ಡಿಕೆಶಿ ಕ್ಷಮೆಯಿಂದ ಕಾಂಗ್ರೆಸ್ಗೆ ಗೆಲುವು
Team Udayavani, Nov 19, 2018, 6:05 AM IST
ರಾಯಚೂರು: “ವೀರಶೈವ ಲಿಂಗಾಯತ ಒಂದೇ ಧರ್ಮವಾಗಿದ್ದು, ಅದನ್ನು ಪ್ರತ್ಯೇಕ ಮಾಡಲು ಹೋಗಿರುವುದು ತಪ್ಪಾಗಿದೆ ‘ ಎಂದು ಸಚಿವ ಡಿ.ಕೆ. ಶಿವಕುಮಾರ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧ್ಯವಾಯಿತು
ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಶ್ರೀ ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಧರ್ಮವನ್ನು ಪ್ರತ್ಯೇಕ ಮಾಡಲು ಕೆಲವರು ಪ್ರಚೋದಿಸಿದ್ದರು. ಇದಕ್ಕೆ ಬೆಂಬಲ ದೊರೆಯಲಿಲ್ಲವೆಂದು ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದ ರು. ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ಅವರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಿ ಪರಿಹರಿಸಬೇಕು ಎಂದರು.