ಅಲ್ಪಸಂಖ್ಯಾತರ ಅನುದಾನಹಂಚಿಕೆಯಲ್ಲಿ ತಾರತಮ್ಯ


Team Udayavani, Dec 7, 2020, 5:45 PM IST

ಅಲ್ಪಸಂಖ್ಯಾತರ ಅನುದಾನಹಂಚಿಕೆಯಲ್ಲಿ ತಾರತಮ್ಯ

ರಾಯಚೂರು: ರಾಜ್ಯ ಸರ್ಕಾರ ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಿಗೆನೀಡುತ್ತಿದ್ದ ಅನುದಾನ ಕಡಿತಗೊಳಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದ್ದು, ಈ ಧೋರಣೆ ಖಂಡಿಸಿ ರಾಜ್ಯದ 24 ಜಿಲ್ಲೆಗಳಲ್ಲಿ ಡಿ.7ರಂದು ಹೋರಾಟ ನಡೆಸಲಾಗುವುದು ಎಂದು ಮುಸ್ಲಿಂ ಚಿಂತಕರ ಚಾವಡಿ ಮುಖಂಡ ಡಾ| ರಜಾಕ್‌ ಉಸ್ತಾದ್‌ ತಿಳಿಸಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯಗಳನ್ನು ಸಂಪೂರ್ಣ ಕಡೆಗಣಿಸುತ್ತಿದೆ. ಅಲ್ಪಸಂಖ್ಯಾತರ ಇಲಾಖೆಯ ಜನಪರ ಯೋಜನೆಗಳನ್ನು ಕೈ ಬಿಡುತ್ತಿದೆ. ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಸಾಕಷ್ಟು ಅನುದಾನ ಕಡಿತಗೊಳಿಸಿದ್ದು, ಬೇಕು ಬೇಡ ಎನ್ನುವಂತೆ ಹಣ ನೀಡುತ್ತಿದೆ ಎಂದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ 2019-20ರ ಬಜೆಟ್‌ನಲ್ಲಿ ಘೋಷಿಸಿದ 1,897 ಕೋಟಿ ಅನುದಾನವನ್ನು ಈಗಿನ ಸರ್ಕಾರ 1,571 ಕೋಟಿ ರೂ.ಗೆ ಇಳಿಸಿದೆ. 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ1,177 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ 1055 ಕೋಟಿಗೆ ರೂ.ಗೆ ನಿಗದಿಗೊಳಿಸಿದೆ. ಅದರಲ್ಲೂ 50 ಕೋಟಿ ರೂ. ಕಡಿತಗೊಳಿಸಲಾಗಿದೆ ಎಂದು ದೂರಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಕಾಲನಿ ಅಭಿವೃದ್ಧಿ ಯೋಜನೆ, ಶಾದಿಭಾಗ್ಯ ರದ್ದುಗೊಳಿಸಿದೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಧನ, ನಾಗರಿಕ ಪರೀಕ್ಷೆ ತರಬೇತಿ, ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ, ಮೆರಿಟ್‌-ಕಮ್‌ ಮೀನ್ಸ್‌ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂಥಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ಯೋಜನೆಗಳಿಗೆ ಸರ್ಕಾರ ಈವರೆಗೆ ಅನುದಾನ ನೀಡಿಲ್ಲ ಎಂದರು.

ಅಲ್ಪಸಂಖ್ಯಾತ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ 25 ಸಾವಿರ ರೂ. ಪ್ರೋತ್ಸಾಹ ಧನವನ್ನು 8,333 ರೂ. ಗೆ ಕಡಿತಗೊಳಿಸಲಾಗಿದೆ. ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ, ಮೆರಿಟ್‌-ಕಮ್‌ ಮೀನ್ಸ್‌ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ 12.50 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರಮತ್ತು ರಾಜ್ಯ ಸರ್ಕಾರ ಸೇರಿ 270 ಕೋಟಿ ರೂ.ಅನುದಾನ ನಿಗದಿಗೊಳಿಸಲಾಗಿತ್ತು. 2019-20ನೇಸಾಲಿನಲ್ಲಿ ರಾಜ್ಯ ಸರ್ಕಾರ ಅನುದಾನನೀಡದ ಕಾರಣ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸಿಕ್ಕಿಲ್ಲ ಎಂದರು.

ಸಚಿವ ಶ್ರೀಮಂತ ಪಾಟೀಲ್‌ ಮೂರು ತಿಂಗಳಿಂದ ಕಚೇರಿಗೆ ಆಗಮಿಸಿಲ್ಲ. ಒಂದು ತಿಂಗಳಿಂದ ಇಲಾಖೆಯ ಪ್ರಭಾರ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಕೂಡಕಚೇರಿಯತ್ತ ತಲೆ ಹಾಕದ ಕಾರಣ ಹೇಳುವವರು ಕೇಳುವವರೇ ಇಲ್ಲದಾಗಿದೆ. ಸರ್ಕಾರ ಹೊಸ ಯೋಜನೆ ಜಾರಿಗೊಳಿಸದಿದ್ದರೂ ಪರವಾಗಿಲ್ಲ. ಆದರೆ, ಈಗಿರುವ ಎಲ್ಲ ಯೋಜನೆಗಳನ್ನು ಮುಂದುವರಿಸಲಿ. ಅಗತ್ಯ ಅನುದಾನ ನೀಡಲಿ ಎಂದು ಒತ್ತಾಯಿಸಿದರು. ಮುಖಂಡರಾದ ಸೈಯದ್‌ ಹಾಮೀದ್‌ ಅಲಿ, ಕೆ.ಎಂ.ಖಾನ್‌, ಗುಲಾಬ್‌ ಅಹ್ಮದ್‌ ಖಾನ್‌, ಮಹ್ಮದ್‌ ಸಲೀಂ ಸೇರಿ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.