ಗ್ರಾಮ ಪಂಚಾಯತ್‌ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ


Team Udayavani, Dec 8, 2020, 4:14 PM IST

ಗ್ರಾಮ ಪಂಚಾಯತ್‌ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ

ರಾಯಚೂರು: ಜಿಲ್ಲೆಯಲ್ಲಿ 173 ಗ್ರಾಪಂಗಳಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗೆಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು,ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌ ತಿಳಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎರಡುಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು,ಮೊದಲ ಹಂತದಲ್ಲಿ ರಾಯಚೂರು, ಮಾನ್ವಿ,ದೇವದುರ್ಗ, ಸಿರವಾರ ತಾಲ್ಲೂಕಿನ ವ್ಯಾಪ್ತಿಯ 93 ಪಂಚಾಯಿತಿಗಳಿಗೆ ಡಿ.22ರಂದು ಚುನಾವಣೆ ನಡೆಯಲಿದೆ. ಎರಡನೇಹಂತದಲ್ಲಿ 83 ಗ್ರಾಪಂಗಳಿಗೆ ಡಿ.27ರಂದುಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆಶುರುವಾಗಿದ್ದು, ಉಮೇದುವಾರಿಕೆ ಸಲ್ಲಿಕೆಗೆ ಡಿ.11ರಂದು ಕೊನೆ ದಿನ. ಡಿ.12ರಂದುನಾಮಪತ್ರ ಪರಿಶೀಲನೆ, 14ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ.ಮರುಮತದಾನದ ಅವಶ್ಯತೆ ಬಿದ್ದರೆ, 24ರಂದು ನಡೆಯಲಾಗುವುದು ಎಂದರು.

2ನೇ ಹಂತದಲ್ಲಿ ಲಿಂಗಸುಗೂರು,ಸಿಂಧನೂರು, ಮಸ್ಕಿ ತಾಲ್ಲೂಕು ವ್ಯಾಪ್ತಿಯ 80 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಎರಡನೇ ಹಂತಕ್ಕೆ 17ರಂದು ನಾಮಪತ್ರ ಪರಿಶೀಲನೆ, 19ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿರುತ್ತದೆ.27ರಂದು ಮತದಾನ ನಡೆಯಲಿದೆ.ಅಗತ್ಯ ಬಿದ್ದರೆ 29ರಂದು ಮರುಮತದಾನನಡೆಯಲಿದೆ. 30ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯನಡೆಯಲಿದೆ ಎಂದರು.

ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸಲಾಗುವುದು. ಪ್ರತಿಗ್ರಾಪಂ ಚುನಾವಣೆಗೆ ಒಬ್ಬ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯನ್ನು ನಿಯೋಜಿಸಲಾಗಿದೆ. ಈಗಾಗಲೇ ಚುನಾವಣಾಧಿಕಾರಿಗಳಿಗೂ ತರಬೇತಿ ನೀಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು. ಎಡಿಸಿ ಕೆ.ಎಚ್‌.ದುರಗೇಶ ಗೋಷ್ಠಿಯಲ್ಲಿದ್ದರು.

ಆರು ಗ್ರಾಪಂಗಳಿಗಿಲ್ಲ ಚುನಾವಣೆ: ಜಿಲ್ಲೆಯಲ್ಲಿ ಒಟ್ಟು 179 ಗ್ರಾಮ ಪಂಚಾಯಿತಿಗಳಿದ್ದು, ಅದರಲ್ಲಿಕಾರಣಾಂತರಗಳಿಂದ ಆರುಪಂಚಾಯಿತಿಗಳಿಗೆ ಚುನಾವಣೆನಡೆಯುತ್ತಿಲ್ಲ. ದೇವದುರ್ಗ ತಾಲ್ಲೂಕಿನಶಾವಂತಗೇರಾ, ಹೇಮನಾಳ ಗ್ರಾಪಂಗಳ ಪ್ರಕರಣ ಉತ್ಛ ನ್ಯಾಯಾಲಯದಲ್ಲಿಬಾಕಿ ಉಳಿದಿವೆ. ಇದೇ ತಾಲ್ಲೂಕಿನಜಾಲಹಳ್ಳಿ, ಕರಡಿಗುಡ್ಡಿ ಹಾಗೂ ಚಿಂಚೋಡಿ ಗ್ರಾಪಂಗಳು ಪಟ್ಟಣ ಪಂಚಾಯಿತಿಗಳೆಂದು ಮೇಲ್ದರ್ಜೆಗೇರಿಸಿದ ಕಾರಣ ಚುನಾವಣೆನಡೆಸದಂತೆ ಚುನಾವಣೆ ಆಯೋಗ ನಿರ್ದೇಶನ ನೀಡಿದೆ. ಲಿಂಗಸುಗೂರುತಾಲ್ಲೂಕಿನ ರೋಡಲಬಂಡಾ ಗ್ರಾಪಂ ಅವಧಿ 2021ರ ಮೇ ತಿಂಗಳಲ್ಲಿ ಮುಗಿಯುವ ಕಾರಣಕ್ಕೆ ಚುನಾವಣೆ ಕೈಬಿಡಲಾಗಿದೆ.

ಮಸ್ಕಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿರುವ ವಿಚಾರ ಗಮನಕ್ಕಿದೆ. 5ಎ ಕಾಲುವೆ ಜಾರಿಗೆಈಗಾಗಲೇ ಉಸ್ತುವಾರಿ ಸಚಿವರು, ಮುಖ್ಯ ಇಂಜಿನಿಯರ್‌ಭರವಸೆ ನೀಡಿದ್ದಾರೆ. ತಾಂತ್ರಿಕ ತಜ್ಞರ ವರದಿ ನೀಡದ ವಿನಃ ಅಲ್ಲಿ ಕಾಮಗಾರಿ ಆರಂಭಿಸುವುದು ಕಷ್ಟ. ಹೀಗಾಗಿ ವರದಿ ಬರುವವರೆಗೆ ಕಾಯುವಂತೆ ಸ್ಥಳೀಯರಿಗೆ ಮನವರಿಕೆ ಮಾಡಲಾಗುವುದು. ಗ್ರಾಮಗಳಿಗೆ ತೆರಳಿ ಜನರಿಗೆ ತಿಳಿ ಹೇಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.  -ಆರ್‌.ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.