟ್ಟಡವಿಂದು ಅನಾಥವಾಗಿ ನಿಂತಿದೆ.

ಹೋರಾಟ ಸ್ತಬ್ದ: ತಾಲೂಕು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕೆಲ ಪದಾಧಿಕಾರಿಗಳು ಸೇರಿ ಸಮಾನ ಮನಸ್ಕರು ಈ ಹಿಂದೆ ರಂಗಮಂದಿರ ಕಾಮಗಾರಿ ವಿಳಂಬ ಖಂಡಿಸಿ ಧ್ವನಿ ಎತ್ತಿದ್ದರು. ತುರುಸಿನ ಹೋರಾಟ ಕೂಡ ನಡೆಸಿದ್ದರು. ಕೆಲ ದಿನಗಳಿಂದ ಅವರೂ ಸಹ ಮೌನಕ್ಕೆ ಶರಣಾಗಿದ್ದು, ಹೀಗಾಗಿ ಪರ್ಮೆನೆಂಟಾಗಿ ರಂಗಮಂದಿರ ಈಗ ಜಾನುವಾರುಗಳ ಡ್ರಾಮಾ ಮಂದಿರವಾಗಿ ಮಾರ್ಪಟ್ಟಿದೆ ಎನ್ನುವುದು ಕೆಲವರ ಅಭಿಪ್ರಾಯ.

•ಚಂದ್ರಶೇಖರ ಯರದಿಹಾಳ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.