ಸಿಸಿ ಕ್ಯಾಮೆರಾ ಅಳವಡಿಕೆ ನನೆಗುದಿಗೆ

ಅಪರಾಧ ಕೃತ್ಯ ಪತ್ತೆಗೆ ಪೊಲೀಸರ ಹೆಣಗಾಟಮಹನೀಯರ ಪ್ರತಿಮೆಗಳಿಗಿಲ್ಲ ರಕ್ಷಣೆ

Team Udayavani, Feb 15, 2020, 1:42 PM IST

15-February-16

ದೇವದುರ್ಗ: ಪಟ್ಟಣದಲ್ಲಿ ಅಪರಾಧ ಕೃತ್ಯಗಳ ಮೇಲೆ ನಿಗಾ ವಹಿಸಲು, ಮಹಾನ್‌ ನಾಯಕರ ಪ್ರತಿಮೆಗಳಿಗೆ ಅಪಮಾನಿಸುವ ಕೃತ್ಯ ತಡೆಗಾಗಿ ಪ್ರಮುಖ ವೃತ್ತ, ಮಹಾನ್‌ ನಾಯಕರು ಇರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂಬ ಯೋಜನೆ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.

ಪುರಸಭೆ ಹಿಂದಿನ ಮುಖ್ಯಾಧಿಕಾರಿ μರೋಜ್‌ಖಾನ್‌ ಪಟ್ಟಣದ ಪ್ರಮುಖ ವೃತ್ತ, ಮಹಾನ್‌ ನಾಯಕರ ಪ್ರತಿಮೆಗಳು ಇರುವೆಡೆ ಸಿಸಿ ಕ್ಯಾಮೆರಾ ಅಳವಡಿಕೆಗೆ ಮುಂದಾಗಿದ್ದರು. ಇದಕ್ಕಾಗಿ ಅನುದಾನ ಸಹ ಬಿಡುಗಡೆಯಾಗಿತ್ತು. ಟೆಂಡರ್‌ ಪ್ರಕ್ರಿಯೆ ಆರಂಭಿಸಬೇಕೆನ್ನುವಷ್ಟರಲ್ಲಿ ಮುಖ್ಯಾಧಿಕಾರಿ ವರ್ಗಾವಣೆಗೊಂಡರು. ನಂತರ ಬಂದ ಅಧಿಕಾರಿಗಳು ಈ ಬಗ್ಗೆ ಚಿಂತನೆ ಮಾಡದ್ದರಿಂದ ಸಿಸಿ ಕ್ಯಾಮೆರಾ ಅಳವಡಿಕೆ ಕನಸಾಗೇ ಉಳಿದಿದೆ.

ಪಟ್ಟಣದ ಪ್ರಮುಖ ವೃತ್ತ, ಪ್ರತಿಮೆ ಇರುವೆಡೆ ಮತ್ತು ಜನದಟ್ಟಣೆ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಅದರ ಮೇಲೆ ನಿಗಾ ವಹಿಸುವ ವ್ಯವಸ್ಥೆಯನ್ನು ಸಿಪಿಐ ಕಚೇರಿಯಲ್ಲಿ ಸ್ಥಾಪಿಸುವ ಬಗ್ಗೆ ಚಿಂತನೆ ಮಾಡಲಾಗಿತ್ತು. ಇದುವರೆಗೆ ಈ ಪ್ರಕ್ರಿಯೆಗೆ ಚಾಲನೆ ದೊರೆತಿಲ್ಲ.

ಪ್ರತಿಮೆಗಳಿಗೆ ಅವಮಾನ: ಈ ಹಿಂದೆ ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿನ ಪ್ರತಿಮೆ ಕೈಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಚೊಂಬು ಇಟ್ಟ ಪರಿಣಾಮ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಪದೇ ಪದೇ ಇಂತಹ ಕೃತ್ಯ ತಡೆಗೆ ಪ್ರಮುಖ ವೃತ್ತ, ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂಬ ಕೂಗು ಎದ್ದಿತ್ತು. ಈಗಲೂ ಎಲ್ಲೇ ಮಹಾನ್‌ ನಾಯಕರ ಪ್ರತಿಮೆಗೆ ಅವಮಾನ ಮಾಡಿದರೂ ಸಿಸಿ ಕ್ಯಾಮೆರಾ ಅಳವಡಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಆದರೆ ಇದು ಅಧಿಕಾರಸ್ಥರ ಕಿವಿಗೆ ಬೀಳುತ್ತಿಲ್ಲ.

