ತಾಪಂ ಅಧ್ಯಕ್ಷರ ವಿರುದ್ಧ ಸದಸ್ಯರ ಅಸಮಾಧಾನ

ಲಿಂಕ್‌ ಡಾಕುಮೆಂಟ್‌ ಯೋಜನೆಯ 73.87 ಲಕ್ಷ ರೂ. ಕ್ರಿಯಾಯೋಜನೆ

Team Udayavani, Jan 25, 2020, 3:08 PM IST

25-January-15

ದೇವದುರ್ಗ: ತಾಲೂಕು ಪಂಚಾಯಿತಿ ಲಿಂಕ್‌ ಡಾಕುಮೆಂಟ್‌ ಯೋಜನೆಯ ಅನುದಾನ 73.87 ಲಕ್ಷ ರೂ.ಗಳ ಕ್ರಿಯಾ ಯೋಜನೆಯನ್ನು ಸದಸ್ಯರ ಗಮನಕ್ಕೆ ತಾರದೇ ಅಧ್ಯಕ್ಷರು ರೂಪಿಸಿದ್ದಾರೆ ಎಂದು ಕಾಂಗ್ರೆಸ್‌ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಿಂಕ್‌ ಡಾಕುಮೆಂಟ್‌ ಯೋಜನೆಯಡಿ 73.87 ಲಕ್ಷ ರೂ. ಮೊತ್ತದ ಕ್ರಿಯಾಯೋಜನೆ ತಯಾರಿ ವೇಳೆ ಕಾಂಗ್ರೆಸ್‌ ಸದಸ್ಯರ ಕ್ಷೇತ್ರಗಳನ್ನು ಕಡೆಗಣಿಸಿ ಬಿಜೆಪಿ ಸದಸ್ಯರ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ.

ಕ್ರಿಯಾಯೋಜನೆ ತಯಾರಿಸುವಾಗ ತಾಪಂ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಆರೂಪಿಸಬೇಕು. ಆದರೆ ತಾಪಂ ಅಧ್ಯಕ್ಷ ಹನುಮಂತ ಕಟ್ಟಿಮನಿ ಕಾಂಗ್ರೆಸ್‌ ಸದಸ್ಯರ ಗಮನಕ್ಕೇ ತಾರದೇ ಕ್ರಿಯಾಯೋಜನೆ ರೂಪಿಸಿದ್ದಾರೆ. ಈ ಕ್ರಿಯಾಯೋಜನೆ ರದ್ದು ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಕೆಲ ಸದಸ್ಯರು ಮುಂದಾಗಿದ್ದಾರೆ ಎನ್ನಲಾಗಿದೆ.

73.87 ಲಕ್ಷ ರೂ. ಅನುದಾನ: ತಾಲೂಕು ಪಂಚಾಯಿತಿ 2019-20ನೇ ಸಾಲಿನ ಲಿಂಕ್‌ ಡಾಕುಮೆಂಟ್‌ ಯೋಜನೆಯಡಿ 73.87 ಲಕ್ಷ ರೂ. ಅನುದಾನವನ್ನು ಸರಕಾರದ ವಿವಿಧ ಇಲಾಖೆ ಕಟ್ಟಡಗಳ ಸಣ್ಣಪುಟ್ಟ ದುರಸ್ತಿಗಾಗಿ ಮೀಸಲಿಡಲಾಗಿದೆ. ಸೇರ್ಪಡೆ ಮತ್ತು ಮಾರ್ಪಾಡಿಗಾಗಿ ಶಿಕ್ಷಣ ಇಲಾಖೆಗೆ 26 ಲಕ್ಷ ರೂ. ಸರಕಾರಿ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿಗೆ 6 ಲಕ್ಷ 37 ಸಾವಿರ. ಪರಿಶಿಷ್ಟ ಪಂಗಡ ಮೆಟ್ರಕ್‌ ನಂತರ ಸರಕಾರಿ ವಿದ್ಯಾಭ್ಯಾಸ ವಸತಿ ನಿಲಯಗಳ ಅಭಿವೃದ್ಧಿಗೆ 16.50 ಲಕ್ಷ ರೂ. ಮೀಸಲಿದೆ. ಬಿಸಿಎಂ ವಸತಿ ನಿಲಯಕ್ಕೆ 6 ಲಕ್ಷ 20 ಸಾವಿರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 9 ಲಕ್ಷ 60 ಸಾವಿರ, ರಸ್ತೆ ಮತ್ತು ಸಣ್ಣಪುಟ್ಟ ಸಿಡಿ ನಿರ್ಮಾಣಕ್ಕೆ 8 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ.

