ಶ್ರೀಶೈಲ ಪಾದಯಾತ್ರಿಕರಿಗೆ ಭಕ್ತರ ಭರಪೂರ ಸೇವೆ


Team Udayavani, Mar 16, 2020, 7:13 PM IST

16-March-15

ದೇವದುರ್ಗ: ಬಡವರಿಗೆ ಆರ್ಥಿಕ ಶ್ರೀಮಂತಿಕೆಗೆ ಬರವಿರಬಹುದು, ಆದರೆ ಭಕ್ತಿಗೆ ಬರವಿಲ್ಲ ಎನ್ನುವ ಮಾತಿಗೆ ಅನ್ವರ್ಥ ಎನ್ನುವಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶ್ರೀಶೈಲ ಪಾದಯಾತ್ರಿಕರ ಸೇವೆಗಾಗಿ ಗ್ರಾಮಸ್ಥರು, ಭಕ್ತರು ಟೊಂಕಕಟ್ಟಿ ನಿಂತಿದ್ದಾರೆ.

ಯುಗಾದಿ ನಿಮಿತ್ತ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಶ್ರೀಶೈಲಕ್ಕೆ ಪಾದಯಾತ್ರೆ ತೆರಳುತ್ತಾರೆ. ತಾಲೂಕಿನ ಹಲವು ಗ್ರಾಮಗಳ ಮಾರ್ಗವಾಗಿ ಶ್ರೀಶೈಲಕ್ಕೆ ತೆರಳುತ್ತಾರೆ. ಹೋಳಿ ಹುಣ್ಣಿಮೆ ಮಾರನೆ ದಿನದಿಂದ ಆರಂಭವಾದ ಭಕ್ತರ ಪಾದಯಾತ್ರೆ ಯುಗಾದಿ ಅಮಾವಾಸ್ಯೆ ಎರಡ್ಮೂರು ದಿನಗಳ ಮುಂಚೆಗೆ ಸಮಾರೋಪಗೊಳ್ಳಲಿದೆ.

ಈ 8-10 ದಿನಗಳಲ್ಲಿ ಸಾವಿರಾರು ಭಕ್ತರು ತಾಲೂಕಿನ ಮಾರ್ಗವಾಗಿ ಪಾದಯಾತ್ರೆ ನಡೆಸಿ ಭಕ್ತಿಭಾವ ಮೆರೆಯುತ್ತಾರೆ. ವಿಜಯಪುರ, ಯಾದಗಿರಿ, ಕಲಬುರಗಿಯ ಗಡಿಭಾಗ, ಬಾಗಲಕೋಟೆ ಜಿಲ್ಲೆಯ ಕೊನೆ ಭಾಗದ ಹಳ್ಳಿಗಳ ಸಾವಿರಾರು ಭಕ್ತರು ದೇವದುರ್ಗ ತಾಲೂಕು ತಿಂಥಣಿ ಬ್ರಿಡ್ಜ್ ಹಾಗೂ ಹೂವಿನಹೆಡಗಿ ಸೇತುವೆ ಮೂಲಕ ರಾಯಚೂರು ರಾಜ್ಯ ಹೆದಾರಿಯಲ್ಲಿ ಪಾದಯಾತ್ರೆ ನಡೆಸುತ್ತಾರೆ.

ತಿಂಥಣಿಯಿಂದ ಗಬ್ಬೂರುವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಶಿಬಿರಗಳು ಆರಂಭವಾಗಿವೆ. ಈ ಶಿಬಿರಗಳಲ್ಲಿ ಪಾದಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶ್ರಾಂತಿ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ ಸ್ನಾನಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ತಾಲೂಕಿನಲ್ಲಿ ಸುಮಾರು 30ಕ್ಕೂ ಹೆಚ್ಚುಕಡೆ ಪಾದಯಾತ್ರೆಗಳ ಸೇವೆಗಾಗಿ ಅನ್ನಸಂತರ್ಪಣೆ ಶಿಬಿರವನ್ನು ಸಾರ್ವಜನಿಕರು ಆರಂಭಿಸಿದ್ದಾರೆ. ತಾಲೂಕಿನ ಹೂವಿನಹೆಡಗಿ, ದೇವದುರ್ಗ ಪಟ್ಟಣದಲ್ಲಿ ನಾಲ್ಕೈದು ಕಡೆ, ಗೌರಂಪೇಟೆ, ಕೊಪ್ಪರ ಕ್ರಾಸ್‌, ಮಿಯ್ನಾಪುರ ಕ್ರಾಸ್‌, ಚಿಕ್ಕಹೊನ್ನಕುಣಿ, ಚಿನ್ನಾಪುರ, ಸುಂಕೇಶ್ವರಹಾಳ, ಗಬ್ಬೂರು, ಸುಲ್ತಾನಪುರ ಸೇರಿ ವಿವಿಧೆಡೆ ಅನ್ನಸಂತರ್ಪಣೆ ಶಿಬಿರ ಆಯೋಜಿಸಲಾಗಿದೆ. ಕುಡಿವ ನೀರು, ತಂಪು ಪಾನೀಯ, ಔಷಧ ಸೌಲಭ್ಯ ಕಲ್ಪಿಸಲಾಗಿದೆ.

ಗೌರಂಪೇಟೆಯಲ್ಲಿ ಸತತ ನಾಲ್ಕನೇ ಬಾರಿಗೆ ರೈತರೇ ಸ್ವತಃ ಅನ್ನಸಂತರ್ಪಣೆ ಶಿಬಿರ ಆರಂಭಿಸಿದ್ದು, ನಿತ್ಯ ಸಿಹಿ ಅಡುಗೆ ತಯಾರಿಸಿ ಪಾದಯಾತ್ರಿಕರಿಗೆ ಉಣಬಡಿಸುತ್ತಿದ್ದಾರೆ.

ನಮ್ಮದು ಇಂಡಿ ತಾಲೂಕು ಚಳ್ಳಿಕೇರಿ ಗ್ರಾಮ. ನಾವು ಸುಮಾರು 30ಕ್ಕೂ ಹೆಚ್ಚು ಜನರು ಸತತ 22 ವರ್ಷಗಳಿಂದ ಶ್ರೀಶೈಲಕ್ಕೆ ಪಾದಯಾತ್ರೆ ಕೈಗೊಳ್ಳುತ್ತಿದ್ದೇವೆ. ಹೋಳಿ ಹುಣ್ಣಿಮೆ ನಂತರ ಪಾದಯಾತ್ರೆ ಕೈಗೊಳ್ಳುತ್ತೇವೆ. 10 ದಿನದಲ್ಲಿ ಶ್ರೀಶೈಲ ತಲುಪುತ್ತೇವೆ. ಸುಮಾರು 700 ಕಿಮೀ ದೂರವಿದ್ದು, ನಿತ್ಯ 60-65 ಕಿಮೀ ಪಾದಯಾತ್ರೆ ಮಾಡುತ್ತೇವೆ. ಭಕ್ತರು ಆಯೋಜಿಸುವ ಅನ್ನಸಂತರ್ಪಣೆ ಶಿಬಿರಗಳೇ ನಮಗೆ ಆಸರೆಯಾಗಿವೆ.
ಇಂಡಿ ತಾಲೂಕಿನ
ಚಳ್ಳಕೇರಿ ಗ್ರಾಮದ ಮಹಿಳೆಯರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.