22 ಆರ್‌ಒ ಪ್ಲಾಂಟ್ ಬಂದ್‌

ಖಾಸಗಿ ಏಜೆನ್ಸಿಯಿಂದ ಒಂದು ಕೊಡಕ್ಕೆ 3 ರೂ. ಬದಲಿಗೆ 5 ರೂ. ವಸೂಲಿ

Team Udayavani, Mar 7, 2020, 1:11 PM IST

7-March-07

ದೇವದುರ್ಗ: ಪಟ್ಟಣ ಸೇರಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರು ಒದಗಿಸಲು ತಾಲೂಕಿನಾದ್ಯಂತ 100 ಶುದ್ಧ ನೀರು ಘಟಕ ಸ್ಥಾಪಿಸಲಾಗಿದೆ. ಆದರೆ ನಿರ್ವಹಣೆ ಇಲ್ಲದೇ ಕೆಲವೆಡೆ ಬಂದ್‌ ಆಗಿದ್ದು, ಗ್ರಾಮಸ್ಥರು ಕೊಳವೆಬಾವಿ, ಕೆರೆ ಇಲ್ಲವೇ ಕಾಲುವೆ ನೀರನ್ನು ಸೇವಿಸುವಂತಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ 100 ಘಟಕಗಳಲ್ಲಿ 22 ಘಟಕ ದುರಸ್ತಿಗೀಡಾಗಿವೆ. 50 ಘಟಕಗಳ ನಿರ್ವಹಣೆಯನ್ನು ಆರ್‌ಪಿಇ ಖಾಸಗಿ ಏಜೆನ್ಸಿಗೆ ವಹಿಸಲಾಗಿದೆ. ಇದರಲ್ಲೂ ನಿರ್ವಹಣೆ ಕೊರತೆಯಿಂದ ಕೆಲವು ಬಂದ್‌ ಆಗಿವೆ ಎನ್ನಲಾಗಿದೆ.

20ಕ್ಕೂ ಹೆಚ್ಚು ಘಟಕಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸಲಾಗಿದೆ. ಶುದ್ಧ ನೀರು ಘಟಕ ನಿರ್ವಹಣೆಗೆ ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿಗೆ ವಾರ್ಷಿಕ 3 ಸಾವಿರ ರೂ. ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿಗೆ ವಹಿಸಿದ ಘಟಕಗಳನ್ನು ಖಾಸಗಿ ಏಜೆನ್ಸಿಗೆ ನಿರ್ವಹಣೆಗೆ ನೀಡಲು ಟೆಂಡರ್‌ ಪ್ರಕ್ರಿಯೆ ಆರಂಭಿಸಿದ್ದರೂ ಯಾರೊಬ್ಬರು ನಿರ್ವಹಣೆಗೆ ಮುಂದೆ ಬರುತ್ತಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ನಿರ್ವಹಣೆ ವಹಿಸಲಾಗಿದೆ.

