Devadurga;ಪೊಲೀಸ್ ಪೇದೆ ಮೇಲೆ ಹಲ್ಲೆ: ಶಾಸಕಿ ಕರೆಮ್ಮ ಪುತ್ರ ಸಹಿತ 8 ಜನರ ವಿರುದ್ಧ ಪ್ರಕರಣ
Team Udayavani, Feb 12, 2024, 10:11 PM IST
ದೇವದುರ್ಗ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಶಾಸಕಿ ಕರೆಮ್ಮ ಗೋಪಾಲಕೃಷ್ಣ ಅವರ ಪುತ್ರ ಸಂತೋಷ ಕುಮಾರ, ಸೋದರ ತಿಮ್ಮರೆಡ್ಡಿ, ಆಪ್ತ ಸಹಾಯಕ ಇಲಿಯಾಜ್ ಸಹಿತ ಎಂಟು ಮಂದಿ ನಗರದ ಪ್ರವಾಸಿ ಮಂದಿರದಲ್ಲಿ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡಿರುವ ಪೇದೆಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ, ಹಲ್ಲೆ ಆರೋಪ ಹೊತ್ತಿರುವ ಎಂಟು ಮಂದಿಯೂ ಪ್ರತಿ ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸರಾದ ಹೆಡ್ ಕಾನ್ಸ್ಟೆಬಲ್ ಹನುಮಂತ್ರಾಯ, ಮಹೇಶ ಹಾಗೂ ಹನುಮೇಶ ವಿರುದ್ಧವೂ ಸೋಮವಾರ ಪ್ರಕರಣ ದಾಖಲಾಗಿದೆ.
ಇಡೀ ರಾತ್ರಿ ಶಾಸಕಿ ಪ್ರತಿಭಟನೆ ಪುತ್ರ, ಸೋದರ, ಆಪ್ತ ಸಹಾಯಕ ಸಹಿತ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕಿ ಕರೆಮ್ಮ ಅವರು ಬೆಂಬಲಿಗರೊಂದಿಗೆ ರಾತ್ರಿಯಿಡೀ ಠಾಣೆ ಮುಂದೆ ಪ್ರತಿಭಟಿಸಿದರು.
ಪೊಲೀಸ್ ಪೇದೆ ಪಾನಮತ್ತನಾಗಿ ತಾನೇ ವೀಡಿಯೋ ಮಾಡಿ ಮಗನ ತೇಜೋವಧೆ ಮಾಡಿದ್ದಾನೆ. ಆದ್ದರಿಂದ ಆರೋಪಿ ಪೊಲೀಸ್ ಪೇದೆ ಹಾಗೂ ಪಿಐ ಅಶೋಕ ಸದಲಗಿ ಅವರನ್ನು ವರ್ಗಾವಣೆ ಮಾಡಬೇಕೆಂದು ಪಟ್ಟು ಹಿಡಿದರು. ಸ್ಥಳಕ್ಕೆ ಎಸ್ಪಿ ನಿಖಲ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