“ಹರಿ ನೀರಾವರಿ’ಗೆ ಬೆಂಗಳೂರಲ್ಲಿ ತುರ್ತು ಸಭೆ

ಸಾಧಕ-ಬಾಧಕ ಚರ್ಚೆಗೆ ತಜ್ಞರ ಜತೆ ಸಮಾಲೋಚನೆ ,ಎರಡು ದಿನದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ

Team Udayavani, Dec 9, 2020, 1:31 PM IST

“ಹರಿ ನೀರಾವರಿ’ಗೆ ಬೆಂಗಳೂರಲ್ಲಿ ತುರ್ತು ಸಭೆ

ಮಸ್ಕಿ: ಮತಕ್ಷೇತ್ರದಲ್ಲಿ ಹನಿ ನೀರಾವರಿಗಿಂತ ಹರಿ ನೀರಾವರಿ ಬೇಡಿಕೆ ಹೆಚ್ಚು ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ಚುನಾವಣೆ ಬಹಿಷ್ಕಾರದಘೋಷಣೆಯೂ ಮೊಳಗಿವೆ. ಹೀಗಾಗಿತಡವಾಗಿಯಾದರೂ ಎಚ್ಚೆತ್ತ ಸರ್ಕಾರ ತರ್ತು ಸಭೆ ಆಯೋಜನೆ ಮಾಡಿದೆ. ತಜ್ಞರ ಜತೆಸಮಾಲೋಚನೆಯೊಂದಿಗೆ ಸಮಸ್ಯೆ ಇತ್ಯರ್ಥಕ್ಕೆ ಶತ ಪ್ರಯತ್ನ ನಡೆಸಿದೆ.

ನಾರಾಯಣಪುರ ಬಲದಂಡೆ ಕಾಲುವೆಯ ಶಾಖಾ ಕಾಲುವೆ 5ಎ ಅನುಷ್ಠಾನಕ್ಕೆಒತ್ತಾಯಿಸಿ ಕಳೆದ 18 ದಿನಗಳಿಂದ ರೈತರಹೋರಾಟ ಚುರುಕಾಗಿದೆ. ದಿನಗಳುಉರುಳಿದಂತೆ ಚಳವಳಿಯ ಕಾವು ತೀವ್ರ ಸ್ವರೂಪ ಪಡೆಯುತ್ತಿದೆ. ಈ ಯೋಜನೆ ಲಾಭ ಪಡೆಯುವ 30ಕ್ಕೂ ಹೆಚ್ಚು ಹಳ್ಳಿಗರುಈಗಾಗಲೇ ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೂನಿರ್ಧಾರ ಕೈಗೊಂಡಿದ್ದಾರೆ. ಇದಕ್ಕಾಗಿ ರಾಯಚೂರು-ಕೊಪ್ಪಳ ಹಾಗೂ ಮಸ್ಕಿಯ ಹಾಲಿ-ಮಾಜಿ ಚುನಾಯಿತ ಪ್ರತಿನಿಧಿ  ಗಳು ಬೆಂಗಳೂರಿಗೆ ನಿಯೋಗ ತೆರಳಿದ್ದಾರೆ. ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ಠಿಕಾಣಿ ಹೂಡಿ ಇಲ್ಲಿನ ರೈತರ ಬೇಡಿಕೆಯನ್ನು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಮನವೊಲಿಕೆ ಕಸರತ್ತು: ಡಿಸಿ ಎಂ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ,ರಾಯಚೂರು, ಕೊಪ್ಪಳ ಸಂಸದರು, ರಾಯಚೂರು ಹಾಲಿ ಶಾಸಕ ತಿಪ್ಪರಾಜ ಹವಾಲ್ದಾರ್‌, ಸುರುಪುರ ಶಾಸಕ ರಾಜುಗೌಡ,ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಬೆಂಗಳೂರಲ್ಲಿ ಬಿಡಾರ ಹೂಡಿದ್ದಾರೆ. ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಅವರನ್ನು ಕಳೆದೆರಡು ದಿನಗಳಲ್ಲಿ ಪ್ರತ್ಯೇಕವಾಗಿ ಎರಡ್ಮೂರು ಬಾರಿ ಭೇಟಿ ಮಾಡಿ ಇಲ್ಲಿನ ಪರಿಸ್ಥಿತಿ ವಿವರಿಸಿದ್ದಾರೆ. ರೈತರ ನೀರಾವರಿ ಬೇಡಿಕೆ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ಪ್ರಕಟಿಸಲೇಬೇಕಾಗಿದೆ. ಇಲ್ಲವಾದರೆ ಕೇವಲಗ್ರಾಪಂ ಚುನಾವಣೆಗೆ ಮಾತ್ರವಲ್ಲ; ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೂ ಪೆಟ್ಟು ಬೀಳಲಿದೆ ಎನ್ನುವ ಸಂದೇಶ ಸಾರಿದ್ದಾರೆ.

