ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು, ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದೆ

Team Udayavani, Jan 16, 2021, 5:11 PM IST

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ದೇವದುರ್ಗ: ನಾರಾಯಣಪುರ ಬಲದಂಡೆ ನೀರಾವರಿ ಸೌಲಭ್ಯ ಬಳಿಕ ತಾಲೂಕಿನಾದ್ಯಂತ ಅಕ್ರಮ ಮದ್ಯ, ಮಟ್ಕಾ ಹಾವಳಿ ಹೆಚ್ಚಾಗಿದೆ. ಇದರಿಂದ ಪೊಲೀಸ್‌ ಮತ್ತು ಅಬಕಾರಿ ಇಲಾಖೆಗೆ ನಿತ್ಯ ಸಾರ್ವಜನಿಕರು ಹಾಕುವ ಶಾಪ, ಆಕ್ರೋಶ ಮಾತ್ರ ತಪ್ಪದಂತಾಗಿದೆ. ಪಟ್ಟಣ ಸೇರಿ ತಾಲೂಕಿನಾದ್ಯಂತ ಗ್ರಾಮೀಣ ಭಾಗದಲ್ಲಿ ಮಟ್ಕಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.

ಹೋಟೆಲ್‌, ಪಾನ್‌ಶಾಪ್‌, ಕಿರಾಣಿ ಅಂಗಡಿ ಸೇರಿದಂತೆ ಎಲ್ಲೆಂದರಲ್ಲಿ ಮಟ್ಕಾ ಬರೆಯುವವರ ಸಂಖ್ಯೆ ಹೆಚ್ಚಿದೆ. ಸಂಜೆಯಾಗುತ್ತಿದ್ದಂತೆ ಮಟ್ಕಾ ದಂಧೆ ಜೋರಾಗಿ ನಡೆಯುತ್ತಿದೆ. ಬಡವರು, ಕೂಲಿ ಕಾರ್ಮಿಕರು ದುಡಿದ ಹಣವನ್ನೆಲ್ಲ ಮಟ್ಕಾಕ್ಕೆ ಸುರಿದು ಬೀದಿಗೆ ಬರುತ್ತಿದ್ದು ಅವರ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುತ್ತಿವೆ. ಈ ಬಗ್ಗೆ ಗ್ರಾಮದ ಮುಖಂಡರು ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗುತ್ತಿವೆ.

ಮದ್ಯಕ್ಕೆ ದುಪ್ಪಟ್ಟು ದರ: ಸರ್ಕಾರ ಮದ್ಯ ಮಾರಾಟ ಅಂಗಡಿಗಳಿಗೆ ಪರವಾನಗಿ ನೀಡಿದೆ. ಆದರೆ ಪಟ್ಟಣ ಸೇರಿ ಜಾಲಹಳ್ಳಿ, ಗಬ್ಬೂರು, ಅರಕೇರಾ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು, ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ಸಾಗಿದ್ದು ಕುಡುಕರ ಹಾವಳಿ ಹೆಚ್ಚಾಗಿದೆ.ಇನ್ನು ಕುಟುಂಬಗಳಲ್ಲಿ ನೆಮ್ಮದಿಯೇ ಇಲ್ಲವಾಗಿದೆ. ಬಾರ್‌ಗಳಿಂದ ಹಳ್ಳಿಗಳಿಗೆ ಮದ್ಯ ವ್ಯಾಪಕವಾಗಿ
ಸಾಗಿಸಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ದರಕ್ಕೆ ಮಾರಲಾಗುತ್ತಿದೆ ಎನ್ನುವ ಆರೋಪಗಳು  ದಟ್ಟವಾಗಿವೆ.

ಮಾನ್ವಿಯಲ್ಲಿ ಕಚೇರಿ: ದೇವದುರ್ಗ ಪಟ್ಟಣದಲ್ಲಿ ಅಬಕಾರಿ ಕಚೇರಿ ಇಲ್ಲ. ಬದಲಾಗಿ ಮಾನ್ವಿ ತಾಲೂಕಿನಲ್ಲಿ ಅಬಕಾರಿ ಕಚೇರಿ ಇರುವುದರಿಂದ ಅಕ್ರಮ ಮದ್ಯ ಮಾರಾಟಕ್ಕೆ ಭಯವೇ ಇಲ್ಲದಂತಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಪಟ್ಟಣದ ಮದ್ಯದಂಗಡಿಗಳಿಗೆ ಭೇಟಿ ನೀಡಿ ಹೋಗುತ್ತಾರೆ. ಆದರೆ ಗ್ರಾಮೀಣ
ಪ್ರದೇಶದತ್ತ ತಿರುಗಿಯೂ ನೋಡುತ್ತಿಲ್ಲ ಎನ್ನುತ್ತಾರೆ ಗ್ರಾಮೀಣರು.

