ಬಿಜನಗೇರಾ ಬಳಿ ಶೀಘ್ರವೇ ಜಿಲ್ಲಾ ಕಾರಾಗೃಹ!


Team Udayavani, Jan 2, 2022, 5:17 PM IST

20police

ರಾಯಚೂರು: ಬಹುದಿನಗಳ ಬೇಡಿಕೆ ಜಿಲ್ಲಾ ಕಾರಾಗೃಹ ಸ್ಥಳಾಂತರಕ್ಕೆ ಶೀಘ್ರವೇ ಚಾಲನೆ ಸಿಗುವ ಲಕ್ಷಣ ಗೋಚರವಾಗಿವೆ.

ಸಮೀಪದ ಬಿಜನಗೇರಾ ಬಳಿ 19.15 ಎಕರೆ ಸರ್ಕಾರಿ ಜಮೀನು ಗುರುತಿಸಿದ್ದು, ಜಿಲ್ಲಾಧಿಕಾರಿ ಅನುಮೋದನೆ ನೀಡುವುದೊಂದೇ ಬಾಕಿ ಇದೆ. ಜಿಲ್ಲೆಗೆ ಈಚೆಗೆ ಭೇಟಿ ನೀಡಿದ್ದ ಬೆಳಗಾವಿ ಡಿಐಜಿ ಉತ್ತರ ಕರ್ನಾಟಕ ಭಾಗದಲ್ಲಿ ಕಾರಾಗೃಹಗಳ ನಿರ್ಮಾಣಕ್ಕೆ ಒತ್ತು ನೀಡುತ್ತಿದ್ದು, 100 ಕೋಟಿ ರೂ. ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದರು. ಅದರ ಭಾಗವಾಗಿ ಅಧಿಕಾರಿಗಳು ಜಿಲ್ಲಾ ಕಾರಾಗೃಹ ಸ್ಥಳ ಶೋಧನೆಗೆ ಮುಂದಾಗಿದ್ದರು.

ಸುಸಜ್ಜಿತ ಕಾರಾಗೃಹ ನಿರ್ಮಾಣಕ್ಕೆ ವಿಶಾಲವಾದ ಸ್ಥಳ ಬೇಕಿರುವ ಕಾರಣ ನಗರ ಹೊರವಲಯದ ಬಿಜನಗೇರಾ ಬಳಿ ಸ್ಥಳ ಆಯ್ಕೆ ಮಾಡಲಾಗಿದೆ. ಡಿಸಿ ಅನುಮೋದನೆ ನೀಡುತ್ತಿದ್ದಂತೆ ಆ ಸ್ಥಳವನ್ನು ಇಲಾಖೆ ಹೆಸರಿಗೆ ವರ್ಗಾಯಿಸಿ ಕಾರಾಗೃಹ ನಿರ್ಮಾಣಕ್ಕೆ ಮುಂದಾಗುವ ನಿರೀಕ್ಷೆ ಇದೆ.

