ಮಸ್ಕಿ ಪಟ್ಟಣಕ್ಕೆ ಇನ್ಮುಂದೆ ಐದು ದಿನಕ್ಕೊಮ್ಮೆ ಕುಡಿವ ನೀರು


Team Udayavani, Apr 28, 2022, 1:21 PM IST

12water

ಮಸ್ಕಿ: ತುಂಗಭದ್ರಾ ಎಡದಂಡೆ ನಾಲೆಗೆ ನೀರಿನ ಹರಿವು ಸ್ಥಗಿತವಾಗಿದ್ದು, ಪಟ್ಟಣಕ್ಕೆ ಕುಡಿಯುವ ನೀರಿನ ಬರ ಆವರಿಸಲಿದೆ. ಇದುವರೆಗೂ ಎರಡು ದಿನಕ್ಕೊಮ್ಮೆ ಸರಬರಾಜು ಮಾಡುತ್ತಿದ್ದ ನೀರು ಈಗ ಐದು ದಿನಕ್ಕೊಮ್ಮೆಗೆ ವಿಸ್ತರಣೆಯಾಗಿದೆ.

ಪಟ್ಟಣಕ್ಕೆ ಕೆರೆಯಲ್ಲಿ ಸಂಗ್ರಹಿತ ನೀರೇ ಆಧಾರವಾಗಿದ್ದು, ಉಳಿದಂತೆ ಬೋರ್‌ ವೆಲ್‌ (ಕೊಳವೆಬಾವಿ)ಗಳಿವೆ. ಕೆರೆ ಮಾತ್ರ ಕುಡಿಯುವುದಕ್ಕೆ ಬಳಕೆ ಮಾಡಲಾಗುತ್ತಿದ್ದು, ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಬೋರ್‌ ವೆಲ್‌ ನೀರು ಬಳಕೆ ಮಾಡಲಾಗುತ್ತದೆ.

ಬೇಸಿಗೆ ಅವಧಿ ಎದುರಾದರೆ ಕುಡಿಯುವ ನೀರಿನ ಸಮಸ್ಯೆ ಇಲ್ಲಿ ಬಿಗಡಾಯಿಸುವುದು ಸಾಮಾನ್ಯ. ಶಾಶ್ವತ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಗಳು ನಡೆದರೂ ಇದುವರೆಗೂ ಜಾರಿಗೆ ಬಂದಿಲ್ಲ. ಹೀಗಾಗಿ ಈಗ ಇರುವ ಕೆರೆಯೇ ಕುಡಿಯುವ ನೀರಿಗೆ ಆಧಾರವಾಗಿದ್ದು, ಇರುವ ಅಲ್ಪ-ಸ್ವಲ್ಪ ನೀರನ್ನೇ ಬೇಸಿಗೆ ಮೂರು ತಿಂಗಳವರೆಗೂ ನಿರ್ವಹಣೆ ಮಾಡಲು ಪುರಸಭೆ ಹೆಣಗಾಡಬೇಕಿದೆ.

ಹೀಗಿದೆ ಅಂಕಿ-ಸಂಖ್ಯೆ?

ಮಸ್ಕಿ ಪಟ್ಟಣದಲ್ಲಿ 23 ವಾರ್ಡ್‌ಗಳಿದ್ದು, 23,650 ಜನಸಂಖ್ಯೆ ಇದೆ. ಮಸ್ಕಿ ಪ್ರತ್ಯೇಕ ತಾಲೂಕು ಘೋಷಣೆ ಬಳಿಕ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಜನಸಂಖ್ಯೆ ಪ್ರಮಾಣವೂ ಏರಿಕೆಯಾಗುತ್ತಿದ್ದು ಈಗ ಇರುವ ನೀರು ಬೆಳೆಯುತ್ತಿರುವ ಜನಸಂಖ್ಯೆಗೆ ಸಾಲುತ್ತಿಲ್ಲ. ಇರುವ ನೀರನ್ನೇ ತಾಳೆ ಹಾಕಿ ಐದು ದಿನಕ್ಕೊಮ್ಮೆ ಹರಿಸಲು ನಿರ್ಧರಿಸಲಾಗಿದೆ.

