ಪರೀಕ್ಷೆ ಸುಗಮವಾಗಿ ನಡೆಸಲು ಡಿಸಿ ಸೂಚನೆ
Team Udayavani, Jun 25, 2020, 8:45 AM IST
ರಾಯಚೂರು: ಜಿಲ್ಲಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಅಡಚಣೆಯಾಗದಂತೆ ಸುಸೂತ್ರವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫೆರೆನ್ಸ್ ಹಾಲ್ನಲ್ಲಿ ಬುಧವಾರ ತಹಶೀಲ್ದಾರರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪರೀಕ್ಷೆಯಲ್ಲಿ ನಕಲಿಗೆ ಅವಕಾಶ ನೀಡಬಾರದು. ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿ ಯಾವುದೇ ಲೋಪಕ್ಕೆ ಆಸ್ಪದ ನೀಡದಂತೆ ಪರೀಕ್ಷೆ ನಡೆಸಬೇಕು. ಸಂಚಾರಿ ಜಾಗೃತ ದಳ ಅಧಿಕಾರಿಗಳು ಕಡ್ಡಾಯವಾಗಿ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಬೇಕು. ಎಲ್ಲ ಅಧಿಕಾರಿಗಳ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ಮೇಲ್ವಿಚಾರಕರು ಮೊಬೈಲ್ ಬಳಸಬಾರದು. ಪರೀಕ್ಷಾ ಕೇಂದ್ರದ 200 ಮೀಟರ್ ಆವರಣದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಹೊರಗಿನವರನ್ನು ಕೇಂದ್ರದೊಳಗೆ ಬಿಡಬಾರದು ಎಂದರು.
ಸಂಚಾರಿ ಜಾಗೃತ ದಳ ಮತ್ತು ಸ್ಥಳೀಯ ಜಾಗೃತದಳ ಅಧಿಕಾರಿಗಳು ನಕಲಿಗೆ ಆಸ್ಪದ ನೀಡಬಾರದು. ಪ್ರಶ್ನೆ ಪತ್ರಿಕೆ ಹಂಚಿಕೆ, ಪರೀಕ್ಷೆ ಸೇರಿದಂತೆ ಪ್ರತಿಯೊಂದನ್ನು ವಿಡಿಯೋ ಮಾಡಬೇಕು. ಪರೀಕ್ಷಾ ಪ್ರಕ್ರಿಯೆಯ ಪ್ರತಿ ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಬೇಕು ಎಂದರು.
ಪರೀಕ್ಷಾಕೇಂದ್ರಗಳಲ್ಲಿ ಪೇಪರ್ ಗ್ಲಾಸ್ ಗಳನ್ನೇ ಬಳಸಬೇಕು. ಶೌಚಗೃಹಗಳು ಶುಚಿಯಾಗಿರಬೇಕು. ಆರೋಗ್ಯ ವಿಚಾರದಲ್ಲಿ ಲೋಪಗಳಾದರೆ ಆರೋಗ್ಯಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಎಲ್ಲ ತಹಶೀಲ್ದಾರರು ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಮಾಡಬೇಕು. ತಮ್ಮ ವ್ಯಾಪ್ತಿಯ ಸಾರಿಗೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಯಾದ ಸಾರಿಗೆ ವ್ಯವಸ್ಥೆಯಾಗಿದೆಯಾ ಅಥವಾ ಏನಾದರೂ ಸಮಸ್ಯೆಗಳಿದ್ದರೆ ಪರಿಶೀಲಿಸುವಂತೆ ತಿಳಿಸಿದರು.
ಎಡಿಸಿ ದುರುಗೇಶ, ಹೆಚ್ಚುವರಿ ಎಸ್ಪಿ ಶ್ರೀಹರಿಬಾಬು, ಎಸಿ ಸಂತೋಷ ಕಾಮಗೌಡ, ತಹಶೀಲ್ದಾರರಾದ ಡಾ| ಹಂಪಣ್ಣ, ಶ್ರುತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