ಅತಿಥಿಗಳ ಕೈ ಸೇರದ ಸಹಾಯಧನ!

5 ಸಾವಿರ ರೂ. ಹಾಕಲಾಯಿತು. ಈ ದುಡ್ಡು ಕೆಲವರಿಗೆ ಬಂದರೆ, ಅನೇಕರ ಖಾತೆಗೆ ಬರಲೇ ಇಲ್ಲ.

Team Udayavani, Oct 6, 2021, 1:54 PM IST

ಅತಿಥಿಗಳ ಕೈ ಸೇರದ ಸಹಾಯಧನ!

ರಾಯಚೂರು: ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಎಷ್ಟೋ ಜನರಿಗೆ ಸರ್ಕಾರ ಸಹಾಯಧನ ನೀಡುವ ಮೂಲಕ ನೆರವಿಗೆ ಬಂದಿದೆ. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಸಾಕಷ್ಟು ಫಲಾನುಭವಿಗಳ ಸಿಕ್ಕಿಲ್ಲ ಎನ್ನುವುದು ವಾಸ್ತವ. ಕೋವಿಡ್‌ ಶುರುವಾದಾಗಿನಿಂದ ಜನ ಜೀವನ ಸಾಕಷ್ಟು ಏರುಪೇರಾಯಿತು. ಅದರಲ್ಲೂ ದುಡಿದು ತಿನ್ನುವ ಜನರು, ಗುತ್ತಿಗೆ ನೌಕರರು, ಅತಿಥಿ ಶಿಕ್ಷಕರು, ಉಪನ್ಯಾಸಕರು ಹೀಗೆ ಸಾಕಷ್ಟು ಜನ ನಾನಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೊದಲ ಲಾಕ್‌ ಡೌನ್‌ ವೇಳೆ ಹೇಗೋ ಸುಧಾರಿಸಿಕೊಂಡಿದ್ದ ಜನರಿಗೆ 2ನೇ ಲಾಕ್‌ಡೌನ್‌ ಜಾರಿಯಾದ ಬಳಿಕ ಜನಜೀವನ ಬುಡಮೇಲಾಯಿತು. ಎಷ್ಟೋ ಜನ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದರೆ, ಸಾಕಷ್ಟು ಜನರಿಗೆ ವೇತನ ಕೂಡ ಸಿಗದಂಥ ಸ್ಥಿತಿ ಏರ್ಪಟ್ಟಿತು. ಇಂಥ ಹೊತ್ತಲ್ಲಿ ಸರ್ಕಾರ ಬರೋಬ್ಬರಿ 500 ಕೋಟಿ ರೂ. ಪರಿಹಾರ ಘೋಷಿಸಿತು. 3ರಿಂದ 5 ಸಾವಿರ ರೂ. ವರೆಗೂ ಸಹಾಯಧನ ಘೋಷಿಸುವ ಮೂಲಕ ನೆರವಿಗೆ ಬಂದಿತು. ಅದರಲ್ಲಿ ಖಾಸಗಿ ಶಾಲೆಗಳ ಶಿಕ್ಷಕರಿಗೆ 100 ಕೋಟಿ ರೂ. ಪರಿಹಾರ ನೀಡುತ್ತಿರುವುದಾಗಿ ತಿಳಿಸಿತ್ತು.

ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೂ ಸರ್ಕಾರ ಸಹಾಯಧನ ಘೋಷಿಸಿತು. ಅದಕ್ಕಾಗಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಇಲಾಖೆಯಿಂದ ನೋಂದಣಿ ಪ್ರಕ್ರಿಯೆ ಕೂಡ ನಡೆಸಲಾಯಿತು. ಇದಕ್ಕೆ ಸಾಕಷ್ಟು ಖಾಸಗಿ ಶಾಲೆಗಳ ಶಿಕ್ಷಕರು ನೋಂದಣಿ ಮಾಡಿಕೊಂಡಿದ್ದರು. ಸರ್ಕಾರ ಪ್ಯಾನ್‌ ಕಾರ್ಡ್‌ ಹೊಂದಿಸಿದ ಬ್ಯಾಂಕ್‌ ಖಾತೆ ವಿವರ ಕೇಳಿತ್ತು. ಎಲ್ಲವನ್ನು ವೆಬ್‌ಸೈಟ್‌ನಲ್ಲಿ ನೋಂದಾಯಿಸಲಾಗಿತ್ತು. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ
ಅವ ಧಿಯಲ್ಲಿ ಖಾತೆಗಳಿಗೆ 5 ಸಾವಿರ ರೂ. ಹಾಕಲಾಯಿತು. ಈ ದುಡ್ಡು ಕೆಲವರಿಗೆ ಬಂದರೆ, ಅನೇಕರ ಖಾತೆಗೆ ಬರಲೇ ಇಲ್ಲ.

