ನಾಲ್ವರು ಅಂತಾರಾಜ್ಯ ದರೋಡೆಕೋರರ ಬಂಧನ


Team Udayavani, Mar 23, 2022, 12:37 PM IST

10theft

ಸಿಂಧನೂರು: ವಾಹನಗಳನ್ನು ತಡೆದು ಬೆದರಿಕೆ ಹಾಕಿ ದರೋಡೆ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಸಿಂಧನೂರು ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ರಾಯಚೂರು ಜಿಲ್ಲಾ ಎಸ್ಪಿ ಬಿ. ನಿಖೀಲ್‌ ತಿಳಿಸಿದರು.

ನಗರದ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಕುರಿತು ಮಾಹಿತಿ ಒದಗಿಸಿದರು.

ಸಿಂಧನೂರು ನಗರದ ಜನತಾ ಕಾಲೋನಿ ನಿವಾಸಿ ಅಮರೇಶ್‌ ಮೋಡಿಕಾರ್‌, ದುರ್ಗಪ್ಪ ಆಲಿಯಾಸ್‌ ದುರುಗೇಶ, ಸಂಜೀವ, ರಾಮಸ್ವಾಮಿ ಎಂಬವರನ್ನು ಪೊಲೀಸ್‌ ತಂಡ ಸೋಮವಾರ ದಸ್ತಗಿರಿ ಮಾಡಿದೆ. ಅವರ ಬಳಿಯಿದ್ದ ಎರಡು ಲಕ್ಷ ರೂ. ನಗದು, 3 ಮೋಟಾರ್‌ ಸೈಕಲ್‌, ಒಂದು ಬುಲೆರೋ ಮ್ಯಾಕ್ಸ್‌ ಟ್ರಕ್‌ ಜಪ್ತಿ ಮಾಡಲಾಗಿದೆ ಎಂದರು.

ಏಳು ಜಿಲ್ಲೆ, ಅಂತಾರಾಜ್ಯ ನಂಟು

ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯ ದಢೇಸುಗೂರು ಕೆಇಬಿ ಸಮೀಪ ಈ ಹಿಂದೆ ಕುರಿ ವ್ಯಾಪಾರಸ್ಥರನ್ನು ತಡೆದು, ಅವರಿಗೆ ರಾಡ್‌ನಿಂದ ಹೊಡೆದು ಅವರ ಬಳಿಯಿದ್ದ 3.27 ಲಕ್ಷ ರೂ. ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳು ಈ ಪ್ರಕರಣ ಸೇರಿದಂತೆ ರಾಜ್ಯದ 7 ಜಿಲ್ಲೆಯಲ್ಲಿ 13 ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆ. ರಾಯಚೂರು-3, ಕೊಪ್ಪಳ-2, ವಿಜಯನಗರ-1, ಮಂಡ್ಯ-1, ತುಮಕೂರು-2, ಆಂಧ್ರಪ್ರದೇಶದ ರಾಜ್ಯದ ಕರ್ನೂಲ್‌ ಜಿಲ್ಲೆಯಲ್ಲಿ 3, ಅನಂತಪುರಂ ಜಿಲ್ಲೆಯಲ್ಲಿ 1 ಪ್ರಕರಣ ಸೇರಿ 13 ಕಡೆ ದರೋಡೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದರು.

50 ಸಾವಿರ ರೂ.ಬಹುಮಾನ

ದರೋಡೆ ಪ್ರಕರಣ ಭೇದಿಸಲು ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಒ ಉಮೇಶ್‌ ಕಾಂಬಳೆ, ಪಿಎಸೈ ಯರಿಯಪ್ಪ, ಚಂದ್ರಪ್ಪ, ಶಂಕರಗೌಡ ಬಳಗಾನೂರು, ಹನುಮಂತ, ಸಿಬ್ಬಂದಿಗಳಾದ ರಾಘವೇಂದ್ರ, ಶೆಟ್ಟೆಪ್ಪ, ಪರಶುರಾಮ, ದ್ಯಾಮಣ್ಣ, ಶರಣಪ್ಪ, ಅನಿಲಕುಮಾರ್‌, ಜಿ.ಕೆ. ಹೊನ್ನುಸಾ, ಸಿದ್ದಪ್ಪ, ಚಾಂದಪಾಷಾ, ಅಮರೇಗೌಡ, ಅಮರೇಶ, ಮಂಜುನಾಥ, ಅನಿಲ್‌ಕುಮಾರ್‌, ದೊಡ್ಡಬಸವ, ಸಂಗನಗೌಡ, ಅಶೋಕ, ದೇವರೆಡ್ಡಿ ಮತ್ತು ಡಿಪಿಒ ಸಿಆರ್‌ಆರ್‌ ಸೆಲ್‌ ನ ಅಜೀಂಪಾಷಾ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು. ಎರಡು ಬಾರಿ ದರೋಡೆಕೋರರು ತಪ್ಪಿಸಿಕೊಂಡಿದ್ದರು. ಆದರೆ, ಸತತ 6 ತಿಂಗಳು ನಿಗಾ ಇಟ್ಟು 3ನೇ ಪ್ರಯತ್ನದಲ್ಲಿ ಅವರನ್ನು ಸೆರೆ ಹಿಡಿಯಲಾಗಿದೆ. ದರೋಡೆಕೋರರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ತಂಡಕ್ಕೆ 50 ಸಾವಿರ ರೂ. ನಗದು ಬಹುಮಾನ ಘೋಷಿಸಲಾಗಿದೆ ಎಂದರು.

ಈ ವೇಳೆ ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ಉಮೇಶ್‌ ಕಾಂಬಳೆ, ಪಿಎಸ್‌ಗಳಾದ ಯರಿಯಪ್ಪ, ಚಂದ್ರಪ್ಪ, ಹನುಮಂತ, ಬಸವರಾಜ, ಶಂಕರಗೌಡ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.