ಲಿಂಗನದೊಡ್ಡಿಗೆ ಬೇಕಿದೆ ಮೂಲ ಸೌಲಭ್ಯ

ಗ್ರಾಮಕ್ಕಿಲ್ಲ ವಾಹನ ಸೌಕರ್ಯ | ನೀರಿನ ಸಮಸ್ಯೆಗಿಲ್ಲ ಪರಿಹಾರ | ಎಸ್ಟಿ ಜನಾಂಗ ವಾಸಿಸುವ ಗ್ರಾಮದತ್ತ ಕಣ್ಣು ಹಾಯಿಸದ ಶಾಸಕರು

Team Udayavani, Mar 2, 2020, 4:47 PM IST

2-March-25

ದೇವದುರ್ಗ: ತಾಲೂಕಿನ ಕೊತ್ತದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಿಂಗನದೊಡ್ಡಿ ಮೂಲ ಸೌಲಭ್ಯವಂಚಿತ ಕುಗ್ರಾಮವಾಗಿದೆ. ಗ್ರಾಮಕ್ಕೆ ಬಸ್‌, ವಿದ್ಯುತ್‌ ಸೌಕರ್ಯ, ಸಮರ್ಪಕ ರಸ್ತೆ, ಚರಂಡಿ ಸೌಲಭ್ಯಗಳ ಕೊರತೆ ಮಧ್ಯೆ ಗ್ರಾಮಸ್ಥರು ಜೀವನ ದೂಡುವಂತಾಗಿದೆ.

ಲಿಂಗನದೊಡ್ಡಿ ಗ್ರಾಮದಲ್ಲಿ ಇಲ್ಲಿರುವವರೆಲ್ಲ ಮೂಲತಃ ಕೊತ್ತದೊಡ್ಡಿ ಗ್ರಾಮದವರು. ಹಿರಿಯರ ಭೂಮಿಗಳು ಇಲ್ಲಿರುವುದರಿಂದ ಲಿಂಗನದೊಡ್ಡಿಯಲ್ಲೇ 30 ಕುಟುಂಬಗಳು ವಾಸಿಸುತ್ತಿದ್ದು, ಸುಮಾರು 200 ಜನರಿದ್ದಾರೆ. ಇವರ ಮೂಲ ಕಾಯಕ ಕೃಷಿಯೇ ಆಗಿದೆ. ಆರೇಳು ಕುಟುಂಬಗಳಿಗೆ ಮಾತ್ರ ಆಸರೆ ಯೋಜನೆಯಡಿ ಮನೆ ಲಭಿಸಿವೆ. ಉಳಿದವರು ಗುಡಿಸಲಲ್ಲೇ ವಾಸಿಸುತ್ತಿದ್ದಾರೆ. ಗ್ರಾಮಸ್ಥರು ನಿತ್ಯದ ಗೃಹ ಬಳಕೆ ವಸ್ತು ಖರೀದಿಗೆ ಅರಕೇರಾ ಗ್ರಾಮದಲ್ಲಿ ನಡೆಯುವ ವಾರದ ಸಂತೆಗೆ ತೆರಳಬೇಕು. ಆದರೆ ಬಸ್‌ ಸೌಕರ್ಯ ಇಲ್ಲದ್ದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ.

ಬತ್ತಿದ ಬೋರ್‌: ಗ್ರಾಮದಲ್ಲಿ ಬೋರವೆಲ್‌ ಇದ್ದು, ಅಂತರ್ಜಲ ಬತ್ತಿದ್ದರಿಂದ ನಿರುಪಯುಕ್ತವಾಗಿದೆ. ಹೀಗಾಗಿ ಗ್ರಾಮಸ್ಥರು ಜಮೀನಿನಲ್ಲಿರುವ ಕೊಳವೆಬಾವಿಗಳನ್ನೇ ಆಶ್ರಯಿಸುವಂತಾಗಿದೆ. ಅದೂ ವಿದ್ಯುತ್‌ ಇದ್ದಾಗ ಮಾತ್ರ ನೀರು, ಇಲ್ಲದಿದ್ದರೆ ನೀರು ಸಿಗದೇ ಗ್ರಾಮಸ್ಥರು ಪರದಾಡುವಂತಾಗುತ್ತದೆ. ನೀರಿನ ಸಮಸ್ಯೆ ಕುರಿತು ಸರ್ಕಾರಿ ಶಾಲೆ ಶಿಕ್ಷಕಿ, ಅಂಗನವಾಡಿ ಕಾರ್ಯಕರ್ತೆಯರು ತಾಲೂಕು ಪಂಚಾಯಿತಿ ಮತ್ತು ಕೊತ್ತದೊಡ್ಡಿ ಗ್ರಾಪಂ ಗಮನಕ್ಕೆ ತಂದರೂ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಎಸ್‌ಟಿ ಮೀಸಲು ಕ್ಷೇತ್ರ: ದೇವದುರ್ಗ ವಿಧಾನಸಭಾ ಎಸ್‌ಟಿ ಮೀಸಲು ಕ್ಷೇತ್ರವಾಗಿದೆ. ಲಿಂಗನದೊಡ್ಡಿ ಗ್ರಾಮದಲ್ಲಿ ನೆಲಿಸಿದ 30 ಕುಟುಂಬಗಳು ವಾಲ್ಮೀಕಿ ಸಮುದಾಯಕ್ಕೆ ಸೇರಿದವರೇ ಆಗಿದ್ದಾರೆ. ಲಿಂಗನದೊಡ್ಡಿಯಲ್ಲಿನಯಿಂದ ಶಾಸಕ ಕೆ. ಶಿವನಗೌಡ ನಾಯಕ ಅವರ ಸ್ವಗ್ರಾಮ ಅರಕೇರಾ ಆರೇಳು ಕಿ.ಮೀ. ಅಂತರದಲ್ಲಿದೆ. ಆದರೆ ಶಾಸಕರು ಒಮ್ಮೆಯೂ ಈ ಗ್ರಾಮದತ್ತ ಕಣ್ಣೆತ್ತಿ ನೋಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಸೌಲಭ್ಯಗಳು ಮರೀಚಿಕೆ: ಅರಕೇರಾ ಗ್ರಾಮಕ್ಕೆ ಹೋಗುವ ಮಾರ್ಗ ಕೆ.ಹನುಮಂತ್ರಾಯ ನಗರದ ಪಕ್ಕದಿಂದಲೇ ಲಿಂಗನದೊಡ್ಡಿ ಗ್ರಾಮಕ್ಕೆ ಹೋಗಬೇಕು. ಈ ರಸ್ತೆ ಕಚ್ಚಾ ರಸ್ತೆಯಾಗಿದೆ. ಹೀಗಾಗಿ ಗ್ರಾಮಕ್ಕೆ ಬಸ್‌, ಟಂಟಂ, ಇತರೆ ವಾಹನಗಳು ಕೂಡ ಬರುತ್ತಿಲ್ಲ. ಕುಡಿವ ನೀರಿನ ಸಮಸ್ಯೆ ತೀವ್ರವಾಗಿದೆ. ಗ್ರಾಮದಲ್ಲಿ ಶೌಚಾಲಯ ಇಲ್ಲದ್ದರಿಂದ ಬಯಲನ್ನೇ ಆಶ್ರಯಿಸುವಂತಾಗಿದೆ.

