ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲೂ ತಾರತಮ್ಯ


Team Udayavani, Jan 24, 2021, 4:55 PM IST

Discrimination in KKRDB grant allocation

ರಾಯಚೂರು: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ  ಕೆಕೆಆರ್‌ಬಿಡಿ) ಯಿಂದ ಹಂಚಿಕೆಯಾಗುತ್ತಿರುವ ಅನುದಾನದಲ್ಲೂ ತಾರತಮ್ಯದ ಆರೋಪ ಕೇಳಿ ಬರುತ್ತಿದೆ. ಈಗ ಡಾ|ಡಿ.ಎಂ.ನಂಜುಂಡಪ್ಪ ವರದಿಯನ್ವಯ ತಾಲೂಕುವಾರು ಅನುದಾನ ಹಂಚಿಕೆಯಾಗುತ್ತಿದ್ದು, ಇದರಿಂದ ಕೆಲ ಕ್ಷೇತ್ರಗಳಿಗೆ ಅನುದಾನ ಕೊರತೆಯಾಗುತ್ತಿದೆ.

ಸರ್ಕಾರ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಪ್ರಗತಿಗಾಗಿ ಕೆಕೆಆರ್‌ಡಿಬಿ ಆರಂಭಿಸಿದೆ. ಆರಂಭದಲ್ಲಿ ಪ್ರತಿ ವರ್ಷ ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದು, ಈಗ ಅದನ್ನು 1500 ಕೋಟಿಗೆ ಹೆಚ್ಚಿಸಲಾಗಿದೆ. 18 ವರ್ಷಗಳ ಹಿಂದೆ ಅನುಷ್ಠಾನಗೊಂಡ ನಂಜುಂಡಪ್ಪ ವರದಿಯನ್ವಯ ತೀರಾ ಹಿಂದುಳಿದತಾಲೂಕುಗಳ ಸಾಲಿಗೆ ರಾಜ್ಯದಲ್ಲಿ 114 ತಾಲೂಕುಗಳಿದ್ದರೆ; ಉತ್ತರ ಕರ್ನಾಟಕದ 59ಕ್ಕೂ ಅಧಿಕ ತಾಲೂಕುಗಳು ಸೇರಿವೆ.

ಅದರಲ್ಲಿ ಹೈಕ ಭಾಗದಸಾಕಷ್ಟು ಬಹುತೇಕ ತಾಲೂಕುಗಳು ಸೇರಿವೆ. ಅನುದಾನ ಕೂಡ ತಾಲೂಕುವಾರು ಹಂಚಿಕೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ಒಂದೇ ತಾಲೂಕಿನಲ್ಲಿ ನಗರ ಮತ್ತು ಗ್ರಾಮೀಣ ಕ್ಷೇತ್ರಗಳಿರುವುದರಿಂದ ಒಂದೇ ಅನುದಾನ ಎರಡು ಕ್ಷೇತ್ರಗಳಿಗೆ ಹಂಚಿಕೆ ಮಾಡಬೇಕಿದೆ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಬದಲಾದ ಚಿತ್ರಣ: ಎಸ್‌.ಎಂ. ಕೃಷ್ಣ ಸರ್ಕಾರದ ಅವಧಿ ಯಲ್ಲಿ ಡಾ| ನಂಜುಂಡಪ್ಪ ಸಮಿತಿ ಅಧ್ಯಯನ ನಡೆಸಿ ವರದಿ ನೀಡಿತ್ತು.

2 ದಶಕಗಳ ಹಿಂದೆ ಈ ಭಾಗದ ಚಿತ್ರಣ ಬೇರೆಯಾಗಿತ್ತು. ಆದರೀಗ ಸಾಕಷ್ಟು ಸುಧಾರಣೆ ಕಂಡು ಬಂದಿದೆ. ಉದಾಹರಣೆಗೆ ಆಗ ತೀರಾ ಹಿಂದುಳಿದತಾಲೂಕಾಗಿದ್ದ ದೇವದುರ್ಗದಲ್ಲಿ ಎನ್‌ಆರ್‌ಬಿಸಿ, ಟಿಎಲ್‌ಬಿಸಿ ಯೋಜನೆ ವಿಸ್ತರಣೆಯಿಂದ ನೀರಾವರಿ ವಲಯ ಬಲಗೊಂಡಿದೆ.  ರಸ್ತೆ, ಮೂಲ ಸೌಲಭ್ಯ ಸುಧಾರಣೆಗೊಂಡಿವೆ. ಇದೇ ವೇಳೆ ಬೇರೆತಾಲೂಕು ಪ್ರಗತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೂ ಇಂದಿಗೂ ಹಳೇ ಪದ್ಧತಿಯಡಿ ಅನುದಾನ ಹಂಚಿಕೆಯಾಗುತ್ತಿದೆ ಎಂಬುದು ಶಾಸಕರ ಆರೋಪ.

