ತಂತ್ರಜ್ಞಾನ ಬಳಸಿ ಜನಪದ ಕಲೆ ಬೆಳೆಸಿ


Team Udayavani, Jan 29, 2018, 4:05 PM IST

vij-6.jpg

ರಾಯಚೂರು: ಜನಪದ ನಾಶವಾಗುತ್ತಿದೆ ಎಂಬುದು ಸುಳ್ಳು. ಸಂದರ್ಭಕ್ಕೆ ತಕ್ಕಂತೆ ಅದು ಬದಲಾಗಬಹುದೇ ವಿನಃ ಅವನತಿಯಾಗುವುದಿಲ್ಲ ಎಂಬುದು ಸತ್ಯ. ತಂತ್ರಜ್ಞಾನ ಬಳಸಿಕೊಂಡು ಜನಪದ ಕಲೆಯನ್ನು ಜನರ ಬಾಗಿಲಿಗೆ ಮುಟ್ಟುವಂತೆ ಮಾಡಬೇಕಿದೆ ಎಂದು ಹಿರಿಯ ಜನಪದ ಕಲಾವಿದ ಶಂಭು ಬಳಿಗಾರ ಹೇಳಿದರು.

ಕನ್ನಡ ಜಾನಪದ ಪರಿಷತ್‌ನಿಂದ ನಗರದ ಪಂ. ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರವಿವಾರ ಆಯೋಜಿಸಿದ್ದ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಹಾಗೂ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಒಂದರ್ಥದಲ್ಲಿ ಜನಪದ ಕಲೆಯನ್ನು ಮೊದಲಿಗಿಂತ ಜನರಿಗೆ ತಲುಪಿಸುವುದು ಈಗ ಸುಲಭವಾಗಿದೆ. ಯಾವ ತಂತ್ರಜ್ಞಾನದಿಂದ ಜನಪದ ಕಲೆಗೆ ಹಿನ್ನಡೆಯಾಗಿದೆಯೋ ಅದೇ ತಂತ್ರಜ್ಞಾನ ಬಳಸುವ ಮೂಲಕ ಈ ಕಲೆಯನ್ನು ಬೆಳೆಸುವ ಅನಿವಾರ್ಯತೆ ಇದೆ ಎಂದರು.

ಸಂಸದ ಬಿ.ವಿ. ನಾಯಕ ಮಾತನಾಡಿ, ಗತ ವೈಭವವನ್ನು ಹಾಡುಗಳಲ್ಲಿ ಕಟ್ಟಿಕೊಡುತ್ತಿದ್ದ ಜಾನಪದ ಕಲೆ ಇಂದು ನಶಿಸುತ್ತಿದೆ. ಅದನ್ನು ಜೀವಂತವಾಗಿ ಇಡಬೇಕಾದರೆ ಇಂಥ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಜಾನಪದ ಸಾಹಿತ್ಯ ಪ್ರಾಚೀನ ಕಲೆಯಾಗಿದೆ. ಮೊದಲೆಲ್ಲ ರಾಜಮನೆತನಗಳ ವೈಭವಗಳನ್ನು ಲಾವಣಿ, ಗೀಗಿ ಪದಗಳಲ್ಲಿ ಕಟ್ಟಿ ಹಾಡಲಾಗುತ್ತಿತ್ತು. ಅವು ಬಾಯಿಂದ ಬಾಯಿಗೆ ಹರಡುವ ಮೂಲಕ ಪ್ರಸಿದ್ಧಿ ಪಡೆಯುತ್ತಿದ್ದವು. ಈ ಪದಗಳಿಗೆ ಭಾಷೆ ಇರಲಿಲ್ಲ. ಹೀಗಾಗಿ ಅವುಗಳನ್ನು ಸಂಗ್ರಹಿಸಿಡಲು ಆಗಿಲ್ಲ. ಆದ್ದರಿಂದ ಅವುಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು ಎಂದರು.

ತಂತ್ರಜ್ಞಾನ ಬೆಳೆದಂತೆಲ್ಲ ಕಲೆಗಳು ಮರೆಯಾಗುತ್ತಿವೆ. ಯುವಕರು ಹೆಚ್ಚಾಗಿ ವಿದ್ಯುನ್ಮಾನ ಮಾಧ್ಯಮಗಳಿಗೆ
ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಜನಪದ ಕಲೆಗಳು ಅಸ್ತಿತ್ವ ಕಳೆದುಕೊಳ್ಳುತ್ತಿವೆ. ಇಂಥ ಸಮ್ಮೇಳನಗಳು
ಹೆಚ್ಚಾಗಬೇಕು ಎಂದರು.

ಸಮ್ಮೇಳನ ಉದ್ಘಾಟಿಸಿದ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್‌.ಎಸ್‌.ಬೋಸರಾಜ್‌ ಮಾತನಾಡಿ, ಹಿಂದುಳಿದ ಜಿಲ್ಲೆಯಲ್ಲಿ ಇಂಥ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಕಾರ್ಯ ಎಂದರು.
 
