ಕಾರ್ಮಿಕರಿಗೆ ಪ್ರಶ್ನೆ ಕೇಳ್ಳೋಕೇ ಬಿಡಲಿಲ್ಲ !


Team Udayavani, Jul 7, 2017, 11:34 AM IST

RAI-5.jpg

ರಾಯಚೂರು: ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಯೋಜಿಸಿದ್ದ
ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಪ್ರಶ್ನೆ ಕೇಳಲು ಕೂಡ ಸಮಯಾವಕಾಶ ನೀಡದೆ ಕಾಟಾಚಾರಕ್ಕೆ ನಡೆಸಿದಂತಾಯಿತು.

ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಆರ್‌. ವೆಂಕಟೇಶ ಗುರುವಾರ ಜಿಲ್ಲೆಗೆ ಭೇಟಿ ನೀಡಿದ್ದರು. ಈ ವೇಳೆ ಸಫಾಯಿ ಕರ್ಮಚಾರಿಗಳ ಬಡಾವಣೆ ವೀಕ್ಷಿಸಿದ ನಂತರ ಸಂವಾದ ನಡೆಸಿದರು. ಆದರೆ, ಸಂವಾದದಲ್ಲಿ ಸಮಸ್ಯೆ ಹೇಳಿಕೊಳ್ಳಲು ಸಮಯಾವಕಾಶ ನೀಡದೆ ಪ್ರತಿ ಸ್ಥಳೀಯ ಸಂಸ್ಥೆಯಿಂದ ಒಬ್ಬರಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಯಿತು. ಇದರಿಂದ ಸಂವಾದ ಕಾಟಾಚಾರಕ್ಕೆ ಎನ್ನುವಂತೆ ನಡೆಯಿತು. ನಗರಸಭೆ ಕಾರ್ಮಿಕ ಉರುಕುಂದಪ್ಪ ಮಾತನಾಡಿ, ಪಿಎಫ್‌ ಕಡಿತಗೊಳಿಸಿದ ಬಗ್ಗೆ ಮಾಹಿತಿಯಿಲ್ಲ. ಕೇಳಿದರೆ ಸರಿಯಾಗಿ ಪ್ರತಿಕ್ರಿಯಿಸುವುದಿಲ್ಲ. ಸಮವಸ್ತ್ರಗಳು ಸರಿಯಾಗಿಲ್ಲ. 10 ಕಾರ್ಮಿಕರನ್ನು ಸೇವೆಯಿಂದ ತೆಗೆದು ಹಾಕಿದ್ದಾರೆ ಎಂದು ಸಮಸ್ಯೆ ಬಿಚ್ಚಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ, ಇಎಸ್‌ಐ ಸೌಲಭ್ಯ ಯಾಕೆ ಕಲ್ಪಿಸಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ನಮ್ಮಲ್ಲಿ ಆಸ್ಪತ್ರೆ ಇಲ್ಲ ಹೀಗಾಗಿ ನೀಡಿಲ್ಲ. ಶೀಘ್ರದಲ್ಲೇ ನೀಡುವುದಾಗಿ ತಿಳಿಸಿದರು. ಇದಕ್ಕೆ ಅಧ್ಯಕ್ಷರು, ಎಲ್ಲವನ್ನು ನೀವೇ ನಿರ್ಧರಿಸುತ್ತೀರಾ? ಸರ್ಕಾರ ಸೌಲಭ್ಯ ನೀಡಿದರೆ ಅದನ್ನು ಫಲಾನುಭವಿಗಳಿಗೆ ತಲುಪಿಸಲು ಯಾಕೆ ಮೀನ ಮೇಷ ಎಂದು ತರಾಟೆಗೆ ತೆಗೆದುಕೊಂಡರು. 

