ಶಿಥಿಲಗೊಂಡ ಮನೆ: ಚಿನ್ನ ತೆಗೆವ ಕಾರ್ಮಿಕರ ಜೀವಕ್ಕಿಲ್ಲ ಭದ್ರತೆ


Team Udayavani, Jan 26, 2018, 4:50 PM IST

ray-3.jpg

ಹಟ್ಟಿ ಚಿನ್ನದ ಗಣಿ: ಅಲ್ಲಲ್ಲಿ ಬಿರುಕು ಬಿಟ್ಟ ಗೋಡೆಗಳು, ಮಳೆ ಬಂದರೆ ಸೋರುವ ಸೂರುಗಳು, ಪ್ಲಾಸ್ಟರ್‌ ಕಿತ್ತಿಹೋಗಿ
ಕಾಣುತ್ತಿರುವ ಇಟ್ಟಿಗೆಗಳು, ಕಬ್ಬಿಣದ ಸರಳುಗಳು, ಗೋಡೆಯಲ್ಲೇ ಬೆಳೆದ ಗಿಡಗಳು, ಒಳಚರಂಡಿ ಮ್ಯಾನ್‌
ಹೋಲ್‌ಗ‌ಳಿಂದ ಹೊರಚೆಲ್ಲುವ ಕೊಳಚೆ ನೀರು ಇದು ಇಲ್ಲಿನ ಹಟ್ಟಿ ಚಿನ್ನದ ಗಣಿ ಪ್ರದೇಶ ವ್ಯಾಪ್ತಿಯ ಅಧಿಸೂಚಿತ ಪ್ರದೇಶದ ಗಾಂಧಿನಗರ, ಜತ್ತಿ ಲೈನ್‌, ಗುಂಡೂರಾವ್‌ ಕಾಲೋನಿಗಳಲ್ಲಿನ ಕಾರ್ಮಿಕರ ವಸತಿಗೃಹಗಳ ದುಸ್ಥಿತಿ.

ಭೂಮಿ ಕೆಳಭಾಗದಲ್ಲಿಳಿದು ದೇಹ ದಂಡಿಸಿ ದೇಶಕ್ಕೆ ಚಿನ್ನ ನೀಡುವ ಕಾರ್ಮಿಕರಿಗಾಗಿ ಸುಮಾರು 40 ವರ್ಷಗಳ ಹಿಂದೆ
ಗಾಂಧಿನಗರ, ಜತ್ತಿಲೈನ್‌, ಗುಂಡೂರಾವ್‌ ಕಾಲೋನಿಗಳಲ್ಲಿ 400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಈ
ಮನೆಗಳು ಕಾಲಕಾಲಕ್ಕೆ ಸುಣ್ಣ-ಬಣ್ಣ, ದುರಸ್ತಿ ಕಾಣದ್ದರಿಂದ ಶಿಥಿಲಗೊಂಡಿದ್ದು, ಈಗಲೋ ಆಗಲೋ ಕುಸಿದು ಬೀಳುವ
ಹಂತ ತಲುಪಿದ್ದು, ಚಿನ್ನದ ಗಣಿ ಕಾರ್ಮಿಕರ ಕುಟುಂಬಗಳು ಜೀವಭಯದಲ್ಲೇ ಜೀವನ ಸಾಗಿಸುವಂತಾಗಿದೆ.

ಗುಂಡುರಾವ್‌ ಕಾಲೋನಿಯಲ್ಲಿ 1982ರಲ್ಲಿ ಎರಡು ಅಂತಸ್ತಿನ ಮನೆಗಳ 50 ಬ್ಲಾಕ್‌ಗಳನ್ನು ನಿರ್ಮಿಸಲಾಗಿದೆ.
ಆಗಿನ ಮುಖ್ಯಮಂತ್ರಿ ಆರ್‌. ಗುಂಡೂರಾವ್‌ ಮನೆಗಳನ್ನು ಉದ್ಘಾಟಿಸಿದ್ದಾರೆ. ಆಗಿನಿಂದ ಈವರೆಗೆ ಈ ಮನೆಗಳು ಸುಣ್ಣ ಬಣ್ಣ ಕಂಡಿಲ್ಲ. ಪ್ಲಾಸ್ಟರ್‌ ಕಿತ್ತುಹೋಗಿ ಕಬ್ಬಿಣದ ಸರಳು, ಇಟ್ಟಿಗೆಗಳು ಕಾಣುತ್ತಿವೆ. ಕೆಲವೆಡೆ ಇಟ್ಟಿಗೆಗಳು ಕಿತ್ತು ಬಿದ್ದಿವೆ. ಬಾಗಿಲುಗಳು ತುಕ್ಕು ಹಿಡಿದಿವೆ. ಕಿಟಕಿಯ ಗಾಜುಗಳು ಒಡೆದಿವೆ. ಗೋಡೆಗಳು ಬಿರುಕು ಬಿಟ್ಟು ಉಬ್ಬಿಕೊಂಡು ಪ್ಲಾಸ್ಟರ್‌ ಉದುರಿ ಬೀಳುತ್ತಿದೆ. 

