ಎಸ್‌ಸಿ ಪ್ರಮಾಣ ಪತ್ರ ವಿತರಣೆಗಾಗಿ ನಿರಶನ


Team Udayavani, Jul 7, 2022, 4:00 PM IST

15AC

 

ಲಿಂಗಸುಗೂರು: ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ವೀರಶೈವ ಜಂಗಮ ಸಮಾಜದ ಮುಖಂಡರು ಎಸಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿಗೆ ಸೇರಿರುವ ಬೇಡ ಜಂಗಮ ಜಾತಿಯನ್ನು ಸಂವಿಧಾನದ ಪ್ರಕಾರ 341ನೇ ಪರಿಚ್ಛೇದದ ಅಡಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿರುತ್ತಾರೆ. ಅದರಂತೆ ಬೇಡ ಜಂಗಮ ಜಾತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೆಜಟಿಯರ್‌ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮೇಲಿಂದ ಮೇಲೆ ಅನೇಕ ಸುತ್ತೋಲೆಗಳನ್ನು ಹೊರಡಿಸಿ ಬೇಡ ಜಂಗಮರ ಬಗ್ಗೆ ಅಧ್ಯಯನ ನಡೆಸಲು ಡಾ| ಸ್ವಾಮಿನಾಥನ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು. ಆಯೋಗವು ಜಂಗಮರ ಬಗ್ಗೆ ಅಧ್ಯಯನ ಮಾಡಿ 1989ರಲ್ಲಿ ಆಯೋಗ ಲಿಂಗಾಯತ ಧರ್ಮದ ಅನುಯಾಯಿಗಳಾದ ಜಂಗಮರೇ ನಿಜವಾದ ಬೇಡ ಜಂಗಮ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಈ ಆಯೋಗದ ವರದಿಯನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು 2020 ಮಾರ್ಚ್‌ 8ರಂದು ಆದೇಶ ಹಾಗೂ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಜಿಲ್ಲಾಧಿ ಕಾರಿ ಹಾಗೂ ತಹಶೀಲ್ದಾರರಿಗೆ ಆರು ಮಾರ್ಗ ಸೂಚನೆ ನೀಡಿ ಅದರಂತೆ ಜಾತಿ ಪ್ರಮಾಣ ಪತ್ರ ನೀಡಲು ಸೂಚಿಸಿರುತ್ತಾರೆ. ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಬೇಡ ಜಂಗಮರು ಹೆಚ್ಚಿನ ಜನಸಂಖ್ಯೆಯಲ್ಲಿದ್ದಾರೆ. ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ತೀರ್ಪಿನಲ್ಲಿ ವೀರಶೈವ ಜಂಗಮರೇ ಬೇಡ ಜಂಗಮರೆಂದು ಆದೇಶ ಹೊರಡಿಸಿರುತ್ತದೆ. ಆದರೆ, ಇಷ್ಟೆಲ್ಲಾ ದಾಖಲೆಗಳು ಇದ್ದರೂ ಅಧಿಕಾರಿಗಳು ಸುತ್ತೋಲೆ ಮತ್ತು ಸಾಕ್ಷಾಧಾರಗಳ ಪ್ರಕಾರ ಎಸ್‌ಸಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಎಲ್ಲ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಸಿಎಂ ಬರೆದ ಮನವಿಯಲ್ಲಿ ಆಗ್ರಹಿಸಿದರು.

ಸಮಾಜದ ಅಧ್ಯಕ್ಷ ಪ್ರಭುಸ್ವಾಮಿ ಅತ್ನೂರು, ಬಸವರಾಜ ಸ್ವಾಮಿ, ಶರಣಬಸವ ಹಿರೇಮಠ, ಶಿವಕುಮಾರ ನಂದಿಕೋಲಮಠ, ಶ್ರೀಕಾಂತ ಮಠದ, ನೀಲಕಂಠಯ್ಯಸ್ವಾಮಿ, ಅಂಗಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಮಹೇಶ ನಂದಿಕೋಲಮಠ, ವೀರಭದ್ರಯ್ಯ ಗುಂತಗೋಳ, ಶಿವಕುಮಾರ ಸ್ವಾಮಿ, ಚೆನ್ನಬಸವ ಹಿರೇಮಠ, ಅಮರೇಶ ಗಂಭೀರಮಠ ಸೇರಿದಂತೆ ಇನ್ನಿತರಿದ್ದರು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.