ಲಿಂಗಸುಗೂರಿನಲ್ಲಿ ಈವರೆಗೆ ಪಿಎಫ್‌ ಪಾವತಿಸಿಲ್ಲ ಎಂದು ನೌಕರ ಉಪ್ಪಣ್ಣ ದೂರಿದರು. ಇದಕ್ಕೆ ಮುಖ್ಯಾಧಿ ಕಾರಿ ಪ್ರತಿಕ್ರಿಯಿಸಿ, ನಾನು ಬಂದು ನಾಲ್ಕು ತಿಂಗಳಾಗಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನೊಪ್ಪದ ಅಧ್ಯಕ್ಷರು, 15 ದಿನದೊಳಗಾಗಿ ಪಾವತಿಸಬೇಕು. ಅದರ ಜತೆಗೆ ನಾಲ್ಕು ಪಟ್ಟು ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸೂಚಿಸಿದರು. ಅಲ್ಲದೇ, ಮುಖ್ಯಾಧಿ ಕಾರಿಗೆ ನೋಟಿಸ್‌ ನೀಡುವುದಾಗಿ ಭರವಸೆ ನೀಡಿದರು. ಲಿಂಗಸುಗೂರು, ಮಾನವಿ, ದೇವದುರ್ಗ, ಮಸ್ಕಿ ಪೌರ ಕಾರ್ಮಿಕರು
ಪಿಎಫ್‌ ಮತ್ತು ಸಾಮಗ್ರಿಗಳು ಒದಗಿಸುವಂತೆ ಅ ಧಿಕಾರಿಗಳಿಗೆ ಸೂಚಿಸಿ ಎಂದು ಅಧ್ಯಕ್ಷರಲ್ಲಿ ಮನವಿ ಮಾಡಿದರು. ಮುದಗಲ್ಲ ಪುರಸಭೆಯಲ್ಲಿ 36 ದಿನಗೂಲಿ ನೌಕರರು ಹಲವು ವರ್ಷಗಳಿಂದ ದುಡಿಯುತ್ತಿದ್ದಾರೆ ಅವರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರು ಏನೇ ಕೇಳಿದರೂ ಆಯಿತು ಕೂಡಲೇ ಮಾಡಿಸಲು ಸೂಚಿಸುತ್ತೇನೆ. ನಿಮ್ಮ ಸೇವೆ ಕಾಯಂ ಆಗುತ್ತದೆ ಎಂದೆಲ್ಲ ಭರವಸೆ ನೀಡಿ ಕಾರ್ಮಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಪ್ರತಿ ಸ್ಥಳೀಯ ಸಂಸ್ಥೆಯಿಂದ ಒಬ್ಬರಿಗೆ ಅವಕಾಶ ನೀಡಿದ್ದರಿಂದ ಕೇವಲ ಅರ್ಧ ಗಂಟೆಯಲ್ಲೇ ಸಂವಾದ ಮುಗಿಯಿತು. ಆದರೆ, ರಾಯಚೂರು ನಗರಸಭೆ ಸದಸ್ಯರು ಸಮಸ್ಯೆ ಹೇಳಲು ಮೈಕ್‌ ಕೇಳುತ್ತಿದ್ದರೂ ಯಾರೂ ಕೊಡಲಿಲ್ಲ. ಈ ಭಾಗದ ಸಫಾಯಿ ಕರ್ಮಚಾರಿಗಳಲ್ಲಿ ಮಾಹಿತಿ ಕೊರತೆಯಿದ್ದು,  ಸೌಲಭ್ಯದಿಂದ ದೂರವುಳಿದಿದ್ದೀರಿ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ
ಎಂದು ತಿಳಿಸಿದ ಅಧ್ಯಕ್ಷರು ಸಂವಾದ ಮುಗಿಸಿದರು. ನಂತರ ಅಳಲು ತೋಡಿಕೊಂಡ ಕಾರ್ಮಿಕರು, ಸಾಕಷ್ಟು ಪೌರ ಕಾರ್ಮಿಕರಿಗೆ ಪಿಎಫ್‌, ಇಎಸ್‌ಐ ಸೌಲಭ್ಯ ಸಿಗುತ್ತಿಲ್ಲ. ಈ ಎಲ್ಲ ವಿಚಾರಗಳನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತರಬೇಕು ಎಂದುಕೊಂಡಿದ್ದೆವು. ಆದರೆ ಸರಿಯಾಗಿ ಮಾತನಾಡಲು ಬಿಡಲಿಲ್ಲ. ಹೊರಗುತ್ತಿಗೆಯಡಿ ದುಡಿಯುವ ಮಹಿಳೆಯರಿಗೆ ಕಳಪೆ ಗುಣಮಟ್ಟದ ಸೀರೆ ನೀಡಲಾಗಿದೆ ಎಂದು ದೂರಿದರು. 

ನಗರಸಭೆ ಅಧ್ಯಕ್ಷೆ ಹೇಮಲತಾ ಬೂದೆಪ್ಪ, ಉಪಾಧ್ಯಕ್ಷ ಜಯಣ್ಣ, ಆಯೋಗದ ಸದಸ್ಯ ಗೋಕುಲ ನಾರಾಯಣ ಸ್ವಾಮಿ, ನಗರಾಭಿವೃದ್ಧಿ
ಕೋಶದ ಯೋಜನಾ ನಿರ್ದೇಶಕ ಈರಣ್ಣ ಬಿರಾದಾರ ಇತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.