ವಸತಿ ನಿಲಯಕ್ಕೆ ಸ್ಥಳ ನೀಡದಿರಿ
Team Udayavani, Dec 14, 2021, 6:34 PM IST
ರಾಯಚೂರು: ನಗರದ ಯಕ್ಲಾಸಪೂರ ಸೀಮಾಂತರದ ಸರ್ವೇ ನಂ.41ರ ವಿಸ್ತೀರ್ಣ 5 ಎಕರೆ 20 ಗುಂಟೆ ಪ್ರದೇಶ ಅಖೀಲ ಭಾರತ ವೀರಶೈವ ಮಹಾಸಭಾ ವಸತಿ ನಿಲಯಕ್ಕೆ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ವಸತಿ ನಿಲಯಕ್ಕೆ ಸ್ಥಳ ನೀಡುವಂತೆ ಅಖೀಲ ಭಾರತ ವೀರಶೈವ ಮಹಾಸಭಾ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದು, ಕೂಡಲೇ ಮನವಿ ತಿರಸ್ಕರಿಸಬೇಕು. ಸರ್ಕಾರ ಈಗಾಗಲೇ ವೀರಶೈವ ರುದ್ರಭೂಮಿಗಾಗಿ ಎರಡು ಎಕರೆ ಜಮೀನು ನೀಡಲಾಗಿದೆ. ಹೀಗಾಗಿ ಸರ್ವೇ ನಂಬರ್ 41 ವಿಸ್ತೀರ್ಣ 5 ಎಕರೆ 20 ಗುಂಟೆಯನ್ನು ಸರ್ಕಾರಿ ಕಟ್ಟಡ ಹಾಗೂ ಸರ್ಕಾರಿ ವಸತಿ ನಿಲಯಗಳಿಗೆ ನೀಡಬೇಕು. ಈ ಬಗ್ಗೆ ನಿರ್ಲಕ್ಷé ವಹಿಸಿದರೆ, ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಸಂಘಟನೆ ಸಂಚಾಲಕ ಶರಣಪ್ಪ ದಿನ್ನಿ, ಸದಸ್ಯರಾದ ಈರಪ್ಪ ಗಣಮೂರು, ಚನ್ನಬಸವ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