ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಿದ್ಧತೆ

• ರೈತರ ಬೇಡಿಕೆ ತಕ್ಕಂತೆ ಬಿತ್ತನೆ ಬೀಜ ಪೂರೈಕೆ ••ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹ ••ಮಳೆ ನಿರೀಕ್ಷೆಯಲ್ಲಿ ಅನ್ನದಾತ

Team Udayavani, Jun 18, 2019, 9:40 AM IST

rc-tdy-2..

ಸಾಂದರ್ಭಿಕ ಚಿತ್ರ

ದೇವದುರ್ಗ: ಪ್ರಸಕ್ತ 2019-20ನೇ ಸಾಲಿನ ಮುಂಗಾರು ಮಳೆ ಕೊರತೆ ನಡುವೆಯೂ ಕೃಷಿ ಇಲಾಖೆಗೆ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಂಡಿದೆ. ತಾಲೂಕಿನ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹಿಸಿದೆ.

ಆದರೆ ಈವರೆಗೆ ಮುಂಗಾರು ಮಳೆ ಆಗದ ಕಾರಣ ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ರೈತರು ಬಿತ್ತನೆ ಬೀಜ ಖರೀದಿಗೆ ಮುಂದಾಗಿಲ್ಲ. ಹೀಗಾಗಿ ರೈತ ಸಂಪರ್ಕ ಕೇಂದ್ರಗಳು ಬಿಕೋ ಎನ್ನುತ್ತಿವೆ.

ಬಿತ್ತನೆ ಗುರಿ: ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಒಟ್ಟು 81,718 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಆದರೆ ವಾಡಿಕೆಗಿಂತ ಶೇ.40ರಷ್ಟು ಮಳೆ ಅಭಾವ ಎದುರಾಗಿದೆ. ಆಗಾಗ ಅಲ್ಪ ಪ್ರಮಾಣದಲ್ಲಿ ಮಳೆ ಆಗಿದ್ದರೂ ಭೂಮಿ ಹಸಿಯಾಗಿಲ್ಲ.

ದೇವದುರ್ಗ ಹೋಬಳಿ ವ್ಯಾಪ್ತಿಯಲ್ಲಿ 9,095 ಹೆಕ್ಟೇರ್‌ ಖುಷ್ಕಿ ಮತ್ತು 11,612 ಹೆಕ್ಟೇರ್‌ ನೀರಾವರಿ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಗಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಖುಷ್ಕಿ 7,286 ಹೆಕ್ಟೇರ್‌, ನೀರಾವರಿ 12,665 ಹೆಕ್ಟೇರ್‌, ಜಾಲಹಳ್ಳಿ ಹೋಬಳಿಯಲ್ಲಿ ಖುಷ್ಕಿ 100.30 ಹೆಕ್ಟೇರ್‌, ನೀರಾವರಿ 9,760 ಹೆಕ್ಟೇರ್‌, ಅರಕೇರಾ ಹೋಬಳಿ ವ್ಯಾಪ್ತಿಯಲ್ಲಿ ಖುಷ್ಕಿ 10,582 ಹೆಕ್ಟೇರ್‌, ನೀರಾವರಿ 10,688 ಹೆಕ್ಟೇರ್‌ ಸೇರಿ ಒಟ್ಟು ತಾಲೂಕಿನಲ್ಲಿ 81,718 ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಇದೆ.

