ವಾರದಲ್ಲಿ ಆರು ದಿನವೂ ಮೊಟ್ಟೆ ವಿತರಿಸಿ
Team Udayavani, Dec 24, 2021, 4:04 PM IST
ರಾಯಚೂರು: ಸರ್ಕಾರ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ಮೊಟ್ಟೆ ವಿತರಣೆ ಆರಂಭಿಸಿದ್ದು, ಈ ಯೋಜನೆಯನ್ನು ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ಪತ್ರಿಭಟನೆ ನಡೆಸಿ ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ನಿವಾರಣೆ ದೃಷ್ಟಿಯಿಂದ ಸರ್ಕಾರ ಈ ಯೋಜನೆ ಆರಂಭಿಸಿರುವುದು ಸ್ವಾಗತಾರ್ಹ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದು ಉತ್ತಮ ನಡೆಯಾಗಿದೆ. ಮೊಟ್ಟೆ ಉತ್ತಮ ಆಹಾರವಾಗಿದ್ದು, ಮಕ್ಕಳ ಪೌಷ್ಟಿಕತೆ ವೃದ್ಧಿಗೆ ಸಹಕರಿಸುತ್ತಿದೆ. ಹೀಗಾಗಿ ವಾರದಲ್ಲಿ ಮೂರು ದಿನಗಳ ಬದಲಿಗೆ ಆರು ದಿನ ಮೊಟ್ಟೆ ವಿತರಿಸಬೇಕು ಎಂದು ಒತ್ತಾಯಿಸಿದರು.
ನಮ್ಮ ಸಂಘಟನೆ ಕಾರ್ಯಕರ್ತರು ರಾಜ್ಯದ 21 ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಘಟನೆ ಸದಸ್ಯರ ಬಹುತೇಕ ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಓದುತ್ತಿದ್ದಾರೆ. ಸರ್ಕಾರದ ಮೊಟ್ಟೆ ವಿತರಣೆ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆರಂಭಿಸಿ, ವಾರಕ್ಕೆ ಆರು ದಿನ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಕೂಸ್ ಸಂಚಾಲಕಿ ವಿದ್ಯಾ ಪಾಟೀಲ್, ಗುರುರಾಜ, ಮಾರೆಮ್ಮ, ಈರಮ್ಮ, ಮಲ್ಲಮ್ಮ, ದೇವಮಣಿ, ಬಸವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