ಪಡಿತರ ಆಹಾರಧಾನ್ಯಕ್ಕಾಗಿ, ಮತದಾನಕ್ಕಾಗಿ ಗ್ರಾಮಸ್ಥರು ಗ್ರಾಪಂ ಕೇಂದ್ರ ಕೊತ್ತದೊಡ್ಡಿಗೆ ಹೋಗಬೇಕು. ಯಾವುದೇ ವಾಹನಗಳ ಸೌಲಭ್ಯವಿಲ್ಲದೇ ನಡೆದುಕೊಂಡೇ ಹೋಗಬೇಕಿದೆ.

ಶಾಲೆ, ಅಂಗನವಾಡಿ: ಲಿಂಗನದೊಡ್ಡಿ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದ್ದು, 1ರಿಂದ 5ನೇ ತರಗತಿವರೆಗೆ 47 ಮಕ್ಕಳಿದ್ದಾರೆ. ಅಂಗನವಾಡಿ ಕೇಂದ್ರವಿದೆ. ಲಿಂಗನದೊಡ್ಡಿ ಶಾಲೆಗೆ ಸಮೀಪದ ಮಲ್ಲೇದೇವರಗುಡ್ಡ ಗ್ರಾಮದಿಂದ 20ಕ್ಕೂ ಹೆಚ್ಚು ಮಕ್ಕಳು ಬರುತ್ತಾರೆ. ಇವರು ಗುಡ್ಡಗಾಡಿನಲ್ಲಿ ಕಚ್ಚಾ ರಸ್ತೆಯಲ್ಲೇ ಒಂದೂವರೆ ಕಿ.ಮೀ. ನಡೆದುಕೊಂಡು ಶಾಲೆಗೆ ಬರಬೇಕಿದೆ. ಕ್ಷೇತ್ರದ ಶಾಸಕರು ಇನ್ನಾದರೂ ಲಿಂಗದೊಡ್ಡಿ ಗ್ರಾಮದಲ್ಲಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೋರ್‌ವೆಲ್‌ ಕೆಟ್ಟು ಹೋಗಿದ್ದು, ಶಾಲೆಗೆ, ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲು ತಾಲೂಕು ಪಂಚಾಯಿತಿ ಹಾಗೂ ಕೊತ್ತದೊಡ್ಡಿ ಗ್ರಾಮ ಪಂಚಾಯಿತಿಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಈವರೆಗೆ ಸ್ಪಂದಿಸಿಲ್ಲ.
ಗಿರಿಜಮ್ಮ,
ಶಾಲಾ ಮುಖ್ಯ ಶಿಕ್ಷಕಿ

ಬೋರ್‌ವೆಲ್‌ ಕೆಟ್ಟಿದ್ದು, ದುರಸ್ತಿ ಮಾಡಿಸಲು ಯಾರಿಗೆ ಕೇಳಬೇಕು ಎನ್ನುವುದೇ ಗೊತ್ತಿಲ್ಲ. ವಿದ್ಯುತ್‌ ಇಲ್ಲದಾಗ ಕತ್ತಲಲ್ಲೇ ಜೀವನ ನಡೆಸಬೇಕು. ಆರೋಗ್ಯದಲ್ಲಿ ಸಮಸ್ಯೆ ಆದಾಗ ನಡೆದುಕೊಂಡು ಅರಕೇರಾ ಆಸ್ಪತ್ರೆಗೆ ಹೋಗಬೇಕು.
ಹನುಮಂತ್ರಾಯ, ಗ್ರಾಮಸ್ಥ

ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದೇನೆ. ಲಿಂಗನದೊಡ್ಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೌಲಭ್ಯ ಒದಗಿಸಲು ಸೂಚನೆ ನೀಡುತ್ತೇನೆ.
ವೆಂಕಟೇಶ ಗಲಗ,
ಪ್ರಭಾರಿ ತಾಪಂ ಇಒ

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.