ಇಕ್ಕಟ್ಟು ಪ್ರದೇಶದಲ್ಲಿತ್ತು ಈಗಿರುವ ಕಾರಾಗೃಹ

ಈಗಿರುವ ಜೈಲು ನಗರದ ಹೃದಯ ಭಾಗದಲ್ಲಿದ್ದು, ಒಂದೂವರೆ ಎಕರೆ ಪ್ರದೇಶದಲ್ಲಿದೆ. ಜೈಲಿನ ಸುತ್ತಲೂ ಜನವಾಸವಿದ್ದಾರೆ. ಇದು 170 ಕೈದಿಗಳ ಕೂಡಿಡುವ ಸಾಮರ್ಥ್ಯ ಹೊಂದಿದ್ದು, ಈಗ 212 ಕೈದಿಗಳಿದ್ದಾರೆ. ಅಂದರೆ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಇರಿಸಲಾಗುತ್ತಿದೆ. ಅಲ್ಲದೇ ಯಾವುದೇ ಚಟುವಟಿಕೆ ನಡೆಸಬೇಕಾದರೂ ಇಲ್ಲಿ ಸ್ಥಳಾಭಾವ ಎದುರಾಗುತ್ತಿದೆ. ಇನ್ನು ಕೈದಿಗಳನ್ನು ಕರೆ ತರುವುದು, ನ್ಯಾಯಾಲಯಕ್ಕೆ ಹಾಜರು ಪಡಿಸುವುದು ಸೇರಿದಂತೆ ಇತ್ಯಾದಿ ಪ್ರಕ್ರಿಯೆಗಳು ನಿತ್ಯ ನಡೆಯುತ್ತಿದ್ದು, ರಸ್ತೆ ಮಧ್ಯೆಯೇ ಪೊಲೀಸ್‌ ವಾಹನ ನಿಲ್ಲಿಸುವ ಅನಿವಾರ್ಯತೆ ಇದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಎಲ್ಲ ಕಾರಣಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾರಾಗೃಹ ವ್ಯಾಪ್ತಿ ವಿಸ್ತರಿಸುವ ನಿಟ್ಟಿನಲ್ಲಿ ಬೃಹತ್‌ ಕಾರಾಗೃಹ ನಿರ್ಮಾಣ ಅನಿವಾರ್ಯವಾಗಿತ್ತು.

ಕೈದಿಗಳ ಚಟುವಟಿಕೆಗೆ ಪೂರಕ

ಈಗಿರುವ ಜೈಲುಗಳು ಕೇವಲ ಶಿಕ್ಷೆ ನೀಡುವ ತಾಣವಾಗಿರದೆ ಕೈದಿಗಳ ಮನಪರಿವರ್ತನೆ ತಾಣಗಳಾಗಿ ಮಾರ್ಪಟ್ಟಿವೆ. ಜೈಲುಗಳಲ್ಲೂ ನಾನಾ ರೀತಿಯ ಚಟುವಟಿಕೆಗಳು, ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಅದಕ್ಕೆಲ್ಲ ಈಗಿರುವ ಜೈಲಿನ ವಾತಾವರಣ ಅಷ್ಟೊಂದು ಪೂರಕವಾಗಿಲ್ಲ. ಉದ್ದೇಶಿತ ಕಾರಾಗೃಹದಲ್ಲಿ 19.15 ಎಕರೆ ಸ್ಥಳಾವಕಾಶ ಸಿಗಲಿದ್ದು, ಅಲ್ಲಿ ದೊಡ್ಡ ಕಟ್ಟಡದ ಜತೆ ವಿವಿಧ ಚಟುವಟಿಕೆ ನಡೆಸಲು ಸಾಕಷ್ಟು ಜಾಗ ಸಿಗಲಿದೆ. ಕ್ರೀಡೆಗಳಿಗೆ, ತೋಟಗಾರಿಕೆಗೆ, ಉದ್ಯಾನಕ್ಕೆ ಯಾವುದಾದರೂ ದೊಡ್ಡ ಕಾರ್ಯಕ್ರಮ ಆಯೋಜಿಸಲು ನಾನಾ ಕಾರಣಗಳಿಗೆ ದೊಡ್ಡ ಮೈದಾನ ಉಪಯೋಗವಾಗಲಿದೆ.

ಹೊಸ ಕಾರಾಗೃಹ ನಿರ್ಮಾಣದ ಉದ್ದೇಶದಿಂದ ಸಮೀಪದ ಬಿಜನಗೇರಾ ಹತ್ತಿರ 19.15 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಇಲಾಖೆಗೆ ಹಸ್ತಾಂತರಿಸಲು ಡಿಸಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಿರುವ ಕೈದಿಗಳಿಗೆ ಈ ಸ್ಥಳ ಸಾಲದಾಗಿದೆ. ಅಲ್ಲದೇ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಆಗುತ್ತಿಲ್ಲ. ಡಿಸಿಯವರ ಅನುಮೋದನೆ ಬಳಿಕ ಮುಂದಿನ ಚಟುವಟಿಕೆ ಆರಂಭಿಸಲಾಗುವುದು. -ಬಿ.ಆರ್‌.ಅಂದಾನಿ, ಅಧೀಕ್ಷಕರು, ಜಿಲ್ಲಾ ಕಾರಾಗೃಹ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.