ಭವನ ಬವಣೆ: ಉದ್ಘಾಟನೆ ನನೆಗುದಿಗೆ-ಕಾಮಗಾರಿ ಅಪೂರ್ಣ
Team Udayavani, Feb 15, 2020, 12:18 PM IST
ದೇವದುರ್ಗ: ಪಟ್ಟಣದಲ್ಲಿ ಈಗಾಗಲೇ ನಿರ್ಮಾಣವಾಗಿರುವ ಬಾಬು ಜಗಜೀವನರಾವ್ ಭವನ ಉದ್ಘಾಟನೆಗೆ ಕಾಯುತ್ತಿದ್ದರೆ, ಅವಧಿ ಮುಗಿದರೂ ಬಂಜಾರ ಭವನ ಕಾಮಗಾರಿ ಅಪೂರ್ಣವಾಗಿಯೇ ಉಳಿದಿದೆ.
ಪಟ್ಟಣದ ಹೊರವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರದಲ್ಲಿ ನಿರ್ಮಿಸಲಾದ ಬಾಬು ಜಗಜೀವನರಾವ್ ಸಮುದಾಯ ಭವನದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಆದರೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿಲ್ಲ. ಕಾಮಗಾರಿ ಪೂರ್ಣವಾಗಿ ಮೂರ್ನಾಲ್ಕು ತಿಂಗಳಾದರೂ ಇಲ್ಲಿವರೆಗೆ ಉದ್ಘಾಟನೆ ಮಾಡಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸಮುದಾಯ ಭವನ ಕಡೆ ಕಣ್ಣೆತ್ತಿ ನೋಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಕಿಡಿಗೇಡಿಗಳ ಕಾಟಕ್ಕೆ ಕಟ್ಟಡ ಹಾಳಾಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಗೊಂಡು ಭವನ ಉದ್ಘಾಟಿಸಿ ಕಾರ್ಯಕ್ರಮಗಳಿಗೆ ಅನುಕೂಲು ಮಾಡಬೇಕು ಎಂದು ಸಮುದಾಯವರು ಆಗ್ರಹಿಸಿದ್ದಾರೆ.
ಬಂಜಾರ ಭವನ: ಪಟ್ಟಣದ ಯಲ್ಲಾಲಿಂಗ ಕಾಲೋನಿಯಲ್ಲಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಂಜಾರ ಸಮುದಾಯ ಭವನದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಆರಂಭದಲ್ಲಿ ವೇಗವಾಗಿ ಸಾಗಿದ ಕಾಮಗಾರಿ ದಿನಗಳು ಕಳೆಯುತ್ತಿದ್ದಂತೆ ನಿಧಾನಗತಿಯಲ್ಲಿ ಸಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಕೆಲಸ ನಿಲ್ಲಿಸಲಾಗಿದೆ.
ಟೆಂಡರ್ ನಿಯಮದ ಪ್ರಕಾರ ಈಗಾಗಲೇ ಅವಧಿ ಮುಗಿದಿದೆ. ಆದರೆ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಲು ಹಿಂದೇಟು ಹಾಕಿದ ಕಾರಣಕ್ಕೆ ಭವನದ ಕಾಮಗಾರಿ ಅಪೂರ್ಣವಾಗಿದೆ. ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ಸ್ಥಳೀಯ ಶಾಸಕ ಕೆ.ಶಿವನಗೌಡ ನಾಯಕ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆದರೆ ಅಧಿಕಾರಿಗಳು ವಿಳಂಬ ನೀತಿ ತಾಳಿದ ಪರಿಣಾಮ ಬಂಜಾರ ಸಮುದಾಯ ಭವನ ಸಮಾಜದವರಿಗೆ ಅನಾನೂಕೂಲವಾಗಿದೆ.
ಸಣ್ಣಪುಟ್ಟ ಕಾಮಗಾರಿ ಭಾಕಿ ಇದೆ. ಶೌಚಾಲಯ ನಿರ್ಮಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಿ ಸಮಾಜದವರಿಗೆ ಅನುಕೂಲು ಮಾಡಲಾಗುತ್ತದೆ.
ಬಸವರಾಜ, ಪಿಡಬ್ಲ್ಯೂಡಿ ಜೆಇ
ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದೇನೆ. ಸಂಬಂಧಪಟ್ಟ ಸಿಆರ್ಪಿಯಿಂದ ಮಾಹಿತಿ ಪಡೆದು ಪರಿಶೀಲಿಸಿ ಕ್ರಮ ವಹಿಸಲಾಗುವುದು.
ಆರ್. ಇಂದಿರಾ,
ಕ್ಷೇತ್ರ ಶಿಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!