ಯಾವ ಕಾಮಗಾರಿ: ಲಿಂಕ್‌ ಡಾಕುಮೆಂಟ್‌ ಅನುದಾನದಲ್ಲಿ ಶಿಥಿಲಗೊಂಡ ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ ಕಟ್ಟಡಗಳ ದುರಸ್ತಿ, ಸುಣ್ಣಬಣ್ಣ, ಕುಡಿಯುವ ನೀರಿನ ಸೌಕರ್ಯ ಒದಗಿಸುವುದು. ವಸತಿ ನಿಲಯಗಳ ನಿರ್ವಹಣೆ, ಸುಣ್ಣಬಣ್ಣ, ಸಣ್ಣಪುಟ್ಟ ದುರಸ್ತಿ, ಗ್ರಾಮಗಳಲ್ಲಿ ಕಿತ್ತಿ ಹೋದ ರಸ್ತೆಗಳಿಗೆ ಮರಂ ಹಾಕಲು, ಸಿಡಿಗಳ ನಿರ್ಮಾಣಕ್ಕೆ ಅನುದಾನ ಬಳಸಬಹುದಾಗಿದೆ. ಈ ಹಿಂದೆ ತಾಪಂ ಸಾಮಾನ್ಯ ಸಭೆಯಲ್ಲಿ ಲಿಂಕ್‌ ಡಾಕುಮೆಂಟ್‌ ಅನುದಾನವನ್ನು ಎಲ್ಲ ಸದಸ್ಯರ ಕ್ಷೇತ್ರಕ್ಕೆ ಮೀಸಲಿಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್‌ ಸದಸ್ಯರ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಕ್ರಿಯಾಯೋಜನೆ ರೂಪಿಸಬೇಕೆಂದು ಕಾಂಗ್ರೆಸ್‌ ಸದಸ್ಯರು ಆಗ್ರಹಿಸಿದ್ದಾರೆ.

ಲಿಂಕ್‌ ಡಾಕುಮೆಂಟ್‌ ಅನುದಾನ ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಬಳಸಲಾಗುತ್ತಿದೆ. ಎಲ್ಲ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ. ಇಲ್ಲಿ ಯಾರನ್ನೂ ಕಡೆಗಣಿಸಿಲ್ಲ.
. ಹಾಲಸಿದ್ದಪ್ಪ ಪೂಜೇರಿ,
ತಾಪಂ ಇಒ

ಸದಸ್ಯರ ಗಮನಕ್ಕೆ ತರದೇ ಶಾಸಕರ ಆಪ್ತರ ಸೂಚನೆಯಂತೆ ಅಧ್ಯಕ್ಷರೇ ಏಕಪಕ್ಷೀಯ ನಿರ್ಧಾರದಿಂದ ಕ್ರಿಯಾಯೋಜನೆ ರೂಪಿಸಿದ್ದಾರೆ. ಕಾಂಗ್ರೆಸ್‌ ಸದಸ್ಯರ ಕ್ಷೇತ್ರಗಳನ್ನು ಕಡೆಗಣಿಸಿ ತಾರತಮ್ಯ ನೀತಿ ಅನುಸರಿಸಿದ್ದಾರೆ.
.ಗೋವಿಂದರಾಜ ನಾಯಕ,
ಕೊತ್ತದೊಡ್ಡಿ ತಾ.ಪಂ ಸದಸ್ಯ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.