ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯತ್ನ: ವೆಂಕಟೇಶ ಕುಮಾರ
Team Udayavani, Sep 30, 2020, 4:31 PM IST
ರಾಯಚೂರು: ಐತಿಹಾಸಿಕವಾಗಿ ಮಹತ್ವದ ಸ್ಥಾನ ಪಡೆದಿರುವ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಸೆಳೆಯಲು ಪ್ರಯತ್ನ ಮಾಡುವುದಾಗಿ ಜಿಲ್ಲಾಧಿ ಕಾರಿ ಆರ್. ವೆಂಕಟೇ‚ಶ ಕುಮಾರ್ ತಿಳಿಸಿದರು.
ನಗರದ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಐತಿಹಾಸಿಕ ತಾಣಗಳಿದ್ದು, ನಿರ್ವಹಣೆಗೆ ಒತ್ತು ನೀಡಲಾಗುವುದು. ರಾಯಚೂರು ಕೋಟೆ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದರು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಮಾತನಾಡಿ, ನಗರದ ಕೋಟೆ, ಮಾನವಿ, ಕಲ್ಲೂರು, ಮುದಗಲ್, ಮಸ್ಕಿ, ಮಲಿಯಾಬಾದ್ ಸೇರಿ 10 ಪ್ರಮುಖ ಪ್ರವಾಸೋದ್ಯಮ ತಾಣ ಸರ್ಕಾರ ಗುರುತಿಸಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಸ್ಥಳಗಳಲ್ಲಿ ಯಾತ್ರಿ ನಿವಾಸ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಸ್ವಚ್ಛತಾ ಪಕ್ವಾಡ-2020 ಘೋಷ ವಾಕ್ಯದಡಿ ಸೈಕಲ್ ಜಾಥಾ ನಡೆಸಲಾಯಿತು. ಜಾಥಾ ಡಿಸಿ ಕಚೇರಿಯಿಂದ ಶುರುವಾಗಿ ಬಸವೇಶ್ವರ- ಅಂಬೇಡ್ಕರ್ ವೃತ್ತದ ಮೂಲಕ ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಕೋಟೆಗೆ ತಲುಪಿತು. ಬಳಿಕ ಕೋಟೆಯಲ್ಲಿ ಸ್ವತ್ಛತಾ ಅಭಿಯಾನ ಮಾಡಲಾಯಿತು.
ಈ ವೇಳೆ ಜಿಪಂ ಸಿಇಒ ಜಿ. ಲಕ್ಷ್ಮೀಕಾಂತ ರೆಡ್ಡಿ, ಎಡಿಸಿ ದುರಗೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಮಕೃಷ್ಣ, ಡಿಯುಡಿಸಿ ಪಿಡಿ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ ದೊಡ್ಡಮನಿ, ಡಾ| ವಿಜಯ ಶಂಕರ, ತ್ರಿವಿಕ್ರಮ ಜೋಷಿ, ಶ್ರೀನಿವಾಸ ರಾಯಚೂರಕರ್, ರಾಜೇಂದ್ರ ಜಲ್ದಾರ್, ರಾಜೇಂದ್ರ ಶಿವಾಳೆ ಹಾಗೂ ರೆಡ್ ಕ್ರಾಸ್ ಸಂಸ್ಥೆ ಮುಖಂಡರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!