ಯೋಜನೆ ದುರ್ಬಳಕೆಗೆ ಕಡಿವಾಣ ಹಾಕಿ


Team Udayavani, Sep 29, 2018, 4:45 PM IST

ray-1.jpg

ರಾಯಚೂರು: ಕೇಂದ್ರ ಅಥವ ರಾಜ್ಯ ಸರ್ಕಾರಗಳು ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುವ ಯೋಜನೆಗಳು ದುರ್ಬಳಕೆ ಆಗದಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹೊಣೆ ಅಧಿಕಾರಿಗಳ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೋಷಣ ಅಭಿಯಾನ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಮತ್ತು ಸ್ವತ್ಛ ಭಾರತ್‌ ಮಿಷನ್‌ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಅಧಿಕಾರಿಗಳು ಆತ್ಮತೃಪ್ತಿ ತರುವಂಥ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅಂದಾಗ ಮಾತ್ರ ಯೋಜನೆಗಳು ಸಾಫಲ್ಯ ಕಾಣಲು ಸಾಧ್ಯ. ನಾವು ಕೇವಲ ಯೋಜನೆಗಳನ್ನು ರೂಪಿಸಬಲ್ಲೆವು. ಅವುಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳೇ. ಹೀಗಾಗಿ ಅಧಿಕಾರಿಗಳು ಹೆಚ್ಚು ಶ್ರದ್ಧೆ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸರ್ಕಾರಿ ನೌಕರಿಯಲ್ಲ ಎಂಬ ನಿರ್ಲಕ್ಷ್ಯ ಧೋರಣೆಯಿಂದ ಕೆಲಸ ಮಾಡದಿರಿ. ಸೌಲಭ್ಯ ಪಡೆದ ಪಲಾನುಭವಿಗಳು ನಿಮ್ಮನ್ನು ಹರಸಿದರೆ ಪುಣ್ಯಲಭಿಸುತ್ತದೆ. ಅದೇ ಫಲಾನುಭವಿಗಳು ಸೌಲಭ್ಯ ಸಿಗದೆ ಹಿಡಿ ಶಾಪ ಹಾಕಿದರೆ ನಿಮಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳಿದರು.
 
ಗರ್ಭಿಣಿಯರಿಗೆ ಉತ್ತಮ ಆಹಾರ ಸಿಕ್ಕರೆ ಜನಿಸುವ ಮಕ್ಕಳು ಕೂಡ ಆರೋಗ್ಯವಂತರಾಗಿರುತ್ತಾರೆ. ಅದೇ ಕಾರಣಕ್ಕೆ ಕೇಂದ್ರ ಸರ್ಕಾರ ಮಾತೃವಂದನಾ ಯೋಜನೆ ಜಾರಿಗೊಳಿಸಿದರೆ, ನವೆಂಬರ್‌ನಿಂದ ರಾಜ್ಯ ಸರ್ಕಾರ ಮಾತೃಶ್ರೀ ಎಂಬ ಯೋಜನೆ ಜಾರಿಗೆ ತರುತ್ತಿದೆ. ಜಿಲ್ಲೆಯಲ್ಲಿ ಅಪೌಷ್ಟಿಕತೆ ಇದೆ ಎಂಬ ವಿಚಾರ ವ್ಯಾಪಕ ಚರ್ಚೆಗೀಡಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕಾಗಿ ಇಂಥ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಕೂಲಿಗೆ ಹೋಗದಂತೆ ಸಹಾಯಧನ ನೀಡಲಾಗುತ್ತಿದೆ. ಇದು ಅರ್ಹ ಫಲಾನುಭವಿಗಳಿಗೆ ತಲುಪಲಿ ಎಂದು ಸೂಚಿಸಿದರು. ನಗರ ಶಾಸಕ ಡಾ| ಶಿವರಾಜ ಪಾಟೀಲ ಮಾತನಾಡಿ, ಮಹಿಳೆಯರಲ್ಲಿ ಹೆಚ್ಚು ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಇದರಿಂದ ಬುದ್ಧಿಮಾಂದ್ಯ ಮಕ್ಕಳು ಜನಿಸಬಹುದು. ಇಂಥ ಸಮಸ್ಯೆ ಬಾರದಂತೆ ಯೋಜನೆ ಜಾರಿಗೊಳಿಸಲಾಗಿದೆ. ಪ್ರಧಾನಿ ಮೋದಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಗೌರವ ಧನ ಹೆಚ್ಚಿಸಿದ್ದಾರೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌. ನಾಗರಾಜ, ಸಹಾಯಕ ನಿರ್ದೇಶಕ ವೀರನಗೌಡ, ನಗರಸಭೆ ಮಾಜಿ ಸದಸ್ಯ ಹರೀಶ ನಾಡಗೌಡ, ತಿಮ್ಮಾರೆಡ್ಡಿ ಪಾಲ್ಗೊಂಡಿದ್ದರು. ಪಾಲ್ಗೊಂಡಿದ್ದ ಗರ್ಭಿಣಿಯರಿಗೆ ಜಿಲ್ಲಾಡಳಿತದಿಂದ ಸೀಮಂತ ಕಾರ್ಯಕ್ರಮ ನಡೆಯಿತು.  

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.