ಗ್ರಾಮಗಳಲ್ಲಿ 5 ರೂಪಾಯಿಗೆ ಒಂದು ಕೊಡ ಶುದ್ಧ ನೀರು ಒದಗಿಸಲಾಗುತ್ತಿದೆ. ಇನ್ನು ತೀವ್ರತರ ಆರ್ಸೆನಿಕ್‌, ಫ್ಲೋರೈಡ್‌ ಅಂಶವಿರುವ ಪಲಕನಮರಡಿ, ವಂದಲಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಶುದ್ಧ ನೀರು ಘಟಕ ಸ್ಥಾಪಿಸಿದ್ದು, ಸಿಬ್ಬಂದಿ ನೇಮಕ ಮಾಡಿ ಗ್ರಾಮಸ್ಥರಿಗೆ ಉಚಿತವಾಗಿ ಶುದ್ಧ ನೀರು ಒದಗಿಸಲಾಗುತ್ತಿದೆ. ಇನ್ನು ಬಹುತೇಕ ಗ್ರಾಮಗಳಲ್ಲಿ ಗ್ರಾಮೀಣ ಜನರಿಗೆ ಅನಾನುಕೂಲಕರ ಸ್ಥಳದಲ್ಲಿ ಘಟಕ ಸ್ಥಾಪಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಎಲ್ಲೆಲ್ಲಿ ನಿರುಪಯುಕ್ತ?
ತಾಲೂಕಿನ ನಿಲವಂಜಿ, ಗಣಜಿಲಿ, ಊಟಿ, ವಂದಲಿ, ಪಲಕನಮರಡಿ, ಕ್ಯಾದಿಗೇರಾ, ತುಗ್ಲೇರದೊಡ್ಡಿ, ಎಚ್‌.ಎನ್‌.ತಾಂಡಾ ಸೇರಿ ಇತರೆ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೆ ನಿರ್ವಹಣೆ ಮತ್ತು ತಾಂತ್ರಿಕ ಸಮಸ್ಯೆಯಿಂದ 22 ಘಟಕಗಳು ನಿರುಪಯುಕ್ತವಾಗಿವೆ. ಹೀಗಾಗಿ ಈ ಗ್ರಾಮಗಳ ಜನತೆ ಕೊಳವೆಬಾವಿ ನೀರು ಸೇವಿಸುವಂತಾಗಿದೆ. ನಿರುಪಯುಕ್ತ ಘಟಕಗಳನ್ನು ದುರಸ್ತಿ ಮಾಡಿ ಆರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಫ್ಲೋರೈಡ್‌ ಅಂಶವಿರುವ ನೀರು ಸೇವನೆ
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದರಿಂದ ಕೊಳವೆಬಾವಿಗಳ ಆರ್ಸೆನಿಕ್‌, ಫ್ಲೋರೈಡ್‌ ಅಂಶವಿರುವ ನೀರನ್ನೇ ಗ್ರಾಮಸ್ಥರು ಸೇವಿಸಬೇಕಿತ್ತು. ಇದರಿಂದ ಗ್ರಾಮಸ್ಥರು ಕೀಲು ನೋವು ಇತರೆ ಸಮಸ್ಯೆ ಎದುರಿಸುವಂತಾಗಿತ್ತು. ಆಗಿನ ಸಚಿವ ಎಚ್‌.ಕೆ.ಪಾಟೀಲ ತಮ್ಮ ಅವಧಿಯಲ್ಲಿ ವಂದಲಿ, ಪಲಕನಮರಡಿ, ಸುಣ್ಣದಕಲ್‌, ಊಟಿ, ಮಂಡಲಗುಡ್ಡ ಸೇರಿ ಇತರೆ ಗ್ರಾಮಗಳಲ್ಲಿ ಶುದ್ಧ, ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ಗ್ರಾಮಸ್ಥರಿಗೆ ಅನುಕೂಲವಾಗಿತ್ತು. ದಿನ ಕಳೆದಂತೆ ಈ ಘಟಕಗಳು ನಿರ್ವಹಣೆ ಕೊರತೆಯಿಂದಾಗಿ ಬಂದ್‌ ಆಗಿವೆ. ಬೇಸಿಗೆ ಆರಂಭವಾಗಿದ್ದು, ಇಲ್ಲಿನ ಗ್ರಾಮಸ್ಥರು ಮೂರು ತಿಂಗಳ ಕಾಲ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಖಾಸಗಿ ಏಜೆನ್ಸಿಯಿಂದ ಸಮರ್ಪಕವಾಗಿ ಶುದ್ಧ ನೀರು ಘಟಕ ನಿರ್ವಹಣೆ ಆಗುತ್ತಿದೆ. ಗ್ರಾಮ ಪಂಚಾಯಿತಿಗೆ ವಹಿಸಿದ ಘಟಕಗಳಿಗೆ ಜಿಲ್ಲಾ ಪಂಚಾಯತಿಯಿಂದ ವರ್ಷಕ್ಕೆ ಮೂರು ಸಾವಿರ ರೂ. ಅನುದಾನ ನೀಡಲಾಗುತ್ತಿದೆ. ದುರಸ್ತಿಗೀಡಾದ ಘಟಕಗಳನ್ನು ಪುನಾರಂಭಿಸಲು ಕ್ರಮ ವಹಿಸಲಾಗುವುದು.
ವೆಂಕಟೇಶ ಗಲಗ,
ತಾಪಂ ಪ್ರಭಾರಿ ಅಧಿಕಾರಿ

ಹೆಚ್ಚು ಹಣ ವಸೂಲಿ
ತಾಲೂಕಿನಾದ್ಯಂತ 50 ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹೊಣೆಯನ್ನು ಆರ್‌ಪಿಇ ಖಾಸಗಿ ಏಜೆನ್ಸಿಗೆ ವಹಿಸಲಾಗಿದೆ. ಸರ್ಕಾರದ ನಿಯಮದಂತೆ ಒಂದು ಕೊಡಕ್ಕೆ 3 ರೂ. ವಸೂಲಿ ಮಾಡಬೇಕು. ಆದರೆ ಒಂದು ಕೊಡಕ್ಕೆ 5 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಈ ಕುರಿತು ಗ್ರಾಮಸ್ಥರು ಖಾಸಗಿ ಏಜೆನ್ಸಿ ವಿರುದ್ಧ, ದೂರು ನೀಡಿದ್ದಾರೆ. ಅಧಿಕಾರಿಗಳು 3 ರೂ. ಪಡೆಯುವಂತೆ ತಾಕೀತು ಮಾಡಿದ್ದರೂ ಖಾಸಗಿ ಏಜೆನ್ಸಿಯವರು ಕೇಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.