ತಾತ್ಕಾಲಿಕ ಸಿಸಿ ಕ್ಯಾಮೆರಾ: ಇನ್ನು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಟ್ಟರಕಟ್ಟಿ, ಗಾಂಧಿ ವೃತ್ತ, ಅಂಬೇಡ್ಕರ್‌ ವೃತ್ತ ಮತ್ತು ಇತರೆಡೆ ಪೊಲೀಸ್‌ ಇಲಾಖೆ ತಾತ್ಕಾಲಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ನಿಗಾ ವಹಿಸುತ್ತದೆ. ಇದರಿಂದ ಗಣೇಶೋತ್ಸವದಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಸಾಧ್ಯವಾಗಿದೆ.

ಅಪರಾಧ ತಡೆಗೆ ಸಹಕಾರಿ: ಪಟ್ಟಣದ ಪ್ರಮುಖ ವೃತ್ತ, ರಸ್ತೆಗಳಲ್ಲಿ, ಪ್ರತಿಮೆಗಳಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇಟ್ಟಲ್ಲಿ ಅಪರಾಧ ಕೃತ್ಯ ಮತ್ತು ಕಿಡಿಗೇಡಿಗಳ ಕೃತ್ಯ,
ಮತ್ತು ಅಪಘಾತ ಘಟನೆಗಳ ಮೇಲೆ ನಿಗಾ ವಹಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸಹಕಾರಿ ಆಗಲಿದೆ. ಪಟ್ಟಣದಲ್ಲಿ ಒಂದೇ ಬೈಕ್‌ ನಲ್ಲಿ ಮೂವರು ಸಂಚರಿಸುವುದು, ಸಣ್ಣಪುಟ್ಟ ಅಹಿತಕರ ಘಟನೆಗಳು, ಅಂಗಡಿಗಳಲ್ಲಿ ಕಳ್ಳತನ ಪ್ರಕರಣ ನಡೆಯುತ್ತಲೇ ಇರುತ್ತವೆ. ಇಂತಹ ಕೃತ್ಯಗಳ ತಡೆಗೆ ಸಿಸಿ ಕ್ಯಾಮೆರಾ ಅಳವಡಿಕೆ ಅಗತ್ಯವಾಗಿದೆ. ಈ ದಿಶೆಯಲ್ಲಿ ಪುರಸಭೆ ಮತ್ತು ಪೊಲೀಸ್‌ ಇಲಾಖೆ ಮುಂದಾಗಬೇಕು. ಪಟ್ಟಣದಲ್ಲಿರುವ ಮಹನಿಯರ ಪ್ರತಿಮೆಗಳಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಅಧಿಕಾರಿಗಳು ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಬಸವ ಕೇಂದ್ರ ನಗರ ಘಟಕ ಅಧ್ಯಕ್ಷ ಬಸವರಾಜ ಕೊಪ್ಪರ, ಛಲುವಾದಿ ಮಹಾಸಭಾ ಮುಖಂಡ ಲಿಂಗಪ್ಪ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರಮುಖ ಸ್ಥಳ, ವೃತ್ತಗಳಲ್ಲಿ ಪುರಸಭೆ ಅನುದಾನದಲ್ಲಿ ಸಿಸಿ ಕ್ಯಾಮೆರಾ
ಅಳವಡಿಕೆಗೆ ಚಿಂತನೆ ಇದೆ. ಈ ಕುರಿತು ಸಿಪಿಐ ಜತೆ ಚರ್ಚಿಸಲಾಗಿದೆ. ವಾರದಲ್ಲಿ ಪ್ರಕ್ರಿಯೆ
ಆರಂಭಿಸಲಾಗುವುದು.
ತಿಮ್ಮಪ್ಪ ಜಗ್ಲಿ
ಪುರಸಭೆ ಮುಖ್ಯಾಧಿಕಾರಿ

ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ. ಪುರಸಭೆ ಅಧಿಕಾರಿಗಳ ಜತೆ ಚರ್ಚಿಸಿ ಮಹನೀಯರ ಪ್ರತಿಮೆ ಇರುವೆಡೆ ಸಿಸಿ ಕ್ಯಾಮೆರಾ ಅಳವಡಿಸಿ, ಕಚೇರಿಯಲ್ಲಿ ನಿಗಾವಹಿಸಲು ವ್ಯವಸ್ಥೆ ಮಾಡಲಾಗುತ್ತದೆ.
ಆರ್‌.ಎಂ. ನದಾಫ್‌
ಸಿಪಿಐ, ದೇವದುರ್ಗ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.