ಪೆಟ್ರೋಲ್‌ ಹಾವಳಿ: ಮಟ್ಕಾ, ಅಕ್ರಮ ಮದ್ಯ ಮಾರಾಟ ಒಂದೆಡೆಯಾದರೆ ಇನ್ನೊಂದೆಡೆ ಅಕ್ರಮ ಪೆಟ್ರೋಲ್‌ ಮಾರಾಟ ಹಾವಳಿ ಕೂಡ ಜನರಿಗೆ ತಲೆನೋವಾಗಿದೆ. ಅಂಗಡಿ, ಪಾನಶಾಪ್‌ ಮುಂದೆ ರಾಜಾರೋಷವಾಗಿ ಪೆಟ್ರೋಲ್‌ ಮಾರಲಾಗುತ್ತಿದೆ. ಮಾರಾಟಕ್ಕೆ ಅ ಧಿಕೃತ ಪರವಾನಗಿ ಇಲ್ಲದಿದ್ದರೂ ವ್ಯಾಪಾರ ಮಾತ್ರ ಜೋರಾಗಿಯೇ ನಡೆಯುತ್ತಿದೆ. ಪೆಟ್ರೋಲ್‌ ಮಾರಾಟದಿಂದ ಪಟ್ಟಣದಲ್ಲಿ ಬೆಂಕಿ ಅವಘಡ ಘಟನೆ ನಡೆದು ಪ್ರಾಣ ಕಳೆದುಕೊಂಡ ನೋವು ಇನ್ನೂ ಜನರ ಸ್ಮೃತಿ ಪಟಲದಿಂದ ದೂರಾಗುವ ಮುನ್ನವೇ ಮತ್ತೆ ಈ ದಂಧೆ ಅವ್ಯಾಹತವಾಗಿ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷ್ಣಾನದಿ ದಂಡೆ ಗ್ರಾಮಗಳಲ್ಲಿ ಜೂಜಾಟ ಕೂಡ ವ್ಯಾಪಕವಾಗಿ ನಡೆಯುತ್ತಿದ್ದು, ಇವೆಲ್ಲ ಅಕ್ರಮಗಳಿಗೆ ಯಾವಾಗ ಕಡಿವಾಣ ಬೀಳುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

ಪಟ್ಟಣ ಸೇರಿ ತಾಲೂಕಿನಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಡಿವಾಣ ಹಾಕಬೇಕು. ಅಕ್ರಮ ಮಟ್ಕಾ, ಜೂಜಾಟ, ಮದ್ಯ ಮರಾಟದ ದಂಧೆಗಳಿಗೆ ಕಡಿವಾಣ ಹಾಕಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಹೆಡೆಮುರಿ ಕಟ್ಟಬೇಕು.
ನರಸಣ್ಣ ನಾಯಕ ರೈತ ಸಂಘದ ಅಧ್ಯಕ್ಷ, ಜಾಲಹಳ್ಳಿ

ಅಕ್ರಮ ಮದ್ಯ ಮಾರಾಟದ ಬಗ್ಗೆ ಹಲವು ಪ್ರಕರಣ ದಾಖಲು ಮಾಡಲಾಗಿದೆ. ಸಾರ್ವಜನಿಕರಿಂದ ದೂರು ಬಂದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚಿನ ದರ ಮಾರಾಟದ ಬಗ್ಗೆ ಕ್ರಮ ವಹಿಸಲಾಗುತ್ತದೆ.
ಬಸವರಾಜ ಕಾಕರಗಲ್‌, ಅಬಕಾರಿ ಸಿಪಿಐ

ನಾನು ಇತ್ತೀಚಿಗೆ ಅಧಿಕಾರ ವಹಿಸಿಕೊಂಡಿದ್ದೇನೆ. ಅಕ್ರಮ ಕುರಿತು ದೂರುಗಳು ಬಂದಲ್ಲಿ ಕ್ರಮ ವಹಿಸಲಾಗುತ್ತದೆ. ಪೊಲೀಸ್‌ ಇಲಾಖೆಗೆ ಸಾರ್ವಜನಿಕರ ಸಹಕಾರ ಅಗತ್ಯ.
ಸಣ್ಣಮನಿ, ಪೊಲೀಸ್‌ ಇನ್ಸ್‌ಸ್ಪೆಕ್ಟರ್‌

*ನಾಗರಾಜ ತೇಲ್ಕರ್

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.