ಶಿಕ್ಷಣ ಇಲಾಖೆಯಲ್ಲಿ ಹುದ್ದೆ ಖಾಲಿ

ಸಿಆರ್‌ಪಿಗಳಿಗೆ ಎರಡ್ಮೂರು ಕ್ಲಸ್ಟರ್‌ ಹೊಣೆ 500ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಅತಿಥಿ ಶಿಕ್ಷಕರಿಗೆ ಗೌರವಧನ ವಿಳಂಬ

Team Udayavani, Jan 16, 2020, 12:19 PM IST

16-January-7

ದೇವದುರ್ಗ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕೆಲ ಹುದ್ದೆಗಳು ಖಾಲಿ ಇರುವುದರಿಂದ ಒಬ್ಬೊಬ್ಬ ಸಿಆರ್‌ಪಿಗಳಿಗೆ ಎರಡ್ಮೂರು ಕ್ಲಸ್ಟರ್‌ ಹೊಣೆ ವಹಿಸಲಾಗಿದೆ. ಇದರಿಂದ ಆಯಾ ಕ್ಲಸ್ಟರ್‌ ಮಟ್ಟದ ಶಾಲೆಗಳ ಚಟುವಟಿಕೆ ಕುರಿತು ಅಧಿಕಾರಿಗಳಿಗೆ ಸಕಾಲಕ್ಕೆ ಮಾಹಿತಿ ಒದಗಿಸಲು ಆಗುತ್ತಿಲ್ಲ. ಮತ್ತು ಅತಿಥಿ ಶಿಕ್ಷಕರಿಗೆ ಸಕಾಲಕ್ಕೆ ಗೌರವಧನವೂ ಪಾವತಿ ಆಗುತ್ತಿಲ್ಲ ಎನ್ನಲಾಗಿದೆ.

ದೇವದುರ್ಗ ಪಟ್ಟಣ ಸೇರಿ ತಾಲೂಕಿನಾದ್ಯಂತ 25 ಕ್ಲಸ್ಟರ್‌ಗಳಿವೆ. 25 ಕ್ಲಸ್ಟರ್‌ಗಳಿಗೆ ಸಿಆರ್‌ ಪಿಗಳು ಇದ್ದರು. ಆದರೆ ಅವಧಿ ಮುಗಿದ 16 ಜನ ಸಿಆರ್‌ಪಿಗಳನ್ನು ತೆಗೆದು ಹಾಕಿದ್ದರಿಂದ ಸದ್ಯ 9 ಜನ ಸಿಆರ್‌ಪಿಗಳಿದ್ದಾರೆ. ಒಬ್ಬೊಬ್ಬರಿಗೆ ಎರಡ್ಮೂರು ಕ್ಲಸ್ಟರ್‌ ವಹಿಸಲಾಗಿದೆ. ದಿಕ್ಕಿಗೊಂದು ಕ್ಲಸ್ಟರ್‌ಗಳು ಇರುವ ಕಾರಣ ಸಿಆರ್‌ಪಿಗಳು ಶಾಲೆಗೆ ಭೇಟಿ ನೀಡಿ ಮುಖ್ಯಶಿಕ್ಷಕರಿಂದ ಸಕಾಲಕ್ಕೆ ಮಾಹಿತಿ ಪಡೆಯಲು ಆಗುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಕ್ಷಣವೇ ಮಾಹಿತಿ ನೀಡುವಂತೆ ಒತ್ತಡ ಹೇರಿದಾಗ ಸಿಆರ್‌ಪಿಗಳು ಕ್ಲಸ್ಟರ್‌ಗಳಿಗೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬೇರೆ ತಾಲೂಕಿನಲ್ಲಿ ಅವಧಿ ಮುಗಿದ ಸಿಆರ್‌ಪಿಗಳನ್ನೇ ಮುಂದುವರಿಸಲಾಗಿದ್ದು, ದೇವದುರ್ಗ ತಾಲೂಕಿನಲ್ಲಿ ಮಾತ್ರ ತೆಗೆದು ಹಾಕಿದ್ದರಿಂದ ಇರುವ 9 ಸಿಆರ್‌ಪಿಗಳಿಗೆ ಹೆಚ್ಚುವರಿ ಹೊರೆ ಬಿದ್ದಿದೆ.

