ರಾಯಚೂರು ಡಿಸಿಯಾಗಿ ಡಾ.ಸತೀಶ ಅಧಿಕಾರ ಸ್ವೀಕಾರ
Team Udayavani, Jul 23, 2021, 2:54 PM IST
ರಾಯಚೂರು : ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ ಬಿ.ಸಿ. ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವೃತ್ತಿ ಬದುಕಿನಲ್ಲಿ ಜಿಲ್ಲಾಧಿಕಾರಿಯಾಗಿ ಮೊದಲ ಬಾರಿಗೆ ರಾಯಚೂರಿಗೆ ನಿಯೋಜನೆಗೊಂಡಿದ್ದೇನೆ. ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಳ್ಳದೆ ಅಧಿಕಾರದ ಪರಿಮಿತಿಯೊಳಗೆ ಉತ್ತಮ ಕೆಲಸ ಮಾಡುವ ಗುರಿ ಹೊಂದಿದ್ದೇನೆ. ಈ ಭಾಗದಲ್ಲಿ ಹಿಂದೆ ಕೆಲಸ ಮಾಡಿದ್ದು, ಭೌಗೋಳಿಕವಾಗಿ ಸಾಕಷ್ಟು ಮಾಹಿತಿ ಇದೆ. ಆದರೆ, ಈಗಲೇ ಏನೇನು ಕೆಲಸ ಮಾಡುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಸರ್ಕಾರದ ನಿಯಮಾನುಸಾರ ನಿಷ್ಠೆಯಿಂದ ಕೆಲಸ ಮಾಡುವುದಾಗಿ ತಿಳಿಸಿದರು.
2012 ರ ಬ್ಯಾಚ್ ಕೆಎಎಸ್ ಅಧಿಕಾರಿಯಾಗಿದ್ದು, 2017 ರಲ್ಲಿ ಯಾದಗಿರಿ ಜಿಲ್ಲೆಯ ಎಡಿಸಿಯಾಗಿ ಒಂದು ವರ್ಷ ಕೆಲಸ ಮಾಡಿದ್ದೇನೆ. ಪ್ರಸ್ತುತಕ್ಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದೆ. ಕೊಪ್ಪಳದಲ್ಲಿ ಪ್ರೊಬೇಶನರಿಯಾಗಿ ಒಂದು ವರ್ಷ ಹಾಗೂ ಧಾರವಾಡ ಜಿಲ್ಲೆಯ ಜಿಪಂ ಸಿಇಒ ಆಗಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
ಹಿಂದೆ ರಾಯಚೂರು ಡಿಸಿಯಾಗಿದ್ದ ಆರ್. ವೆಂಕಟೇಶ ಕುಮಾರ್ ರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!