ಕವಿತಾಳ ಪಪಂ ಮುಖ್ಯಾಧಿಕಾರಿ, ಜೆಇ ವಿರುದ್ಧ ಕ್ರಮಕ್ಕೆ ಒತ್ತಾಯ


Team Udayavani, Mar 2, 2022, 1:34 PM IST

19apeal

ರಾಯಚೂರು: ಕವಿತಾಳ ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಜೆಇ ಮಲ್ಲಣ್ಣ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಹಾಗೂ ಕೂಡಲೇ ಸೇವೆಯಿಂದ ವಜಾಗೊಳಿಸಿ ಬೇರೆ ಅಧಿಕಾರಿಗಳನ್ನು ನೇಮಿಸುವಂತೆ ಆಗ್ರಹಿಸಿ ಪಪಂ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕವಿತಾಳ ಪಟ್ಟಣ 16 ವಾರ್ಡ್‌ ಒಳಗೊಂಡಿದ್ದು, ಪ್ರತಿ ವಾರ್ಡ್‌ನಲ್ಲಿ ಕುಡಿವ ನೀರು, ವಿದ್ಯುತ್‌ ದೀಪ, ಚರಂಡಿ ಸ್ವಚ್ಛತೆ, ಶೌಚಗೃಹ ವ್ಯವಸ್ಥೆ, ರಸ್ತೆ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಮುಖ್ಯ ರಸ್ತೆಯಲ್ಲೇ ವಿದ್ಯುತ್‌ ದೀಪಗಳಿಲ್ಲ. ಪಟ್ಟಣದಲ್ಲಿ ನಡೆಯುವ ಸಂತೆಗೆ 25ಕ್ಕೂ ಹೆಚ್ಚು ಹಳ್ಳಿ ಜನ ಬರುತ್ತಾರೆ. ಹಳೇ ಬಸ್‌ ನಿಲ್ದಾಣ ಬಳಿ ಶೌಚಾಲಯ ಕೂಡ ಇಲ್ಲ. ರಸ್ತೆ ಆಗಲೀಕರಣ ವೇಳೆ ಶೌಚಾಲಯ ತೆರವು ಮಾಡಿದ್ದು, ಜನ ಬಯಲಲ್ಲೇ ಮೂತ್ರ ಮಾಡುವಂತಾಗಿದೆ ಎಂದು ದೂರಿದರು.

ಮುಖ್ಯಾಧಿಕಾರಿ ಸರಿಯಾಗಿ ಕಚೇರಿಗೆ ಬರುವುದಿಲ್ಲ. ಅಪರೂಪಕ್ಕೆ ಬಂದಾಗ ಮೂಲ ಸೌಕರ್ಯ ಒದಗಿಸಲು ಅನುದಾನ ಇಲ್ಲ. ನಿಮ್ಮಗಿನ್ನೂ ಅಧಿಕಾರ ಸಿಕ್ಕಿಲ್ಲ ಎಂದು ನೆಪ ಹೇಳುತ್ತಿದ್ದಾರೆ. ಈ ಇಬ್ಬರು ಅಧಿಕಾರಿಗಳು ಸದಸ್ಯರ ಕರೆ ಸ್ವೀಕರಿಸುವುದಿಲ್ಲ. ವಾಸಸ್ಥಳ, ಮರಣ ಪ್ರಮಾಣಪತ್ರ ಬೇಕಾದರೂ ತಿಂಗಳುಗಟ್ಟಲೇ ಅಲೆಯಬೇಕಿದೆ ಎಂದರು.

ಈ ಹಿಂದೆ ಇಬ್ಬರು ಶೌಚಾಲಯ ನಿರ್ಮಾಣದಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದರು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶಾಧಿಕಾರಿ ವರದಿಯಲ್ಲಿ ಬಹಿರಂಗವಾಗಿದೆ. ಆದರೂ ಕ್ರಮ ಜರುಗಿಸಿಲ್ಲ. ಅವರನ್ನೇ ಅಧಿಕಾರದಲ್ಲಿ ಮುಂದುವರಿಸಿದ್ದು, ಮತ್ತಷ್ಟು ಅಕ್ರಮಕ್ಕೆ ಅನುವು ಮಾಡಿಕೊಟ್ಟಂತಾಗಿದೆ ಎಂದರು. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. 15 ದಿನದೊಳಗೆ ಬೇರೆ ಅಧಿಕಾರಿಗಳನ್ನು ನೇಮಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಪಂಚಾಯತಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ವೇಳೆ ಪಪಂ ಸದಸ್ಯರಾದ ರಮೇಶ ನಗನೂರು, ಮಲ್ಲಿಕಾರ್ಜುನ, ಅಮರೇಶ ಕುರಿ, ರಾಘವೇಂದ್ರ, ಲಿಂಗರಾಜ ಕಂದಗಲ್‌, ಹುಲಿಗೆಪ್ಪ, ತಿಪ್ಪಯ್ಯ ಸ್ವಾಮಿ, ಸುರೇಶ ರೆಡ್ಡಿ ವಕೀಲ, ಶಿವಕುಮಾರ ಮ್ಯಾಗಳಮನಿ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.