ಸಾಹಿತ್ಯದಿಂದ ಜಾತೀಯತೆ-ಅಸಮಾನತೆ ನಿವಾರಣೆ


Team Udayavani, Mar 22, 2021, 7:53 PM IST

ncvbnbvcbvcnbcvb

ರಾಯಚೂರು: ಒಂದೆಡೆ ದೇಶ ತಾಂತ್ರಿಕವಾಗಿ ಹೇಗೆ ಬೆಳೆಯುತ್ತಿದೆಯೋ, ಮತ್ತೂಂದೆಡೆ ಅದೇ ವೇಗದಲ್ಲಿ ಜಾತೀಯತೆ ಕೂಡ ಬೇರು ಬಿಡುತ್ತಿದೆ. ಜಾತೀಯತೆ ನಿವಾರಿಸುವ ಶಕ್ತಿ ಸಾಹಿತ್ಯಕ್ಕೆ ಮಾತ್ರ ಇದೆ ಎಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದಲ್ಲಿ ಭಾನುವಾರ ದಲಿತ ಸಾಹಿತ್ಯ ಪರಿಷತ್‌ನಿಂದ ಏರ್ಪಡಿಸಿದ್ದ ವೆಂಕಟೇಶ ಬೇವಿನಬೆಂಚಿ ರಚಿಸಿದ ಮಹಾತ್ಮ ಗಾಂ ಧೀಜಿ ಮತ್ತು ಸುಭಾಷ್‌ ಚಂದ್ರಬೋಸ್‌ ಹಾಗೂ ಶಿವಶಂಕರ ಸೀಗೆಹಟ್ಟಿ ಅವರ ಕರುಳ ಬಳ್ಳಿ ಮತ್ತು ಜೀವಕಾರುಣ್ಯ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ದಲಿತ ಸಾಹಿತ್ಯಕ್ಕೆ ತನ್ನದೆಯಾದ ಇತಿಹಾಸವಿದೆ. ಬಡವರ, ಶೋಷಿತರ ಧ್ವನಿಯಾಗಿದೆ. ದಲಿತ ಸಾಹಿತ್ಯಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರವಾಗಿದೆ.

ಈ ಭಾಗದ ಸಾಹಿತಿಗಳು ಸಾಕಷ್ಟು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ ಎಂದರು. ವೈಚಾರಿಕತೆ, ಸಾಕ್ಷರತೆ ಬೆಳೆದಂತೆ ಮೌಡ್ಯ, ಅಂಧಾಚಾರಗಳು ತೊಲಗಬೇಕಾಗಿತ್ತು. ಆದರೆ, ಅದು ಹೆಚ್ಚಾಗುತ್ತಲೇ ಸಾಗುತ್ತಿದೆ. ಇಂದಿಗೂ ದೇಶದಲ್ಲಿ ಜಾತಿ ಹೆಸರಿನಲ್ಲಿ ಶೋಷಣೆ ನಡೆಯುತ್ತಿರುವುದು ವಿಪರ್ಯಾಸ. ಡಾ| ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ರಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿ ಮಾಡುವ ಮೂಲಕ ಸರ್ವರ ಸಮಾನತೆಗೆ ಶ್ರಮಿಸಿದ್ದರು. ಅನೇಕ ಕಡೆ ಜಾತಿ ಹೆಸರಿನಲ್ಲಿ ಇಂದಿಗೂ ಅಸಮಾನತೆ ಮುಂದುವರಿಯುತ್ತಿರುವುದು ಖೇದಕರ ಎಂದರು.

ಮಾನವೀಯ ಮೌಲ್ಯ ಬಿತ್ತರಿಸುವ ಗ್ರಂಥ, ಲಿಖೀತ ಸಂವಿಧಾನವನ್ನು ಕಡೆಗಣಿಸಿ ಅಲಿಖೀತ ನಿಯಮಗಳನ್ನೇ ಅನುಕರಿಸುವುದು ಸರಿಯಲ್ಲ. ದೇಶದಲ್ಲಿ ಭೀಮನಾಮ ಬಿಟ್ಟು ರಾಮನಾಮ ಜನ ಹೆಚ್ಚುತ್ತಿದೆ. ರಾಮನಾಮದಿಂದ ಹಸಿವು ನೀಗಿಸಲು ಅಸಾಧ್ಯ. ಮನುಷ್ಯ-ಮನುಷ್ಯ ನಡುವೆ ಪ್ರೀತಿ ವಾತ್ಸಲ್ಯ ಮೂಡಬೇಕು ಎಂದರು.

ಅವಕಾಶವಾದಿಗಳು, ಸಮಯ ಸಾಧಕರು ಸಂವಿಧಾನ ಶಕ್ತಿ ಕುಗ್ಗಿಸಲು ಯತ್ನಿಸುತ್ತಿದ್ದಾರೆ. ದೇಶದ ಸಂವಿಧಾನಕ್ಕೆ ಧಕ್ಕೆಯಾದರೆ ದೇಶಕ್ಕೆ ಆಪತ್ತು ಎಂಬುದನ್ನು ಅರಿಯಬೇಕು. ಸಂವಿಧಾನ ರಕ್ಷಣೆ ಆಗಲೇಬೆಕು. ಅಂಬೇಡ್ಕರ್‌ ಅವರ ದೂರದೃಷ್ಟಿ, ಕಾಳಜಿಯನ್ನು ಎಲ್ಲರೂ ಅರಿತು ಬಾಳಬೇಕು.

ಸಮಾಜದ ಬದಲಾವಣೆಗೆ ಸಂಘಟಿತವಾಗಿ ಹೋರಾಟ, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು. ಸಾಹಿತಿ ಡಿ.ಎಚ್‌. ಕಂಬಳಿ, ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ಬಿ.ಎಂ.ಶರಭೇಂದ್ರ ಸ್ವಾಮಿ ಕೃತಿ ಪರಿಚಯಿಸಿದರು. ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್‌.ಮೋಹನ್‌, ರಾಜೇಂದ್ರ ಜಲ್ದಾರ್‌, ಹಿರಿಯ ಉಪನೋಂದಣಾ ಧಿಕಾರಿ ರಾಮಚಂದ್ರಪ್ಪ, ಜಿಲ್ಲಾ ಶಿಕ್ಷಣಾಧಿ ಕಾರಿ ಎಚ್‌.ಸುಖದೇವ್‌, ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ತಾಯರಾಜ್‌ ಮರ್ಚೆಟಾಳ್‌, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಲ್ಲಿಕಾರ್ಜುನ ಶಿಖರಮಠ, ಬಸವರಾಜ ಬ್ಯಾಗವಾಟ್‌, ಬಿ.ವಿಜಯ ರಾಜೇಂದ್ರ, ವೆಂಕಟೇಶ ಬೇವಿನಬೆಂಚಿ, ಕೋರೆನಲ್‌, ರಾಜೀವ್‌ಗೌಡ, ಹಂಪಿ ಕನ್ನಡ ವಿವಿಯ ಶಿವಕುಮಾರ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.