ಸಮುದಾಯದಲ್ಲಿ ಬೆರೆತರೆ ಕಥೆ ಸೃಷ್ಟಿ


Team Udayavani, Mar 31, 2018, 3:37 PM IST

ray-3.jpg

ರಾಯಚೂರು: ಯಾವುದೇ ಸಾಹಿತಿ ಒಂದು ಕೃತಿ ರಚಿಸುವ ಮುನ್ನ ಪರಿಸರದೊಂದಿಗೆ ಬೆರೆಯಬೇಕು. ಅಂತರಾತ್ಮದಲ್ಲಿ ಪರಿಸರದೊಂದಿಗೆ ಸಂವಾದ ನಡೆಸಿದಾಗ ಕಥೆ ಸೃಷ್ಟಿ ಸಾಧ್ಯ ಎಂದು ಮೈಸೂರಿನ ಹಿರಿಯ ಸಾಹಿತಿ ಜಿ.ಪಿ.ಬಸವರಾಜ ಹೇಳಿದರು.

ನಗರದ ಕೃಷಿ ತಾಂತ್ರಿಕ ಕಾಲೇಜಿನ ಸೆಮಿನಾರ್‌ ಹಾಲ್‌ ನಲ್ಲಿ ಕಸಾಪ ಜಿಲ್ಲಾ ಘಟಕದಿಂದ ಹೈ-ಕ ಭಾಗದ ಯುವ ಕಥೆಗಾರರಿಗಾಗಿ ಹಮ್ಮಿಕೊಂಡ ಎರಡು ದಿನಗಳ ಸಣ್ಣ ಕಥೆಗಳ ಕಥನ ಮಾದರಿಯ ಕಥಾ ಕಮ್ಮಟಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಏಕಾಂತದಲ್ಲಿ ಕುಳಿತು ಕಥೆ ಬರೆಯಬಹುದೇ ವಿನಃ ಶೂನ್ಯದಲ್ಲಿ ಕುಳಿತರೆ ಕಥೆ ಸೃಷ್ಟಿಸಲು ಸಾಧ್ಯವಿಲ್ಲ. ನೆಲ, ಪರಿಸರ ಹಾಗೂ ಸಮುದಾಯದೊಂದಿಗೆ ಮುಖಾಮುಖೀಯಾದಾಗ ಮಾತ್ರ ಕಥೆ ಹುಟ್ಟಲು ಸಾಧ್ಯ. ನೆಲದ ಭಾಷೆ, ವೈಚಾರಿಕತೆ, ಸಾಮಾಜಿಕ ಒತ್ತಡಗಳಿಗೆ ಮುಖಾಮುಖೀಯಾದಾಗ ಮಾತ್ರ ಕಥೆ ಹುಟ್ಟಲು ಸಾಧ್ಯ ಎಂದರು.

118 ವರ್ಷಗಳ ಹಿಂದೆ ಹುಟ್ಟಿದ ಕಥೆಯನ್ನು ಪ್ರಬಂಧದ ಆಚೆಗೆ ನೋಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕಥೆ ಮತ್ತು ಪ್ರಬಂಧಗಳ ನಡುವೆ ತೆಳುವಾದ ಗೆರೆ ಮಾತ್ರ ಕಂಡು ಬರುತ್ತಿದೆ. ರಾಜ್ಯದಲ್ಲಿನ ಪ್ರಮುಖ ಕಥೆಗಾರರನ್ನು ನೋಡಿದಾಗ ಈ ಭಾಗದವರೇ ಕಂಡು ಬರುತ್ತಿರುವುದಕ್ಕೆ ಇಲ್ಲಿಯ ಪರಿಸರವೇ ಕಾರಣವಾಗಿದೆ ಎಂದರು. ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ| ಅಮರೇಶ ನುಗಡೋಣಿ ಮಾತನಾಡಿ, ಕಥೆಯ ರಚನೆ ಮತ್ತು ರೂಪದ ಬಗ್ಗೆ ಮೊದಲು ಆಲೋಚಿಸಬೇಕು. ಕಥೆಯ ಬಗ್ಗೆ ಆಲೋಚಿಸುವಾಗ ಹೇಗೆ ಆರಂಭಿಸಬೇಕು, ಕೊನೆಗಾಣಿಸಬೇಕು ಎನ್ನುವ ಗೊಂದಲವಿರುತ್ತದೆ. ಕಥೆಯ ಮಾದರಿ ಸೃಷ್ಟಿಸಿದಾಗ ಮಾತ್ರ ಕಥೆ, ಪಾತ್ರ, ಸನ್ನಿವೇಶಗಳು ಹುಟ್ಟುತ್ತವೆ ಎಂದರು.

ದುಃಖ, ಬಡತನ ಮತ್ತು ನೋವು ಇದ್ದಲ್ಲಿ ಕಥೆ ಹುಟ್ಟುತ್ತದೆ. ಬರವಣಿಗೆ, ಬದುಕು ಬೇರೆಯಲ್ಲ. ಬರವಣಿಗೆ ಎನ್ನುವುದು ಚಿಂತನಾ ಕ್ರಮವಾಗಿದ್ದು, ಬೇರೆಯವರಿಗಿಂತ ಭಿನ್ನವಾಗಿ ಯೋಚಿಸಿದಾಗ ಮಾತ್ರ ಕಥೆಯಲ್ಲಿ ಹೊಸತನ ಕಾಣಲು ಸಾಧ್ಯ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಪಾಟೀಲ ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಕುಮಟಾದ ಸಾಹಿತಿ ಶ್ರೀಧರ ಬಳಿಗಾರ, ಕಸಾಪ ಗೌರವ ಕಾರ್ಯದರ್ಶಿ ಭೀಮನಗೌಡ ಇಟಗಿ, ಜೆ.ಎಸ್‌.ಈರಣ್ಣ, ಶಿಬಿರದ ಸಂಚಾಲಕ ಡಾ| ದಸ್ತಗೀರಸಾಬ್‌ ದಿನ್ನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

court

ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಸಜೆ: ಸಂತ್ರಸ್ತ ಬಾಲಕಿಗೆ 9 ಲಕ್ಷ ರೂ. ಪರಿಹಾರ

Lingasugur; Akshara Dasoha officer attempted

Lingasugur; ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.