ಮತ್ತೆ ಅಧಿಕಾರಿ ಮೇಲೆ ಶಾಸಕ ಶಿವನಗೌಡ ದರ್ಪ
ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ಗೆ ಅವಾಚ್ಯ ಪದಗಳಿಂದ ನಿಂದನೆ
Team Udayavani, May 17, 2022, 10:39 PM IST
ರಾಯಚೂರು: ಹಿಂದೊಮ್ಮೆ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿ ವಿವಾದ ಸೃಷ್ಟಿಸಿಕೊಂಡಿದ್ದ ದೇವದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ ಈಗ ಮತ್ತೊಬ್ಬ ಅಧಿಕಾರಿಯನ್ನು ಅದೇ ಮಾದರಿಯಲ್ಲಿ ನಿಂದಿಸಿರುವ ಹಳೆಯ ಆಡಿಯೋ ವೈರಲ್ ಆಗಿದೆ.
ತಾವು ಹೇಳಿದಂತೆ ನಡೆದುಕೊಂಡಿಲ್ಲ ಎನ್ನುವ ಕಾರಣಕ್ಕೆ ಕರೆ ಮಾಡಿ ಅಧಿಕಾರಿಗೆ ಅವಾಚ್ಯ ಪದದಿಂದ ನಿಂದಿಸಿದ್ದಾರೆ. ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಆಗಿದ್ದ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಅಸಾಂವಿಧಾನಿಕ ಪದಗಳನ್ನು ಬಳಸಿದ್ದಾರೆ. ಇದು ನಾಲ್ಕು ತಿಂಗಳು ಹಿಂದಿನ ಆಡಿಯೋ ಎನ್ನಲಾಗುತ್ತಿದ್ದು, ಈಗ ಅಧಿಕಾರಿ ಕೂಡ ಆ ಹುದ್ದೆಯಲ್ಲಿಲ್ಲ.
ಆಡಿಯೋದಲ್ಲೇನಿದೆ?: 1400 ಕೋಟಿ ರೂ. ಕಾಮಗಾರಿಗೆ ಸಂಬಂಧಿಸಿದ ಬಿಲ್ ಪಾಸ್ ಮಾಡಿರುವ ವಿಚಾರದ ಬಗ್ಗೆ ಮಾತನಾಡಿರುವ ಶಿವನಗೌಡ, ನನ್ನ ಗಮನಕ್ಕೆ ತಾರದೆ ಹೇಗೆ ಬಿಲ್ ಪಾಸ್ ಮಾಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಐದು ನಿಮಿಷಗಳ ಅವಧಿ ಇರುವ ಆಡಿಯೋದಲ್ಲಿ, ಅಧಿಕಾರಿ ಮಾತ್ರ ತಾಳ್ಮೆಯಿಂದಲೇ ಪ್ರತ್ಯುತ್ತರ ನೀಡಿದ್ದಾರೆ. ಶಾಸಕ ಬೈಯ್ಯುವಾಗ ಆ ರೀತಿ ಬೈಬೇಡಿ, ಸರಿಯಾಗಿ ಮಾತನಾಡಿ ಎಂದು ಮಾತ್ರ ಪ್ರತಿಕ್ರಿಯಿಸಿದ್ದಾರೆ. ನಾನು ಬಂದು ಕೇವಲ ಒಂದು ತಿಂಗಳಾಗಿದೆ. ನೀವು ಹಿಂದೆ ಸೂಚನೆ ನೀಡಿದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿ ಸಮಜಾಯಿಷಿ ನೀಡಿದರೂ ಶಾಸಕರು ಕೇಳುವ ವ್ಯವಧಾನ ತೋರಿಲ್ಲ.
ಹಿಂದೆ ಕೂಡ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಇದೇ ರೀತಿ ನಿಂದಿಸಿದ ಪರಿಣಾಮ ದೊಡ್ಡ ವಿವಾದವಾಗಿತ್ತು. ಸರ್ಕಾರಿ ನೌಕರರೆಲ್ಲ ಪ್ರತಿರೋಧ ವ್ಯಕ್ತಪಡಿಸಿ ಆಗ ಉಸ್ತುವಾರಿ ಸಚಿವರಾಗಿದ್ದ ವೆಂಕಟರಾವ್ ನಾಡಗೌಡರಿಗೆ ದೂರು ನೀಡಿದ್ದರು. ಅಧಿಕಾರಿ ಇಂಥ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ ವರ್ಗಾವಣೆ ಮಾಡುವಂತೆ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