ಬಿತ್ತನೆ ಬೀಜ ಪೂರೈಕೆ: ದೇವದುರ್ಗ ತಾಲೂಕಿನಲ್ಲಿ ದೇವದುರ್ಗ, ಜಾಲಹಳ್ಳಿ, ಗಬ್ಬೂರು, ಅರಕೇರಾ ಸೇರಿ ನಾಲ್ಕು ಹೋಬಳಿ ರೈತ ಸಂಪರ್ಕ ಕೇಂದ್ರಗಳಿವೆ. ದೇವದುರ್ಗ ತಾಲೂಕಿಗೆ 335 ಕ್ವಿಂಟಲ್ ಭತ್ತದ ಬೀಜ ಪೂರೈಕೆ ಆಗಿದೆ. ಈ ಪೈಕಿ ನಾಲ್ಕೂ ರೈತ ಸಂಪರ್ಕ ಕೇಂದ್ರಗಳಿಗೆ ತಲಾ 83.75 ಕ್ವಿಂಟಲ್ ಪೂರೈಸಲಾಗಿದೆ. 165 ಕ್ವಿಂಟಲ್ ತೊಗರಿ ಪೂರೈಕೆ ಆಗಿದ್ದು, ನಾಲ್ಕೂ ರೈತ ಸಂಪರ್ಕ ಕೇಂದ್ರಗಳಿಗೆ ತಲಾ 41.25 ಕ್ವಿಂಟಲ್ ಒದಗಿಸಲಾಗಿದೆ. 1 ಕ್ವಿಂಟಲ್ ಹೆಸರು ಬೀಜದಲ್ಲಿ ನಾಲ್ಕೂ ರೈತ ಸಂಪರ್ಕ ಕೇಂದ್ರಗಳಿಗೆ ತಲಾ 0.25 ಕ್ವಿಂಟಲ್ನಂತೆ ಪೂರೈಸಲಾಗಿದೆ. ಸಜ್ಜೆ 115 ಕ್ವಿಂಟಲ್ ಬಂದಿದ್ದು, ದೇವದುರ್ಗ ರೈತ ಸಂಪರ್ಕ ಕೇಂದ್ರಕ್ಕೆ 36 ಕ್ವಿಂಟಲ್, ಅರಕೇರಾಕ್ಕೆ 38, ಜಾಲಹಳ್ಳಿಗೆ 36 ಕ್ವಿಂಟಲ್, ಗಬ್ಬೂರು ಕೇಂದ್ರಕ್ಕೆ 5 ಕ್ವಿಂಟಲ್ ಪೂರೈಸಲಾಗಿದೆ. 1ಕ್ವಿಂಟಲ್ ಸೂರ್ಯಕಾಂತಿ ಬೀಜದಲ್ಲಿ ನಾಲ್ಕೂ ರೈತ ಸಂಪರ್ಕ ಕೇಂದ್ರಕ್ಕೆ ತಲಾ 0.25 ಕ್ವಿಂಟಲ್ ಪೂರೈಸಲಾಗಿದೆ. ಹುರುಳಿ 2 ಕ್ವಿಂಟಲ್ ಪೂರೈಕೆ ಆಗಿದ್ದು, ನಾಲ್ಕೂ ಹೋಬಳಿ ರೈತ ಸಂಪರ್ಕ ಕೇಂದ್ರಕ್ಕೆ ತಲಾ 50 ಕೆಜಿಯಂತೆ ಒದಗಿಸಲಾಗಿದೆ. ಒಟ್ಟಾರೆ ನಾಲ್ಕು ಕೇಂದ್ರಗಳಿಗೆ 681.1 ಕ್ವಿಂಟಲ್ ವಿವಿಧ ಬೀಜ ಪೂರೈಸಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯತ್ತ ರೈತರ ಚಿತ್ತ: ಸತತ ಮೂರ್‍ನಾಲ್ಕು ವರ್ಷ ಬರ ಎದುರಿಸಿದ ತಾಲೂಕಿನಲ್ಲಿ ಪ್ರಸಕ್ತ ವರ್ಷವೂ ಮಳೆ ಕೈಕೊಡುವ ಲಕ್ಷಣಗಳು ಗೋಚರಿಸುತ್ತಿವೆ. ಆಗಾಗ ಗುಡುಗು, ಸಿಡಿಲು, ಭಾರೀ ಗಾಳಿ ಆರ್ಭಟದೊಂದಿಗೆ ಮಳೆ ಸುರಿದಿದ್ದರೂ ಭೂಮಿ ಹಸಿಯಾಗಿಲ್ಲ. ತಾಲೂಕಿನಲ್ಲಿ ಆಗಾಗ ಮೋಡ ಮುಸುಕಿದ ವಾತಾವರಣ ಕಂಡುಬಂದರೂ ರಭಸದ ಗಾಳಿಗೆ ಮೋಡಗಳು ಮಳೆ ಸುರಿಸದೇ ಓಡಿಹೋಗುತ್ತಿವೆ. ಬಿಸಿಲ ಧಗೆಯೂ ಮುಂದುವರಿದಿದೆ. ಆದರೂ ಮಳೆ ನಿರೀಕ್ಷೆಯಲ್ಲಿರುವ ತಾಲೂಕಿನ ರೈತರು ಈಗಾಗಲೇ ಬಿತ್ತನೆಗಾಗಿ ಭೂಮಿ ಹದ ಮಾಡಿಕೊಂಡಿದ್ದಾರೆ. ವರುಣದೇವನ ಕೃಪೆಯಿಂದ ಸಮರ್ಪಕ ಮಳೆ ಸುರಿದು ಭೂಮಿ ಹಸಿಯಾದರೆ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಲಿವೆ.

•ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.