ಪರಿಷತ್‌ ರಾಜ್ಯ ಕಾರ್ಯಾಧ್ಯಕ್ಷ ಎಸ್‌.ಬಾಲಾಜಿ ಮಾತನಾಡಿ, ಇಂದು ಕಲಾವಿದರ ಬುದಕು ಸಾಕಷ್ಟು ಕಷ್ಟದಲ್ಲಿದೆ. ಸರ್ಕಾರ ಕಲಾವಿದರಿಗೆ 1500 ರೂ. ಮಾಸಾಶನ ನೀಡುತ್ತಿದೆ. ಆದರೆ, ಅಷ್ಟು ಹಣದಲ್ಲಿ ಜೀವನ ಸಾಗಿಸುವುದು ಕಷ್ಟಕರ. ಹೀಗಾಗಿ ಕನಿಷ್ಠ ಐದು ಸಾವಿರ ರೂ. ಮಾಸಾಶನ ನೀಡಬೇಕು ಎಂದು ಮನವಿ ಮಾಡಿದರು.

ಸಮ್ಮೇಳನದ ಅಧ್ಯಕ್ಷ, ಹಿರಿಯ ಕಲಾವಿದ ಬಸಪ್ಪ ಹೆಗ್ಗಡದಿನ್ನಿ ದಂಪತಿಯನ್ನು ಸನ್ಮಾನಿಸಲಾಯಿತು. ಈ ವೇಳೆ ಬಸಪ್ಪ ಹೆಗ್ಗಡದಿನ್ನಿ ಒಂಭತ್ತು ವಾದ್ಯಗಳನ್ನು ನುಡಿಸಿ, ಗಾಯನ ಮಾಡಿ ನೆರೆದವರನ್ನು ರಂಜಿಸಿದರು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅನೇಕ ಜನಪದ ಕಲಾವಿದರಿಗೆ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪರಿಷತ್‌ ರಾಜ್ಯಾಧ್ಯಕ್ಷ ಟಿ.ಕೆ. ಗೌಡರ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಜಿಪಂ ಅಧ್ಯಕ್ಷ ಆದಿಮನಿ ವೀರಲಕ್ಷ್ಮೀ, ಆರ್‌ಡಿಎ ಅಧ್ಯಕ್ಷ ಅಬ್ದುಲ್‌ ಕರೀಂ, ನಗರಸಭೆ ಸ್ಥಾಯಿ ಸಮಿತಿ ನಿರ್ದೇಶಕ ಗೋಪಾಲಯ್ಯ
ಸೇರಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಚಿತ್ರಕಲೆ ಪ್ರದರ್ಶನ ರಂಗಮಂದಿರದಲ್ಲಿ ಹಮ್ಮಿಕೊಂಡ ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಆಯೋಜಿಸಿದ್ದ ಚಿತ್ರಕಲೆ ಪ್ರದರ್ಶನ ಗಮನ ಸೆಳೆಯಿತು. ಬಹುತೇಕ ಹಳ್ಳಿ ಸೊಗಡಿನ ಚಿತ್ರಣಗಳನ್ನು ಬಿಡಿಸಿದ್ದ ಕಲಾವಿದರು ಕಾರ್ಯಕ್ರಮದ ಮೆರಗು ಹೆಚ್ಚಿಸುವಂತೆ ಮಾಡಿದ್ದರು. ಎಂಎಲ್‌ಸಿ ಎನ್‌.ಎಸ್‌.ಬೋಸರಾಜ್‌ ಚಿತ್ರಕಲೆ ಪ್ರದರ್ಶನ ಉದ್ಘಾಟಿಸಿದರು. ಇನ್ನು ವೇದಿಕೆ ಮೇಲೆಯೂ ಜಾನಪದ ಶೈಲಿ ಅಲಂಕಾರ ಕಣ್ಣು ಕುಕ್ಕುವಂತಿತ್ತು. ಬೆಳಗುವ ಜ್ಯೋತಿಯಿಂದ ಹಿಡಿದು ಎಲ್ಲವನ್ನೂ ಅಪ್ಪಟ ದೇಶೀ ಶೈಲಿಯಲ್ಲಿ ನಿರ್ಮಿಸಲಾಗಿತ್ತು.

ಸಮ್ಮೇಳನ ಎರಡು ದಿನ ನಡೆಯಬೇಕಿತ್ತು ಕಾರ್ಯಕ್ರಮಕ್ಕೆ ಸಿಕ್ಕ ಜನಬೆಂಬಲ ಕಂಡು ಅತಿಥಿಗಳು ಸಂತಸ ವ್ಯಕ್ತಪಡಿಸಿದ್ದಲ್ಲದೇ, ಇದನ್ನು ಒಂದು ದಿನಕ್ಕೆ ಸೀಮಿತೊಳಿಸದೆ ಕನಿಷ್ಠ ಎರಡು ದಿನವಾದರೂ ನಡೆಸಬೇಕಿತ್ತು ಎಂದು ಅಭಿಪ್ರಾಯ ಪಟ್ಟರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಲಾವಿದರು ಆಗಮಿಸಿದ್ದರು. ಎಲ್ಲರಿಂದ ರಂಗಮಂದಿರ
ಭರ್ತಿಯಾಗಿತ್ತು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.