ಶ್ರೀಶೈಲ ಪಾದಯಾತ್ರಿಕರಿಗೆ ಭಕ್ತರ ಭರಪೂರ ಸೇವೆ


Team Udayavani, Mar 16, 2020, 7:13 PM IST

16-March-15

ದೇವದುರ್ಗ: ಬಡವರಿಗೆ ಆರ್ಥಿಕ ಶ್ರೀಮಂತಿಕೆಗೆ ಬರವಿರಬಹುದು, ಆದರೆ ಭಕ್ತಿಗೆ ಬರವಿಲ್ಲ ಎನ್ನುವ ಮಾತಿಗೆ ಅನ್ವರ್ಥ ಎನ್ನುವಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶ್ರೀಶೈಲ ಪಾದಯಾತ್ರಿಕರ ಸೇವೆಗಾಗಿ ಗ್ರಾಮಸ್ಥರು, ಭಕ್ತರು ಟೊಂಕಕಟ್ಟಿ ನಿಂತಿದ್ದಾರೆ.

ಯುಗಾದಿ ನಿಮಿತ್ತ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಶ್ರೀಶೈಲಕ್ಕೆ ಪಾದಯಾತ್ರೆ ತೆರಳುತ್ತಾರೆ. ತಾಲೂಕಿನ ಹಲವು ಗ್ರಾಮಗಳ ಮಾರ್ಗವಾಗಿ ಶ್ರೀಶೈಲಕ್ಕೆ ತೆರಳುತ್ತಾರೆ. ಹೋಳಿ ಹುಣ್ಣಿಮೆ ಮಾರನೆ ದಿನದಿಂದ ಆರಂಭವಾದ ಭಕ್ತರ ಪಾದಯಾತ್ರೆ ಯುಗಾದಿ ಅಮಾವಾಸ್ಯೆ ಎರಡ್ಮೂರು ದಿನಗಳ ಮುಂಚೆಗೆ ಸಮಾರೋಪಗೊಳ್ಳಲಿದೆ.

ಈ 8-10 ದಿನಗಳಲ್ಲಿ ಸಾವಿರಾರು ಭಕ್ತರು ತಾಲೂಕಿನ ಮಾರ್ಗವಾಗಿ ಪಾದಯಾತ್ರೆ ನಡೆಸಿ ಭಕ್ತಿಭಾವ ಮೆರೆಯುತ್ತಾರೆ. ವಿಜಯಪುರ, ಯಾದಗಿರಿ, ಕಲಬುರಗಿಯ ಗಡಿಭಾಗ, ಬಾಗಲಕೋಟೆ ಜಿಲ್ಲೆಯ ಕೊನೆ ಭಾಗದ ಹಳ್ಳಿಗಳ ಸಾವಿರಾರು ಭಕ್ತರು ದೇವದುರ್ಗ ತಾಲೂಕು ತಿಂಥಣಿ ಬ್ರಿಡ್ಜ್ ಹಾಗೂ ಹೂವಿನಹೆಡಗಿ ಸೇತುವೆ ಮೂಲಕ ರಾಯಚೂರು ರಾಜ್ಯ ಹೆದಾರಿಯಲ್ಲಿ ಪಾದಯಾತ್ರೆ ನಡೆಸುತ್ತಾರೆ.

ತಿಂಥಣಿಯಿಂದ ಗಬ್ಬೂರುವರೆಗೆ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಶಿಬಿರಗಳು ಆರಂಭವಾಗಿವೆ. ಈ ಶಿಬಿರಗಳಲ್ಲಿ ಪಾದಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶ್ರಾಂತಿ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ ಸ್ನಾನಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ತಾಲೂಕಿನಲ್ಲಿ ಸುಮಾರು 30ಕ್ಕೂ ಹೆಚ್ಚುಕಡೆ ಪಾದಯಾತ್ರೆಗಳ ಸೇವೆಗಾಗಿ ಅನ್ನಸಂತರ್ಪಣೆ ಶಿಬಿರವನ್ನು ಸಾರ್ವಜನಿಕರು ಆರಂಭಿಸಿದ್ದಾರೆ. ತಾಲೂಕಿನ ಹೂವಿನಹೆಡಗಿ, ದೇವದುರ್ಗ ಪಟ್ಟಣದಲ್ಲಿ ನಾಲ್ಕೈದು ಕಡೆ, ಗೌರಂಪೇಟೆ, ಕೊಪ್ಪರ ಕ್ರಾಸ್‌, ಮಿಯ್ನಾಪುರ ಕ್ರಾಸ್‌, ಚಿಕ್ಕಹೊನ್ನಕುಣಿ, ಚಿನ್ನಾಪುರ, ಸುಂಕೇಶ್ವರಹಾಳ, ಗಬ್ಬೂರು, ಸುಲ್ತಾನಪುರ ಸೇರಿ ವಿವಿಧೆಡೆ ಅನ್ನಸಂತರ್ಪಣೆ ಶಿಬಿರ ಆಯೋಜಿಸಲಾಗಿದೆ. ಕುಡಿವ ನೀರು, ತಂಪು ಪಾನೀಯ, ಔಷಧ ಸೌಲಭ್ಯ ಕಲ್ಪಿಸಲಾಗಿದೆ.

ಗೌರಂಪೇಟೆಯಲ್ಲಿ ಸತತ ನಾಲ್ಕನೇ ಬಾರಿಗೆ ರೈತರೇ ಸ್ವತಃ ಅನ್ನಸಂತರ್ಪಣೆ ಶಿಬಿರ ಆರಂಭಿಸಿದ್ದು, ನಿತ್ಯ ಸಿಹಿ ಅಡುಗೆ ತಯಾರಿಸಿ ಪಾದಯಾತ್ರಿಕರಿಗೆ ಉಣಬಡಿಸುತ್ತಿದ್ದಾರೆ.

ನಮ್ಮದು ಇಂಡಿ ತಾಲೂಕು ಚಳ್ಳಿಕೇರಿ ಗ್ರಾಮ. ನಾವು ಸುಮಾರು 30ಕ್ಕೂ ಹೆಚ್ಚು ಜನರು ಸತತ 22 ವರ್ಷಗಳಿಂದ ಶ್ರೀಶೈಲಕ್ಕೆ ಪಾದಯಾತ್ರೆ ಕೈಗೊಳ್ಳುತ್ತಿದ್ದೇವೆ. ಹೋಳಿ ಹುಣ್ಣಿಮೆ ನಂತರ ಪಾದಯಾತ್ರೆ ಕೈಗೊಳ್ಳುತ್ತೇವೆ. 10 ದಿನದಲ್ಲಿ ಶ್ರೀಶೈಲ ತಲುಪುತ್ತೇವೆ. ಸುಮಾರು 700 ಕಿಮೀ ದೂರವಿದ್ದು, ನಿತ್ಯ 60-65 ಕಿಮೀ ಪಾದಯಾತ್ರೆ ಮಾಡುತ್ತೇವೆ. ಭಕ್ತರು ಆಯೋಜಿಸುವ ಅನ್ನಸಂತರ್ಪಣೆ ಶಿಬಿರಗಳೇ ನಮಗೆ ಆಸರೆಯಾಗಿವೆ.
ಇಂಡಿ ತಾಲೂಕಿನ
ಚಳ್ಳಕೇರಿ ಗ್ರಾಮದ ಮಹಿಳೆಯರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi; A crocodile was spotted on the banks of the Tungabhadra river

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

1-wffsdf

Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.