ದೇವೇಗೌಡರಿಗಿದೆ ರೈತರ ಜೀವನ ಹಸನುಗೊಳಿಸಿದ ಕೀರ್ತಿ

ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಬಾಕಿ ಇರುವ ಅಧಿಕಾರದ ಅವಧಿ ಯಲ್ಲಿ ಪ್ರಯತ್ನಿಸಲಾಗುವುದು

Team Udayavani, Apr 25, 2022, 5:57 PM IST

ದೇವೇಗೌಡರಿಗಿದೆ ರೈತರ ಜೀವನ ಹಸನುಗೊಳಿಸಿದ ಕೀರ್ತಿ

ಮಾನ್ವಿ: ರೈತರ ಜಮೀನುಗಳಿಗೆ ಕಾಲುವೆ ಮೂಲಕ ನೀರು ಕಲ್ಪಿಸುವಲ್ಲಿ ಪ್ರಮುಖ ಪಾತ್ರವಹಿಸುವ ನೀರಾವರಿ ಇಲಾಖೆಗೆ ಅಧಿಕಾರಿಗಳ ಹಾಗೂ ಗ್ಯಾಂಗ್‌ ಮ್ಯಾನ್‌ ಗಳ ಕೊರತೆ ಇರುವುದರಿಂದ ಅನಧಿಕೃತ ನೀರಾವರಿಯನ್ನು ತಡೆಯುವಲ್ಲಿ ವಿಫಲ ಆಗಿರುವುದರಿಂದ ಕೆಳಭಾಗದ ರೈತರ ಜಮೀನುಗಳಿಗೆ ನೀರು ದೊರೆಯದೇ ಕೃಷಿ ಕ್ಷೇತ್ರ ಹಿನ್ನಡೆ ಆಗಿದೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದರು.

ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಜನತಾ ಜಲಧಾರೆ ಮೂರನೇ ದಿನದ ರಥಯಾತ್ರೆಯಲ್ಲಿ ಮಾತನಾಡಿ, ಕೇವಲ ನಾಲ್ಕು ವರ್ಷದಲ್ಲಿ ತಾಲೂಕಿನ ಸಂಪೂರ್ಣವಾದ ಅಭಿವೃದ್ದಿಗೆ ಶ್ರಮಿಸಿದ್ದೇನೆ ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು.ರಾಜ್ಯ ಸರಕಾರಕ್ಕೆ ರೈತರ ಮೇಲೆ ಕಾಳಜಿ ಇಲ್ಲ. ಆದ್ದರಿಂದ 2023ರ ಚುನಾವಣೆಯಲ್ಲಿ ರೈತರು ವಿರೋಧ ಪಕ್ಷಗಳಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಪೋತ್ನಾಳ ಹಾಗೂ ಕಲ್ಲೂರು ಗ್ರಾಮಕ್ಕೆ ಬಸ್‌ ನಿಲ್ದಾಣಕ್ಕೆ 2 ಕೋಟಿ ಮಂಜೂರಾಗಿದೆ. ಪಟ್ಟಣದಲ್ಲಿ ಎಲ್‌ ಇಡಿ ಬೀದಿ ದೀಪಗಳ ವ್ಯವಸ್ಥೆ, ತಾಲೂಕಿನಲ್ಲಿ ಕೋಮುಸೌಹಾರ್ದತೆ ಮೂಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಭಾಗದ ರೈತರಿಗೆ ಎರಡು ಬೆಳೆಗೆ ನೀರು ಕೊಟ್ಟಿದೇವೆ.  ಈ ಭಾಗದಲ್ಲಿನ ಅನೇಕ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಬಾಕಿ ಇರುವ ಅಧಿಕಾರದ ಅವಧಿ ಯಲ್ಲಿ ಪ್ರಯತ್ನಿಸಲಾಗುವುದು. ಐಸಿಸಿ ಸಭೆಯಲ್ಲಿ ಹೋರಾಟ ಮಾಡುವ
ಮೂಲಕ ಕೆಳಭಾಗದ ರೈತರಿಗೆ ನೀರು ತಲುಪುವಂತೆ ಮಾಡಿದ್ದೇನೆ. ರೈತರ ಋಣ ತೀರಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿಯೂ ಮತದಾರರು ಪಕ್ಷವನ್ನು ಆಶೀರ್ವದಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರು ಅಂದು ಮುಖ್ಯಮಂತ್ರಿಗಳಾಗಿದ್ದಾಗ ಜಿಲ್ಲೆಯಲ್ಲಿ ಕೃಷ್ಣ ನದಿ ಹಾಗೂ ತುಂಗಭದ್ರ ನದಿಗಳನ್ನು ಬಳಸಿಕೊಂಡು ಅನೇಕ ನೀರಾವರಿ ಯೋಜನೆಗಳನ್ನು ತರುವ ಮೂಲಕ ರೈತರ ಜೀವನವನ್ನು ಹಸನು ಮಾಡುವ ಸಂಕಲ್ಪ ಮಾಡಿದ್ದರು. ಅವರ ಕನಸಿನ ಕೂಸು ಜನತಾ ಜಲಧಾರೆ ಕಾರ್ಯಕ್ರಮವಾಗಿದೆ ಎಂದರು. ತಾಲೂಕು ಜೆಡಿಎಸ್‌ ಅಧ್ಯಕ್ಷ ಟಿ.ಮಲ್ಲಿಕಾರ್ಜುನ ಬಲ್ಲಟಗಿ, ರಾಜ್ಯ ಜೆಡಿಎಸ್‌ ಯುವ ಘಟಕದ ಉಪಾಧ್ಯಕ್ಷರಾದ ರಾಜಾ ರಾಮಚಂದ್ರ ನಾಯಕ, ಜಿಲ್ಲಾ ಹಿಂದುಳಿದ ಜೆಡಿಎಸ್‌ ಅಧ್ಯಕ್ಷ ಜಂಬುನಾಥ ಯಾದವ, ಪುರಸಭೆ ಸದಸ್ಯರಾದ ಶರಣಪ್ಪ ಮೆದಾ, ಬಸಮ್ಮ, ವನಿತಾ, ಹನುಮಂತಪ್ಪ ಭೋವಿ, ಖಲೀಲ ಖುರೇಷಿ, ನಾಗರಾಜ ಭೋಗವತಿ, ಪಿ.ರವಿಕುಮಾರ್‌, ಸಂತೋಷ ಹೂಗಾರ, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ವಿಜಯಲಕ್ಷ್ಮೀ, ಮಹಿಳಾ ಘಟಕದ ಉಪಾಧ್ಯಕ್ಷೆ ನೀಲಮ್ಮ, ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಇದ್ದರು. ತಾಲೂಕಿನ ನೀರಮಾನ್ವಿ,
ಕಲ್ಲೂರು ಗ್ರಾಮಗಳಲ್ಲಿ ಜನತಾ ಜಲಧಾರೆ ರಥಯಾತ್ರೆ ನಡೆಯಿತು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.