ಮಾಹಿತಿ ವಿಳಂಬ: ಸರಕಾರಿ ಶಾಲೆಯ ಪ್ರತಿಯೊಂದು ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಬೇಕಿದೆ. ಶಾಲೆಯಿಂದ ಹೊರಗುಳಿದ ಮಕ್ಕಳು, ಬಿಸಿಯೂಟ, ಸಮವಸ್ತ್ರ, ಸೈಕಲ್‌ ವಿತರಣೆ, ಕ್ಷೀರಭಾಗ್ಯ, ಶಿಷ್ಯವೇತನಕ್ಕೆ ಅರ್ಹರಾದ ಮಕ್ಕಳ ಮಾಹಿತಿಯನ್ನು ಮುಖ್ಯ ಶಿಕ್ಷಕರಿಂದ ಪಡೆಯಲು ಸಿಆರ್‌ಪಿಗಳು ಹರಸಾಹಸ ಪಡಬೇಕಿದೆ.

ಅತಿಥಿ ಶಿಕ್ಷಕರಿಗೆ ವೇತನವಿಲ್ಲ: ಸರಕಾರಿ ಶಾಲೆಯಲ್ಲಿ 500ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಪ್ರತಿವರ್ಷ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷ ನೇಮಕವಾದ ಅತಿಥಿ ಶಿಕ್ಷಕರಿಗೆ ಆರೇಳು ತಿಂಗಳಿಂದ ಗೌರವಧನ ಪಾವತಿಸಿಲ್ಲ. ಹೀಗಾಗಿ ಅತಿಥಿ ಶಿಕ್ಷಕರು ಗೌರವಧನ ಪಾವತಿಸುವಂತೆ ನಿತ್ಯ ಕಚೇರಿಗೆ ಅಲೆಯುವಂತಾಗಿದೆ.

ಹುದ್ದೆಗಳು ಖಾಲಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕೆಲ ಹುದ್ದೆಗಳು ಖಾಲಿ ಇವೆ. ಗೆಜೆಟೆಡ್‌ ಮ್ಯಾನೇಜರ್‌, ಎರಡು ಮೇಲ್ವಿಚಾರಕರು, ಎರಡು ಜನ ಎಫ್‌ಡಿಎ, ಎಸ್‌ಡಿಎ ಒಂದು ಹುದ್ದೆ ಖಾಲಿ ಇದೆ. ಹೀಗಾಗಿ ಶಿಕ್ಷಕರ ಕೆಲಸ ಕಾರ್ಯ, ಶಾಲೆಯ ಕಡತಗಳ ವಿಲೇವಾರಿಗೆ ಹಿನ್ನಡೆ ಆಗುತ್ತಿದೆ. ಹುದ್ದೆ ಭರ್ತಿಗೆ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಸರ್ಕಾರ ಭರ್ತಿಗೆ ಮುಂದಾಗದಿರುವುದು ಸಮಸ್ಯೆ ಕಾರಣವಾಗಿದೆ.

ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಸರಕಾರ ಅನುದಾನ ಬಿಡುಗಡೆ
ಮಾಡಿಲ್ಲ. ಅವಧಿ  ಮುಗಿದ ಸಿಆರ್‌ಪಿಗಳಿಗೆ ನಿಯೋಜನೆಗೊಂಡ ಶಾಲೆಗೆ ತೆರಳುವಂತೆ ಆದೇಶ ಹೊಡಿಸಲಾಗಿದೆ. ಇದ್ದವರಿಗೆ ಹೆಚ್ಚುವರಿ ಕ್ಲಸ್ಟರ್‌ ಗಳ ಜವಾಬ್ದಾರಿ ನೀಡಲಾಗಿದೆ.
ಡಾ| ಎಸ್‌.ಎಂ.ಹತ್ತಿ,
ಕ್ಷೇತ್ರ ಶಿಕ್ಷಣಾಧಿಕಾರಿ

ನಮ್ಮ ಕ್ಲಸ್ಟರ್‌ ಜವಾಬ್ದಾರಿ ವಹಿಸಿಕೊಂಡ ಸಿಆರ್‌ಪಿ ಮುಖವನ್ನೇ ನೋಡಿಲ್ಲ. ದೂರವಾಣಿ ಮೂಲಕವೇ ಪ್ರತಿಯೊಂದು ಮಾಹಿತಿ ನೀಡುವಂತೆ ಕೇಳುತ್ತಿದ್ದಾರೆ.
.ಹೆಸರು ಹೇಳಲು ಇಚ್ಚಿಸದ
ಮುಖ್ಯ ಶಿಕ್ಷಕ

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.