ತುರ್ತು ಸಭೆ: ರಾಯಚೂರು-ಕೊಪ್ಪಳದ ಹಾಲಿ-ಮಾಜಿ ಚುನಾಯಿತರ ನಿಯೋಗದ ಜತೆ ಚರ್ಚೆ ನಡೆಸಿದ ನೀರಾವರಿ ಸಚಿವ ರಮೇಶ ಜಾರಕಿಹೊಳಿ ಡಿ.9ರಂದುಬೆಂಗಳೂರಿನ ವಿಧಾನ ಸೌಧದಲ್ಲಿ ತುರ್ತು ಸಭೆ ಆಯೋಜನೆ ಮಾಡಿದ್ದಾರೆ. ಕೃಷ್ಣಾ ಭಾಗ್ಯ ಜಲ ನಿಗಮದ ನುರಿತ ಎಂಜಿನಿಯರ್‌ಗಳು, ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. 5ಎ ಕಾಲವೆ ಅನುಷ್ಠಾನದ ಸಾಧಕ-ಬಾಧಕಗಳು, ನೀರಿನ ಲಭ್ಯತೆ, ತಾಂತ್ರಿಕ ಅಡಚಣೆ, ಆರ್ಥಿಕ ಪರಿಸ್ಥಿತಿ ಸೇರಿ ಎಲ್ಲವೂ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ. ಒಂದು ವೇಳೆ 5ಎ ಕಾಲುವೆ ಅನುಷ್ಠಾನಕ್ಕೆ ಸದ್ಯತೊಡಕು ಉಂಟಾದರೆ ಪರ್ಯಾಯ ಕ್ಷೇತ್ರಕ್ಕೆ ಕಲ್ಪಿಸಬೇಕಾದ ನೀರಾವರಿ ವ್ಯವಸ್ಥೆಗೆ ಇರುವ ಮಾರ್ಗಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಎರಡು ದಿನದಲ್ಲಿ ನಿರ್ಧಾರ:

ಚುನಾವಣೆ ಬಹಿಷ್ಕಾರದ ಅಸ್ತ್ರ ಕೇವಲ ಇಲ್ಲಿನ ಚುನಾಯಿತರು, ಜಿಲ್ಲಾಡಳಿತಕ್ಕೆ ಮಾತ್ರವಲ್ಲದೇ ಸರ್ಕಾರಕ್ಕೂ ಸವಾಲಾಗಿದೆ. 5ಎ ಕಾಲುವೆ ಇಲ್ಲವೇ ಪರ್ಯಾಯ ಮಾರ್ಗದ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆದಿದೆ. ಈ ಭಾಗದಲ್ಲಿ ಡಿ.11ರಿಂದ ಗ್ರಾಪಂ ಚುನಾವಣೆಗೆನಾಮಪತ್ರ ಸಲ್ಲಿಕೆ ಆರಂಭವಾಗುವುದರಿಂದ ಎರಡು ದಿನದಲ್ಲೇ ಈ ನಿರ್ಧಾರ ಬೀಳುವ ಸಾಧ್ಯತೆ ಇದೆ.

1200 ಕೋಟಿ ಹಸ್ತಾಂತರಕ್ಕೆ‌ ಮನವಿ :

ಮಸ್ಕಿ ಹಾಗೂ ಲಿಂಗಸುಗೂರು ಕ್ಷೇತ್ರಕ್ಕೆ ಈಗಾಗಲೇ ನಂದವಾಡಗಿ ಏತ ನೀರಾವರಿ ಮೂಲಕ ಸೂಕ್ಷ್ಮ ಹನಿ (ಡ್ರಿಪ್‌ ಇರಿಗೇಶನ್‌) ನೀರಾವರಿಗೆ ಪ್ರತ್ಯೇಕ 3 ಸಾವಿರ ಕೋಟಿ ರೂ. ನೀಡಿದೆ. 1800ಕೋಟಿ ರೂ. ಮೊತ್ತದ ಕಾಮಗಾರಿಗೆಈಗಾಗಲೇ ಚಾಲನೆ ನೀಡಲಾಗಿದೆ (ಬಹುಭಾಗ ಲಿಂಗಸುಗೂರು, ಭಾಗಶಃ ಮಸ್ಕಿ). ಆದರೆ ಎರಡನೇ ಹಂತ 1200 ಕೋಟಿ ರೂ. ಮೊತ್ತದ ಕಾಮಗಾರಿಗೆ ಟೆಂಡರ್‌ಪ್ರಕ್ರಿಯೆ ನಡೆಯಬೇಕಿದೆ. ಈ ಯೋಜನೆಯಲ್ಲಿ ಮಸ್ಕಿಯ ಬಹುಭಾಗಹಳ್ಳಿಗಳು ನೀರಾವರಿಗೆ ಒಳಪಡಲಿವೆ. ಆದರೆ ಇಲ್ಲಿನ ರೈತರು ಹನಿ ನೀರಾವರಿ ವ್ಯವಸ್ಥೆಯನ್ನೇ ವಿರೋಧಿ ಸುತ್ತಿದ್ದಾರೆ.ಹನಿ ನೀರಾವರಿ ಬದಲು ಹರಿ ನೀರಾವರಿ(ಕಾಲುವೆ ಮೂಲಕ) ವ್ಯವಸ್ಥೆ ಕಲ್ಪಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇಲ್ಲಿನ ರೈತರ ಬೇಡಿಕೆಯನ್ನು ಮನವಿಸರ್ಕಾರದ ಮುಂದಿಟ್ಟಿದ್ದೇವೆ. ಕಳೆದ ಒಂದು ವಾರದಿಂದ ಇದೇ ಪ್ರಯತ್ನದಲ್ಲಿದ್ದೇವೆ. ರೈತರ ನೀರಾವರಿ ಬೇಡಿಕೆ ಈಡೇರಿಸಲು ಸರ್ಕಾರವೂಬದ್ಧವಾಗಿದೆ. ಎರಡು ದಿನದಲ್ಲಿ ನಿರ್ಧಾರ ಪ್ರಕಟವಾಗಲಿದೆ. –ಪ್ರತಾಪಗೌಡ ಪಾಟೀಲ್‌, ಮಾಜಿ ಶಾಸಕ, ಮಸ್ಕಿ

 

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.