ಅನುದಾನ ಹಂಚಿಕೆಯಲ್ಲಾಗುತ್ತಿರುವ ಈ ತಾರತಮ್ಯವನ್ನು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಮೊದಲ ಬಾರಿಗೆ ಪ್ರಶ್ನಿಸಿದ್ದರು. ಹಿಂದಿನ ಸರ್ಕಾರದ ಗಮನಕ್ಕೆ ತಂದಾಗ ಈ ಬಗ್ಗೆ ಪರಿಶೀಲಿಸಲು ಸರ್ಕಾರ ಒಲವು ತೋರಿತ್ತು. ಆದರೆ, ಸರ್ಕಾರ ಬದಲಾಗಿದ್ದರಿಂದ ಈ ಪ್ರಸ್ತಾವನೆ ಮತ್ತೆ ಮೂಲೆ ಸೇರಿತು.

 ಸರ್ಕಾರದ ಮಟ್ಟದಲ್ಲಿ ಬದಲಾಗಬೇಕು

2013-14ನೇ ಸಾಲಿನಲ್ಲಿ ಸ್ಥಾಪನೆಗೊಂಡ ಕೆಕೆಆರ್‌ ಡಿಬಿಗೆ ಈವರೆಗೆ ಸಾಕಷ್ಟು ಅನುದಾನ ಬಂದಿದ್ದು, ಯಾವ ವರ್ಷವೂ ಪೂರ್ಣ ಪ್ರಮಾಣದಲ್ಲಿ ಖರ್ಚಾಗಿಲ್ಲ. ಅದರಲ್ಲೂ ಮೈಕ್ರೋ, ಮ್ಯಾಕ್ರೋ ಯೋಜನೆಯಡಿ ಅನುದಾನ ಹಂಚಿಕೆಯಾಗುತ್ತಿದ್ದು,  ಶಾಸಕರಿಗೆ ಮೈಕ್ರೋ ಯೋಜನೆಯಡಿ ಮಾತ್ರ ಹೆಚ್ಚಾಗಿ ಅನುದಾನ ಸಿಗುತ್ತದೆ. ಮ್ಯಾಕ್ರೋ ಯೋಜನೆಯಡಿ ಸಿಎಂ, ಸಚಿವರು, ಕಾರ್ಯದರ್ಶಿಗಳಿಗೆ ಅಧಿ ಕಾರ ಹೆಚ್ಚಾಗಿದ್ದು, ಸಾಕಷ್ಟು ಅನುದಾನ ಬೇರೆ ಉದ್ದೇಶಗಳಿಗೂ ಬಳಸಿದ ನಿದರ್ಶನಗಳಿವೆ. ಆದರೆ, ಕ್ಷೇತ್ರವಾರು ಅನುದಾನ ಹಂಚಿಕೆ ಸರ್ಕಾರ ಮಟ್ಟದಲ್ಲಿ ಬದಲಾಗಬೇಕಿದೆ. ವಿಶೇಷ ಸಮಿತಿ ರಚಿಸಿ ಅದರ ವರದಿ ಆಧರಿಸಿ ಕ್ರಮ ಕೈಗೊಳ್ಳಬೇಕಿದೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ:ಅಕ್ರಮ ಗಣಿಗಾರಿಕೆ ಆರಂಭವಾಗಿದ್ದೇ ಸಿದ್ದರಾಮಯ್ಯ ಕಾಲದಲ್ಲಿ : ಕಟೀಲ್

ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಅನುದಾನ ಜತೆಗೆ ಕೆಕೆಆರ್‌ ಡಿಬಿಯಿಂದಲೂ ವಿಶೇಷ ಅನುದಾನ ನೀಡುತ್ತದೆ. ಆದರೀಗ ನಂಜುಂಡಪ್ಪ ವರದಿ ಆಧರಿಸಿ ಹಿಂದುಳಿದ ತಾಲೂಕುಗಳಿಗೆ ಅನುದಾನ ಹಂಚಿಕೆ ಮಾಡುತ್ತಿದ್ದು, ಒಂದೇ ತಾಲೂಕಿನಲ್ಲಿ ಎರಡು ಕ್ಷೇತ್ರಗಳಿದ್ದಲ್ಲಿ ಅನುದಾನ ಕೊರತೆಯಾಗುತ್ತಿದೆ. ಹೀಗಾಗಿ ವಿಧಾನಸಭೆ ಕ್ಷೇತ್ರವಾರು ಹಂಚಿಕೆ ಮಾಡುವಂತೆ ಸರ್ಕಾರದ ಗಮನಕ್ಕೆ ತಂದಾಗ ಹಿಂದಿನ ಕಾಂಗ್ರೆಸ್‌ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿತ್ತು. ಸರ್ಕಾರ ಬದಲಾದ ಕಾರಣ ಸಮಸ್ಯೆಯಾಗಿದೆ.

 ದದ್ದಲ್‌ ಬಸನಗೌಡ, ರಾಯಚೂರು ಗ್ರಾಮೀಣ ಶಾಸಕ.

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.