ಕೊರೊನಾ ಸೋಂಕಿತರು ಕಂಡು ಬಂದರೆ ಮಾಹಿತಿ ನೀಡಿ: ಬನದೇಶ


Team Udayavani, Mar 15, 2020, 5:21 PM IST

15-March-32

ದೇವದುರ್ಗ: ಕೊರೊನಾ ಸೋಂಕು ಹಬ್ಬುವುದನ್ನು ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಇದು ಹರಡದಂತೆ ಎಚ್ಚರಿಕೆ ವಹಿಸಲು ತಾಲೂಕಿನ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆ ವೈದ್ಯರು ವಿದೇಶದಿಂದ ಬರುವ ಹಾಗೂ ಶಂಕಿತ ವ್ಯಕ್ತಿಗಳ ಕುಟುಂಬ, ಪ್ರದೇಶದಿಂದ ಬರುವ ರೋಗಿಗಳ ಬಗ್ಗೆ ಕೂಡಲೇ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ ವೈದ್ಯರಿಗೆ ವಿಡಿಯೋ ಕಾನ್ಫ್ರೆನ್ಸ್‌ ನಡೆಸಿ ಅವರು ಮಾತನಾಡಿದರು. ವಿದೇಶದಿಂದ ಬರುವವರು ಮತ್ತು ಭಾರತದಿಂದ  ದೇಶಕ್ಕೆ ಹೋಗಿ ಬರುವವರ ಬಗ್ಗೆ ಎಚ್ಚರದಿಂದಿರಬೇಕು. ಆದ್ದರಿಂದ ಅಂತಹ ವ್ಯಕ್ತಿಗಳು ತಾಲೂಕಿನ ಯಾವುದೇ ವೈದ್ಯರ ಬಳಿ ಚಿಕಿತ್ಸೆಗೆ ಬಂದಾಗ ಅವರ ಪ್ರವಾಸದ ಇತಿಹಾಸ ತಿಳಿದುಕೊಳ್ಳಬೇಕು. ಒಂದು ವೇಳೆ ಅಂತಹ ಪ್ರದೇಶದಿಂದ ಬಂದಿದ್ದರೆ ಅಥವಾ ಕೊರೊನಾಕ್ಕೆ ತುತ್ತಾದ ಪ್ರದೇಶ ಅಥವಾ ಕುಟುಂಬದ ಸಂಬಂಧ ಹೊಂದಿರುವ ವ್ಯಕ್ತಿಗಳು ಬಂದಿದ್ದರೆ, ಕೂಡಲೇ ಮಾಹಿತಿ ನೀಡಬೇಕು. ಅವರನ್ನು ಪರೀಕ್ಷೆಗೊಳಪಡಿಸಿ 14 ದಿನದವರೆಗೆ ನಿಗಾ ವಹಿಸಲಾಗುತ್ತದೆ. ಅಂತಹ ಯಾವುದೇ ಲಕ್ಷಣಗಳು ಕಂಡುಬಂದರೆ ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ಸೇರಿಸಲಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕರಿಗೆ, ಮಕ್ಕಳಿಗೆ ಮಾಸ್ಕ್ ಅವಶ್ಯಕತೆಯಿಲ್ಲ: ಕೊರೊನಾ ಸೋಂಕಿನ ಭಯದಿಂದ ಜನ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವಂತೆ ಹೇಳಲಾಗುತ್ತಿದೆ. ಆದರೆ ಆರೋಗ್ಯದಿಂದ ಇರುವ ಯಾರಿಗೂ ಮಾಸ್ಕ್ ಅವಶ್ಯಕತೆ ಇಲ್ಲ. ಶಾಲಾ ಮಕ್ಕಳಿಗೂ ಇದರ ಅಗತ್ಯವಿಲ್ಲ. ವೈದ್ಯರು ಹಾಗೂ ಸಿಬ್ಬಂದಿ ಮಾತ್ರ ತಮ್ಮ ಆರೋಗ್ಯ ರಕ್ಷಣೆಗಾಗಿ ಇವುಗಳನ್ನು ಉಪಯೋಗಿಸಬೇಕೆಂದು ಸ್ಪಷ್ಟಪಡಿಸಿದರು. ಒಂದು ವೇಳೆ ಮಾಸ್ಕ್ ಉಪಯೋಗಿಸಿದರೆ ಅದು ಕೇವಲ 8 ಗಂಟೆ ಮಾತ್ರ ಉಪಯೋಗಿಸಬೇಕು. ಹೆಚ್ಚಿನ ಅವಧಿ ಉಪಯೋಗಿಸಿದರೆ ಅದರಿಂದ ಅಡ್ಡ ಪರಿಣಾಮಗಳು ಬೀರುತ್ತವೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಉಹಾ-ಪೋಹಗಳಿಂದ ಜನರು ಭಯ ಭೀತರಾಗಿದ್ದಾರೆ, ಜನರು ಭಯ ಪಡುವ ಅಗತ್ಯವಿಲ್ಲ. ದೇವದುರ್ಗ ತಾಲೂಕಿನಲ್ಲಿ ಯಾರಲ್ಲೂ ಕೊರೊನಾ ಸೋಂಕು ಕಂಡುಬಂದಿಲ್ಲ. ಆದ್ದರಿಂದ ಜನ ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದರು.

ಸ್ವಚ್ಛತೆ ಕಾಪಾಡಿ: ಪ್ರತಿ ಬಾರಿ ಕೈ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ಕಚೇರಿ ಅಥವಾ ಮನೆಯ ವಸ್ತುಗಳನ್ನು ಸಹ ಸ್ವತ್ಛವಾಗಿರಿಸಿಕೊಳ್ಳಬೇಕು ಎಂದರು. ಯಾವುದೇ ವ್ಯಕ್ತಿಯ ಬಗೆ ಶಂಕೆ ವ್ಯಕ್ತಪಡಿಸಿ ರೋಗಕ್ಕೆ ತುತ್ತಾಗಿದ್ದಾರೆಂದು ಹೇಳುವ ಅಧಿಕಾರ ವೈದ್ಯರು, ಖಾಸಗಿ ವ್ಯಕ್ತಿಗಳಿಗಿಲ್ಲ. ಅಂತಹ ವ್ಯಕ್ತಿ ಕಂಡುಬಂದರೆ ತಾಲೂಕು ಆರೋಗ್ಯ ಇಲಾಖೆ ಸೋಂಕಿತರನ್ನು ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಿದೆ. ಅವರನ್ನು ಪರೀಕ್ಷಿಸಿದ ನಂತರ ನಂತರ ಜಿಲ್ಲಾಧಿ ಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ| ಎಚ್‌.ಎ. ನಾಡಗೌಡ, ಪ್ರಧಾನ ಕಾರ್ಯದರ್ಶಿ ಡಾ| ಮಂಜುನಾಥ, ವೈದ್ಯರಾದ ಡಾ| ಬಸವರಾಜ, ಡಾ| ನಾಗರಾಜ, ಡಾ| ನರೇಂದ್ರ ಪಾಟೀಲ, ಡಾ| ಗಿರಿಜಾ, ಡಾ| ಗಿರೀಶ, ಡಾ| ದೇವರಾಜ ದೇಸಾಯಿ, ಡಾ|ಬಸನಗೌಡ ಗಬ್ಬೂರು, ಡಾ| ನಿರ್ಮಲಾ, ಡಾ| ಅಶೋಕ ಇತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.