ಯಾವ ಸಮಯದಲ್ಲಿ ಬೀಳುತ್ತವೋ ಎನ್ನುವ ಆತಂಕ ಕಾಡುತ್ತಿದೆ. ಮನೆಗಳ ದುರಸ್ತಿಗೆ ಕ್ರಮ ವಹಿಸಬೇಕಾದ ಹಟ್ಟಿ
ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಜಾಣ ಕುರುಡು ನೀತಿ ಅನುಸರಿಸುತ್ತಿದ್ದಾರೆ.

ಸ್ವತ್ಛತೆ ಮಾಯ: ಪಟ್ಟಣದಲ್ಲಿ ಜತ್ತಿ ಲೈನ್‌, ಗುಂಡುರಾವ್‌ ಕಾಲೋನಿ, ನ್ಯೂ ಎನ್‌ಜಿಆರ್‌ ಕಾಲೋನಿ ಸೇರಿದಂತೆ ನಗರಗಳ ರಸ್ತೆಗಳು ಇಂದಿಗೂ ಡಾಂಬರ್‌ ಕಂಡಿಲ್ಲ. ಕಾರ್ಮಿಕರ ನಗರದಲ್ಲಿ ಸ್ವತ್ಛತೆ ಇಲ್ಲದೆ ಗಬ್ಬೆದ್ದು ನಾರುತ್ತಿವೆ. ಇದರಿಂದ ನಗರದ ನಿವಾಸಿಗಳಿಗೆ ಮಲೇರಿಯಾ, ಡೆಂಘೀ ಸೇರಿ ಸಾಂಕ್ರಾಮಿಕ ಕಾಯಿಲೆಗಳು ಸಾಮಾನ್ಯವಾಗಿದ್ದು, ಕಾರ್ಮಿಕರ ಮತ್ತು ಅವರ ಕುಟುಂಬದವರ ಚಿಕಿತ್ಸೆಗೆ ಚಿನ್ನದ ಗಣಿ ಕಂಪನಿ ಲಕ್ಷಾಂತರ ರೂ. ವ್ಯಯಿಸುತ್ತಿದೆಯಾದರೂ ಕಾರ್ಮಿಕರ ಕಾಲೋನಿಗಳಲ್ಲಿ ಸ್ವತ್ಛತೆ ಕಾಪಾಡಲು ಮುಂದಾಗಿಲ್ಲ.

ಛಾವಣಿ ಸೋರಿಕೆ: ಮಳೆ ಬಂದರೆ ಸಾಕು ಮಳೆ ಕಾರ್ಮಿಕರ ಕಾಲೋನಿಗಳಲ್ಲಿನ ಮನೆಗಳು ಸೋರುತ್ತವೆ. ಮೇಲ್ಛಾವಣಿ ಮತ್ತು ಗೋಡೆಗಳಲ್ಲಿ ಬಿರುಕು ಬಿಟ್ಟಿದ್ದರಿಂದ ಮನೆಗಳು ಸೋರುತ್ತಿವೆ. ಕಾಲೋನಿಯಲ್ಲಿ ಸ್ವತ್ಛತೆ ಇಲ್ಲದ್ದರಿಂದ ವಿಷಜಂತುಗಳ ಹಾವಳಿ ಹೆಚ್ಚಿದೆ ಎಂದು ಕಾರ್ಮಿಕರ ಕಾಲೋನಿ ನಿವಾಸಿಗಳು ಅಳಲು ತೋಡಿಕೊಂಡಿದ್ದು, ಕಾರ್ಮಿಕರ ಮನೆಗಳ ದುರಸ್ತಿ ಹಾಗೂ ಕಾಲೋನಿಗಳಲ್ಲಿ ಸ್ವತ್ಛತೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.