ಪಿಎಂ ಗರೀಬ್‌ ಯೋಜನೆ ಹಣ ಮುಂದಿನ ವಾರ ಖಾತೆಗೆ


Team Udayavani, Apr 3, 2020, 5:58 PM IST

rc-tdy-1

ರಾಯಚೂರು: ಕೋವಿಡ್ 19 ಹಾವಳಿಗೆ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಮುಂದಿನ ವಾರ ಪ್ರಧಾನ ಮಂತ್ರಿ ಗರೀಬ್‌ ಯೋಜನೆಯಡಿ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರ ಸಭೆ ನಡೆಸಿದ ಅವರು, ಕೋವಿಡ್ 19  ವೈರಸ್‌ ಹರಡಂತೆ ತಡೆಯಲು ದೇಶಾದ್ಯಂತ ಲಾಕ್‌ ಡೌನ್‌ ಘೋಷಿಸಿದ್ದು, ಅದರಿಂದ ಸಾಕಷ್ಟು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಮುಖ್ಯವಾಗಿ ರೈತರು, ವಿಕಲಚೇತನರು ಹಾಗೂ ಜನ್‌ಧನ್‌ ಖಾತೆ ಹೊಂದಿದ ಮಹಿಳಾ ಫಲಾನುಭವಿಗಳಿಗೆ ನೆರವಾಗಲೂ ಅವರ ಬ್ಯಾಂಕ್‌ಖಾತೆಗಳಿಗೆ ಏಪ್ರಿಲ್‌ ಮೊದಲನೇ ವಾರದಲ್ಲಿ ಹಣ ಜಮೆ ಆಗಲಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹೆಸರು ನೋಂದಾಯಿಸಿದವರಿಗೆ ಮುಂದಿನ 3 ತಿಂಗಳು 2000 ರೂ. ಪಾವತಿಸಲಾಗುತ್ತದೆ. ಜನ್‌ಧನ್‌ ಖಾತೆ ಹೊಂದಿದ ಮಹಿಳೆಯರಿಗೆ 500 ರೂ. ಮತ್ತು ವಿಧವೆ, ಬಡ ನಾಗರಿಕರು, ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ 3 ತಿಂಗಳವರೆಗೆ ಸಾವಿರ ರೂ. ಜಮೆ ಮಾಡಲಾಗುತ್ತದೆ. 2 ಲಕ್ಷ ರೈತರಿಗೆ 2000 ರೂ. ಮತ್ತು 22 ಸಾವಿರಕ್ಕಿಂತ ಅಧಿಕ ವಿಕಲಚೇತನರಿಗೆ 1000 ರೂ. ಸಿಗಲಿದೆ. ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆಯಡಿ 3 ತಿಂಗಳು ಉಚಿತ ಅಡುಗೆ ಅನಿಲ ವಿತರಿಸಲಾಗುತ್ತದೆ. ಸ್ವಸಹಾಯ ಸಂಘಗಳಿಗೆ ಹೆಚ್ಚುವರಿಯಾಗಿ 20 ಲಕ್ಷ ಮೇಲ್ಪಟ್ಟು ಸಾಲ ನೀಡುವುದಾಗಿ ತಿಳಿಸಿದರು.

ಕೋವಿಡ್ 19  ಸೋಂಕಿತರಿಗೆ ಚಿಕಿತ್ಸೆ ನೀಡುವ ವೇಳೆ ವೈದ್ಯರು, ನರ್ಸ್ ಗಳು ಮತ್ತು ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಹಣ ಪಾವತಿಸಲಾಗುತ್ತದೆ. ಈಗಾಗಲೇ ಮೂರು ತಿಂಗಳ ಪಡಿತರ ನೀಡಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ ಎಂದರು.

ಗುಳೆ ಹೋಗಿದ್ದ 60 ಸಾವಿರಕ್ಕೂ ಅಧಿಕ ಜನ ಮರಳಿ ಬಂದಿದ್ದು, ಅವರನ್ನು ಹೋಂ ಕ್ವಾರೆಂಟೈನ್‌ನಲ್ಲಿ ಇರಲು ಸೂಚಿಸಲಾಗಿದೆ. ಗ್ರಾಹಕರ ಖಾತೆಗಳಿಗೆ ಹಣ ಜಮಾಯಿಸಿದ ನಂತರ ಡ್ರಾ ಮಾಡಿಕೊಳ್ಳುವ ವೇಳೆ ಬ್ಯಾಂಕ್‌ಗಳಲ್ಲಿ ಜನದಟ್ಟಣೆ ಆಗದಂತೆ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಬ್ಯಾಂಕ್‌ ಗಳ ಮುಂದೆ ಪೆಂಡಾಲ್‌ ಹಾಕಿಸಬೇಕು ಎಂದು ತಿಳಿಸಿದರು. ಎಡಿಸಿ ದುರುಗೇಶ್‌, ಲೀಡ್‌ ಬ್ಯಾಂಕ್‌ ಸೇರಿದಂತೆ ಎಲ್ಲ ಬ್ಯಾಂಕ್‌ ಗಳ ವ್ಯವಸ್ಥಾಪಕರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.