ಜಿಲ್ಲೆಯಲ್ಲಿ ಖಾಸಗಿ ಶಾಲೆಗಳ 4057 ಬೋಧಕ ಸಿಬ್ಬಂದಿ ಹಾಗೂ 1173 ಬೋಧಕೇತರ ಸಿಬ್ಬಂದಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಆಧಾರ್‌ ಜೋಡಣೆಯಾದ ಕಾರಣಕ್ಕೆ 3137 ಬೋಧಕ ಮತ್ತು 902 ಬೋಧಕೇತರ ಸಿಬ್ಬಂದಿ ಅರ್ಜಿ ಊರ್ಜಿತಗೊಂಡಿದ್ದವು. ಉಳಿದಂತೆ ಕಾರಣಾಂತರಗಳಿಂದ ಆಯಾ ಬಿಇಒ ಕಚೇರಿಯಲ್ಲಿ ಕೆಲ ಅರ್ಜಿಗಳು ತಿರಸ್ಕೃತಗೊಂಡರೆ; ಸುಮಾರು 85 ಅರ್ಜಿ ಬಾಕಿ ಉಳಿದಿವೆ. ಆದರೆ, ಅರ್ಜಿ ಊರ್ಜಿತಗೊಂಡ ಫಲಾನುಭವಿಗಳ ಖಾತೆಗೂ ಹಣ ಬಂದಿಲ್ಲ ಎನ್ನುವುದೇ ಸಮಸ್ಯೆ

ತಾಂತ್ರಿಕ ಸಮಸ್ಯೆ ನೆಪ
ಒಂದೇ ಶಾಲೆಯಲ್ಲಿ ಕೆಲಸ ಮಾಡುವ ಒಬ್ಬ ಸಿಬ್ಬಂದಿಗೆ ಸಹಾಯಧನ ಲಭಿಸಿದ್ದರೆ ಇನ್ನೊಬ್ಬರಿಗೆ ಲಭಿಸಿಲ್ಲ. ಇದರಿಂದ ಅವರು ಇಲಾಖೆ ಅ ಧಿಕಾರಿಗಳನ್ನು ವಿಚಾರಿಸಿದರೆ ತಾಂತ್ರಿಕ ದೋಷದಿಂದ ಹೀಗಾಗಿರಬಹುದು. ಬ್ಯಾಂಕ್‌ಗಳನ್ನು ವಿಚಾರಿಸಿ ಎಂದು ಹೇಳಿದ್ದಾರೆ. ಬ್ಯಾಂಕ್‌ನಲ್ಲಿ ವಿಚಾರಿಸಿದರೆ ಆ ರೀತಿ ಹಣ ಬಂದಿಲ್ಲ ಎಂದು ಹೇಳಿದ್ದಾರೆ. ಅದೂ ಅಲ್ಲದೇ ಅನೇಕ ತಿಂಗಳಿಂದ ಶೂನ್ಯ ಹಣ ಇದ್ದ ಕಾರಣ ಕೆಲ ಖಾಸಗಿ ಬ್ಯಾಂಕ್‌ಗಳು ಸೇವಾ ಶುಲ್ಕ ವಿಧಿ ಸಿದ್ದು, ಶಿಕ್ಷಕರಿಗೆ ಹಾಕಿದ ಗೌರವಧನ ಹಣದಲ್ಲಿಯೇ ಕಡಿತಗೊಳಿಸಿ ನೀಡಿವೆ.

ನಮಗೆ ಸುಮಾರು ಒಂದು ವರ್ಷಕ್ಕೂ ಅಧಿಕ ಕಾಲ ವೇತನವೇ ಸಿಕ್ಕಿಲ್ಲ. ಸರ್ಕಾರ ಸಹಾಯಧನ ನೀಡುತ್ತದೆ ಎಂದಾಗ ಎಷ್ಟಾದರೂ ಸರಿ ಅನುಕೂಲವಾಗಲಿದೆ ಎಂದು ಹಣ ಖರ್ಚು ಮಾಡಿಕೊಂಡು ಕೆಎಸ್‌ಎಟಿಯಲ್ಲಿ ನೋಂದಣಿ ಮಾಡಿದ್ದೇವೆ. ಆದರೆ, ನಮ್ಮ ಶಾಲೆಯಲ್ಲೇ ಬೇರೆಯರ ಖಾತೆ ಹಣ ಜಮಾಗೊಂಡಿದ್ದು, ನನ್ನ ಖಾತೆಗೆ ಬಂದಿಲ್ಲ. ವಿಚಾರಿಸಿದರೆ ಸರಿಯಾದ ಸ್ಪಂದನೆ ಕೂಡ ಸಿಗುತ್ತಿಲ್ಲ. ಕನಿಷ್ಟ ಪಕ್ಷ ಇಲಾಖೆಯಾದರೂ ಈ ಬಗ್ಗೆ ಪರಿಶೀಲಿಸಿ ಹಣ ಎಲ್ಲಿ ಹೋಗಿದೆ ಎಂಬುದನ್ನು ತಿಳಿಸಬೇಕಿದೆ.
ನೊಂದ ಖಾಸಗಿ ಶಾಲೆ ಶಿಕ್ಷಕ

ಇದು ನಮ್ಮ ಇಲಾಖೆ ಸಮಸ್ಯೆಯಲ್ಲ. ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿದ ಶಿಕ್ಷಕರಿಗೆ ಹಣ ಲಭಿಸಿದೆ. ಎಲ್ಲ ಬಿಇಒಗಳಿಗೆ ಶೇ.100ಕ್ಕೆ ನೂರರಷ್ಟು ನೋಂದಣಿ ಪ್ರಕ್ರಿಯೆ ಮುಗಿಸಲು ನಿರ್ದೇಶನ ನೀಡಲಾಗಿತ್ತು. ಫಲಾನುಭವಿಗಳು ಬ್ಯಾಂಕ್‌ ಖಾತೆಗಳ ವಿವರ ಸರಿಯಾಗಿ ನೀಡದಿದ್ದರೆ, ಇಲ್ಲ ಏನಾದರೂ ತಾಂತ್ರಿಕ ತೊಂದರೆ ಇದ್ದರೆ ಹಣ ಬಂದಿರಲಿಕ್ಕಿಲ್ಲ.
ವೃಷಭೇಂದ್ರಯ್ಯ,
ರಾಯಚೂರು ಡಿಡಿಪಿಐ

*ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.