ಎಂಎನ್ಪಿ ಕಾಲುವೆ ಆಧುನೀಕರಣಕ್ಕೆ ಚಾಲನೆ
Team Udayavani, Jun 7, 2022, 2:27 PM IST
ಮಸ್ಕಿ: ತಾಲೂಕಿನ ಮಾರಲದಿನ್ನಿ ಜಲಾಶಯದ ಎಂಎನ್ಪಿ ಕಾಲುವೆಗಳ ಆಧುನೀಕರಣಕ್ಕೆ ಶಾಸಕ ಆರ್.ಬಸನಗೌಡ ತುರುವಿಹಾಳ ಸೋಮವಾರ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ ನಾಲಾ ಯೋಜನೆ ಜಲಾಶಯವು ಮಸ್ಕಿ ಭಾಗದ ರೈತರ ಪಾಲಿನ ಜೀವನಾಡಿಯಾಗಿದೆ. ಹಲವು ವರ್ಷಗಳಿಂದ ಇಲ್ಲಿನ ಕಾಲುವೆಗಳು ಆಧುನೀಕರಣ ಇಲ್ಲದೇ ಹಾಳಾಗಿದ್ದವು. ಅಚ್ಚುಕಟ್ಟು ಪ್ರದೇಶದ ಕೆಳಭಾಗಕ್ಕೆ ಸಮರ್ಪಕ ನೀರು ತಲುಪದಾಗಿದ್ದವು. ಹೀಗಾಗಿ ಕಾಲುವೆಗಳ ಆಧುನೀಕರಣಕ್ಕೆ 53 ಕೋಟಿ ರೂ. ಮಂಜೂರಾಗಿದ್ದು, ಇಲ್ಲಿನ ಮುಖ್ಯ ಮತ್ತು ವಿತರಣಾ ಕಾಲುವೆಗಳ ಆಧುನೀಕರಣದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ವರದಾನವಾಗಲಿದೆ ಎಂದರು.
ಯೋಜನೆಯ ಆಧುನೀಕರಣ ಕಾಮಗಾರಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಈ ಭಾಗದ ರೈತರು ಬಹುದಿನದ ಬೇಡಿಕೆ ಈಡೇರಿದೆ. ಸಣ್ಣ ಜಲಾಶಯವಾದರೂ ಬಲ ಮತ್ತು ಎಡದಂಡೆ ಭಾಗದ ರೈತರ ಜಮೀನುಗಳಿಗೆ ಅನುಕೂಲವಾಗಿದೆ. ಯೋಜನೆ ವ್ಯಾಪ್ತಿಯ ರೈತರು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಹಕಾರ ನೀಡಿ ತಮ್ಮದೇ ಕಾಮಗಾರಿ ಎಂಬಂತೆ ಉತ್ತಮ ಕೆಲಸ ಮಾಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಅಮರಗುಂಡಪ್ಪ ಮೇಟಿ, ಆದನಗೌಡ ದಳಪತಿ, ಸಿದ್ದನಗೌಡ ಮಾಟೂರು, ಶ್ರೀಶೈಲಪ್ಪ ಬ್ಯಾಳಿ, ಹನುಮಂತಪ್ಪ ಮುದ್ದಾಪೂರ, ಮೈಬೂಸಾಬ ಮುದ್ದಾಪೂರ, ಮಲ್ಲಪ್ಪ ನಾಗರಬೆಂಚಿ, ಬಸನಗೌಡ ಮಾರಲದಿನ್ನಿ, ಯೋಜನೆಯ ಎಇಇ ಗುರುಮೂರ್ತಿ, ಎಂಜನಿಯರ್ ದಾವುದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