ಲಾಕ್ ಡೌನ್ ಕುರಿತು ಇಂದು ನಾಳೆಯೊಳಗೆ ನಿರ್ಧಾರ: ಡಿಸಿಎಂ ಲಕ್ಷ್ಮಣ ಸವದಿ
Team Udayavani, Apr 13, 2020, 11:16 AM IST
ರಾಯಚೂರು: ದೇಶಾದ್ಯಂತ ಏ.14ರಂದು ಮೊದಲ ಹಂತದ ಲಾಕ್ ಡೌನ್ ಮುಗಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮಾಡಿದ್ದು, ಇಂದು ಅಥವಾ ನಾಳೆಯೊಳಗೆ ಲಾಕ್ ಡೌನ್ ಮುಂದುವರಿಸಬೇಕೆ ಬೇಡವೇ ಎಂಬ ಬಗ್ಗೆ ಪ್ರಕಟಿಸುವರು ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದಿವರಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ತಿಳಿಸಿದರು. ಚೀನಾದಲ್ಲಿ ಹತೋಟಿಗೆ ಬಂದಿದ್ದ ಕೋವಿಡ್-19 ಸೋಂಕು ಮತ್ತೆ ಶುರುವಾಗಿದೆ. ಇದು ಆತಂಕಕಾರಿ ಸಂಗತಿ ರಾಯಚೂರು ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳಿಲ್ಲ. ಸದ್ಯಕ್ಕೆ ಈ ವೈರಸ್ ಗೆ ಮದ್ದು ಸಿಕ್ಕಿಲ್ಲ. ತಮ್ಮ ತಮ್ಮ ಮನೆಗಳಲ್ಲಿರುವುದೇ ಮದ್ದು. ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕಿದೆ ಎಂದರು.
ಪಕ್ಕದ ರಾಜ್ಯಗಳಲ್ಲಿ ಕೋವಿಡ್-19 ವೈರಸ್ ಹೆಚ್ಚಾಗಿದೆ. ಹೀಗಾಗಿ ರಸ್ತೆ ಹಾಗೂ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗುವುದು ಎಂದರು.
ಸಾರಿಗೆ ವ್ಯವಸ್ಥೆ ಪ್ರಾರಂಭಿಸುವ ವಿಚಾರ ಚರ್ಚೆ ನಡೆದಿದೆ. ಲಾಕ್ ಡೌನ್ ಎಲ್ಲಿ ಮಾಡಬೇಕು ಎಲ್ಲಿ ಮಾಡಬಾರದು ಎನ್ನುವ ವಿಚಾರ ಚರ್ಚಿಸಲಾಗುತ್ತಿದೆ. ಪಾಸಿಟಿವ್ ಇಲ್ಲದ ಜಿಲ್ಲೆಗಳಲ್ಲಿ ಸಡಿಲಗೊಳಿಸಬೇಕೆ ಬೇಡವೇ ಎಂದು ಚಿಂತಿಸಲಾಗುವುದು. ರೈತರು ಸದ್ಯದ ಪರಿಸ್ಥಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸಬೇಕು. ರೈತರ ಬೆಳೆಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು