ನೆರೆ ಸಂತ್ರಸ್ತರಿಗೆ ನಿರ್ಮಿಸಿದ ಮನೆ ಹಾಳು


Team Udayavani, Oct 15, 2018, 12:00 PM IST

gul-6.jpg

ರಾಯಚೂರು: ಸರ್ಕಾರ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಮುನ್ನ ರಾಯಚೂರು ತಾಲೂಕಿನ ಎಲೆಬಿಚ್ಚಾಲಿಯ ಆಶ್ರಯ ಮನೆಗಳನ್ನೊಮ್ಮೆ ನೋಡಬೇಕು. ಏಕೆಂದರೆ ಪುನರ್ವಸತಿ ಹೇಗಿರಬಾರದು ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಮತ್ತೂಂದಿಲ್ಲ!

2009ರಲ್ಲಿ ಸಂಭವಿಸಿದ ನೆರೆ ಹಾವಳಿಯಿಂದ ನೂರಾರು ಕುಟುಂಬಗಳು ನೆಲೆ ಕಳೆದುಕೊಂಡವು. ಆ ಸಂತ್ರಸ್ತರಿಗಾಗಿ ಸುಮಾರು 96 ಎಕರೆ ಪ್ರದೇಶದಲ್ಲಿ ಬರೋಬ್ಬರಿ 960 ಆಶ್ರಯ ಮನೆಗಳನ್ನು ನಿರ್ಮಿಸಲಾಗಿದೆ. ಆದರೆ, ಅವುಗಳಲ್ಲಿ ಬೆರಳೆಣಿಕೆಯಷ್ಟು ಮನೆಗಳು ಬಿಟ್ಟರೆ ಉಳಿದೆಲ್ಲವೂ ಈಗ ಹಾಳು ಬಿದ್ದಿವೆ.
 
ನೆರೆ ಹೊಡೆತಕ್ಕೆ ನದಿ ಪಾತ್ರದ ಗ್ರಾಮಸ್ಥರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿದ್ದರು. ಅದರಲ್ಲಿ ಎಲೆಬಿಚ್ಚಾಲಿ ಗ್ರಾಮ ಕೂಡ ಒಂದು. ಜನರಿಗೆ ಹೊಸ ಬದುಕು ಕಟ್ಟಿಕೊಡುವ ಉದ್ದೇಶದಿಂದ ಅಂದಿನ ಸಿಎಂ ಯಡಿಯೂರಪ್ಪ ಪುನರ್ವಸತಿ ಕಲ್ಪಿಸಲು ಮುಂದಾಗಿದ್ದರು. ಗ್ರಾಮದ ರೈತರಿಂದಲೇ ಸುಮಾರು 96 ಎಕರೆ ಜಮೀನು ಖರೀದಿಸಿ ಸಿಸ್ಕೋ ಎನ್ನುವ ಸಂಸ್ಥೆ ಮನೆಗಳ ನಿರ್ಮಿಸಿತ್ತು.

ಆದರೆ, ಅಗತ್ಯವಾಗಿ ಬೇಕಾದ ನೀರು, ವಿದ್ಯುತ್‌ ಸೌಲಭ್ಯವನ್ನೇ ಕಲ್ಪಿಸದ ಕಾರಣ ಜನ ಅಲ್ಲಿಗೆ ಹೋಗದೆ ದೂರ ಉಳಿದರು. ಅದರ ಪರಿಣಾಮ ಇಂದು ಆ ಮನೆಗಳೆಲ್ಲ ನಿರುಪಯುಕ್ತವಾಗಿವೆ. ಸಿಸ್ಕೋ ಸಂಸ್ಥೆ ಮನೆಗಳನ್ನು ನಿರ್ಮಿಸಿ ಸರ್ಕಾರಕ್ಕೆ ಹಸ್ತಾಂತರಿಸಿತು. ಜಿಲ್ಲಾಡಳಿತ ವಿದ್ಯುತ್‌ ಲೈನ್‌ ಎಳೆದು ಪರಿವರ್ತಕ ಕೂಡಿಸಿದರೂ ವಿದ್ಯುತ್‌ ಮಾತ್ರ ಹರಿಸಲಿಲ್ಲ. ಇನ್ನು ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಡಲಿಲ್ಲ. ಇದರಿಂದ ಜನ ಮೊದಲು ಸೌಲಭ್ಯ ಕಲ್ಪಿಸಿ ನಂತರ ಬರುವುದಾಗಿ ತಿಳಿಸಿದರೂ ಸೌಲಭ್ಯ ಮಾತ್ರ ಕಲ್ಪಿಸಲಿಲ್ಲ. ಆದರೆ, ಅಧಿಕಾರಿಗಳು ಮಾತ್ರ ಹಕ್ಕುಪತ್ರ ಪಡೆಯದಿದ್ದರೆ ಪಡಿತರ ನೀಡುವುದಿಲ್ಲ ಎಂದು ಬೆದರಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ತಮ್ಮ ಹೊಣೆಯಿಂದ ನುಣುಚಿಕೊಂಡಿದ್ದಾರೆ.

ಬಾಗಿಲು ಕಿಟಕಿ ಕಳವು: ಪುನರ್ವಸತಿ ಕೇಂದ್ರದಲ್ಲಿ ಇಂದು ಆಶ್ರಯ ಮನೆಗಳ ಅವಶೇಷಗಳು ಮಾತ್ರ ಉಳಿದಿವೆ. ಏಕೆಂದರೆ ಅದಕ್ಕೆ ಅಳವಡಿಸಿದ ಬಾಗಿಲು, ಕಿಟಕಿ ಸೇರಿ ಇನ್ನಿತರ ವಸ್ತುಗಳನ್ನು ಸುತ್ತಲಿನ ಗ್ರಾಮಸ್ಥರು ಹಂತ ಹಂತವಾಗಿ ಕಳವು ಮಾಡಿದ್ದಾರೆ.

 ವಿದ್ಯುತ್‌ ಪರಿವರ್ತಕಗಳನ್ನು ಕದ್ದು ನೆರೆ ರಾಜ್ಯಗಳಲ್ಲಿ ಮಾರಿಕೊಂಡಿದ್ದಾರೆ ಎಂದು ದೂರುತ್ತಾರೆ ಗ್ರಾಮಸ್ಥರು. ಇನ್ನು ಸಂಪೂರ್ಣ ಜಾಲಿ ಕಂಟಿ ಬೆಳೆದು ನಿಂತಿದೆ. ಕಟ್ಟಡಗಳು ಬಿರುಕು ಬಿಟ್ಟಿದ್ದು, ಬೀಳುವ ಸ್ಥಿತಿಯಲ್ಲಿವೆ. ಹೀಗಾಗಿ ಈ ಕಡೆ ತಲೆ ಹಾಕಲು ಕೂಡ ಹೆದರುವಂತಾಗಿದೆ. ಈಗಾಗಲೇ ಭಾಗಶಃ ಮನೆಗಳು ಅವಸಾನ ಸ್ಥಿತಿ ತಲುಪಿವೆ. ಉಳಿದವುಗಳನ್ನಾದರೂ ರಕ್ಷಿಸಿ ಬಳಕೆಗೆ ಮುಕ್ತಗೊಳಿಸಬೇಕಿದೆ.  

ಅವೈಜಾನಿಕ ಕಾಮಗಾರಿ ಮನೆಗಳ ನಿರ್ಮಾಣದ ಹೊಣೆ ಹೊತ್ತ ಸಿಸ್ಕೋ ಸಂಸ್ಥೆ ಏಕ ಮಾದರಿಯಲ್ಲಿ ಚಿಕ್ಕ ಮನೆಗಳನ್ನು ನಿರ್ಮಿಸಿ ಕೈ ತೊಳೆದುಕೊಂಡಿತು. ಎಷ್ಟು ಚಿಕ್ಕದೆಂದರೆ ಇಬ್ಬರಿರುವಲ್ಲಿ ಮತ್ತೂಬ್ಬರು ಬಂದರೆ ಹೊಂದಿಕೊಳ್ಳುವುದು ಕಷ್ಟ ಎನಿಸುವಷ್ಟು. ಪ್ರತಿ ಫಲಾನುಭವಿಗೆ 30/40 ಅಳತೆಯ ನಿವೇಶನ ನೀಡಿ ಅದರಲ್ಲಿ ಅರ್ಧಕ್ಕಿಂತ ಕಡಿಮೆ ಸ್ಥಳದಲ್ಲಿ ಚಿಕ್ಕ ಮನೆ ನಿರ್ಮಿಸಲಾಯಿತು. ಇದರಿಂದ ಹೆಚ್ಚು ಜನರಿರುವ ಕುಟುಂಬಗಳು ವಾಸಿಸಲು ಯೋಗ್ಯವಲ್ಲದಂತಾಗಿದೆ.

ಎಲೆಬಿಚ್ಚಾಲಿ ಗ್ರಾಮದ ಆಶ್ರಯ ಮನೆ ಸಮಸ್ಯೆ ಬಗ್ಗೆ ಹಿಂದೊಮ್ಮೆ ದೂರು ಬಂದಿತ್ತು. ಅಲ್ಲಿ ಸೌಲಭ್ಯ ಕಲ್ಪಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. 
 ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ, ರಾಯಚೂರು

ಮೊದಲು ಸೌಲಭ್ಯ ಕಲ್ಪಿಸಿ ನಂತರ ಹಕ್ಕುಪತ್ರ ಕೊಡುವಂತೆ ಹೇಳಿದರೂ ಬಲವಂತದಿಂದ ನೀಡಲಾಗಿದೆ. ಆಶ್ರಯ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಜಾಲಿ ಕಂಟಿ ಬೆಳೆದಿದೆ. ಅಕ್ರಮ ತಾಣವಾಗುತ್ತಿದೆ. ಇನ್ನಾದರೂ ಅಧಿಕಾರಿಗಳು ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು. ಅಲ್ಲದೇ, ಜಮೀನು ನೀಡಿದ ರೈತರಿಗೆ ಪರಿಹಾರ ಹಣ ಕಡಿಮೆ ಬಂದಿದು, ಹೆಚ್ಚಿನ ಹಣ ನೀಡಬೇಕು.
 ಎಂ.ನಾಗೇಶ ಸ್ವಾಮಿ, ಎಲೆಬಿಚ್ಚಾಲಿ ಗ್ರಾಮಸ್ಥ

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.