ಮಸ್ಕಿ ಪಟ್ಟಣದಲ್ಲಿ ಪ್ರತ್ಯೇಕ ಎರಡು ಕೆರೆಗಳಿದ್ದು (ಒಂದು ದೊಡ್ಡದು, ಮತ್ತೂಂದು ಸಣ್ಣದು) 16 ಎಕರೆಯಲ್ಲಿ ದೊಡ್ಡ ಕೆರೆ ವಿಸ್ತಾರವಾಗಿದೆ. 388 ಎಂಎಲ್‌ಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಇನ್ನು ಮತ್ತೊಂದು 4 ಎಕರೆಯಲ್ಲಿ ಸಣ್ಣ ಕೆರೆಯಿದ್ದು, 32 ಎಂಎಲ್‌ಡಿ ನೀರಿನ ಸಂಗ್ರಹ ಸಾಮರ್ಥ್ಯವಿದೆ. ಒಟ್ಟು 20 ಎಕರೆ ಕೆರೆಯಲ್ಲಿ 420 ಎಂಎಲ್‌ಡಿ ನೀರಿನ ಸಂಗ್ರಹವಿದ್ದು, ಈಗಿರುವ ಜನಸಂಖ್ಯೆಗೆ ಪ್ರತಿದಿನ 2.81 ಎಂಎಲ್‌ಡಿ ನೀರಿನ ಬೇಡಿಕೆ ಇದೆ. ಈ ಪ್ರಕಾರ ನೀರು ಸರಬರಾಜು ಮಾಡಿದರೆ ಮುಂದಿನ 90 ದಿನಗಳವರೆಗೂ ನೀರಿನ ಸರಬರಾಜು ನಡೆಯಲಿದೆ ಎನ್ನುತ್ತಾರೆ ಪುರಸಭೆಯ ಎಂಜಿನಿಯರ್‌ ಪ್ರವೀಣ್‌ಕುಮಾರ್‌ ಸಾಗರ.

ಕೊರತೆ ಶತಸಿದ್ಧ: ಪ್ರತಿ ಬೇಸಿಗೆಯಲ್ಲೂ ಕಾಲುವೆಗೆ ನೀರಿನ ಹರಿಸುವ ಸ್ಥಗಿತದ ಬಳಿಕ ಮಸ್ಕಿ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಸರ್ವೇ ಸಾಮಾನ್ಯವಾಗಿದೆ. ಪುರಸಭೆ ಎಷ್ಟೇ ತಾಳೆ ಹಾಕಿ ಲೆಕ್ಕ ಹಾಕಿದರೂ ಈ ಬಾರಿಯೂ ಕುಡಿಯುವ ನೀರಿನ ಸಮಸ್ಯೆಯಾಗಲಿದೆ ಎನ್ನುತ್ತಾರೆ ಇಲ್ಲಿನ ನಾಗರಿಕರು.

ಇದುವರೆಗೆ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದಾಗಲೂ ಗಾಂಧಿನಗರದ ಮೂರು ವಾರ್ಡ್‌ಗಳು ಸೇರಿ ಕೆಲವು ಕಡೆ ನೀರಿನ ಅಭಾವ ಎದುರಾಗುತ್ತಿತ್ತು. ಈಗ ಐದು ದಿನಕ್ಕೊಮ್ಮೆ ನೀರು ಬಿಡುವ ನಿರ್ಧಾರ ಕೈಗೊಂಡಿದ್ದು, ಜನರು ಜೀವಜಲಕ್ಕೆ ಪರದಾಡುವಂತಹ ಸನ್ನಿವೇಶ ಉಂಟು ಮಾಡಿದೆ.

ಮಸ್ಕಿ ಪಟ್ಟಣದಲ್ಲಿ ಕುಡಿವ ನೀರು ಅಭಾವ ತಪ್ಪಿಸಲು ಈಗಿನಿಂದಲೇ ಪ್ಲ್ಯಾನ್‌ ಹಾಕಿಕೊಳ್ಳಲಾಗಿದೆ. ಈಗ ಸಂಗ್ರಹಿತ ನೀರು ಮುಂದಿನ ಮೂರು ತಿಂಗಳು ಬೇಸಿಗೆ ಅವಧಿಗೆ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ. -ಪ್ರವೀಣ್‌ ಕುಮಾರ ಸಾಗರ, ಜೆಇ ಪುರಸಭೆ ಮಸಿ­ಮಲ್ಲಿಕಾರ್ಜುನ ಚಿಲ್ಕರಾಗಿ­

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.