ನೌಕರರು ಆತ್ಮಾವಲೋಕನ ಮಾಡಿಕೊಳ್ಳಲಿ


Team Udayavani, Dec 9, 2018, 12:26 PM IST

ray-1.jpg

ರಾಯಚೂರು: ಸರ್ಕಾರಿ ನೌಕರರು ಕೇವಲ ಸೌಲಭ್ಯಗಳ ಬಗ್ಗೆ ಮಾತ್ರ ಚಿಂತಿಸದೆ ಕೆಲಸದ ಬಗ್ಗೆಯೂ ಶ್ರದ್ಧೆ ವಹಿಸಬೇಕು. ಸರ್ಕಾರ ನೀಡುವ ಸಂಬಳಕ್ಕೆ ನಾವು ಎಷ್ಟರ ಮಟ್ಟಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡತಿಳಿ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘವು ಶನಿವಾರ ನಗರದ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಕಲಬುರಗಿ ವಿಭಾಗೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ನೌಕರರು ಕೇವಲ ನಿಮ್ಮ ಸಮಸ್ಯೆಗಳ ಚರ್ಚೆ ಮಾತ್ರವಲ್ಲದೇ ನಿಮ್ಮಿಂದ ಆಗಬೇಕಾದ
ಕೆಲಸದ ಕುರಿತೂ ಚರ್ಚಿಸಬೇಕು. ಇಂದು ಸಾಕಷ್ಟು ನೌಕರರು ಗಡಿಯಾರ ನೋಡಿ ಕೆಲಸ ಮಾಡುತ್ತಾರೆ.

ಒಂದೊಂದು ಕಡತ ವಾರವಾದರೂ ವಿಲೇವಾರಿ ಆಗುವುದಿಲ್ಲ. ಇಂದು ನೀವು ಶ್ರದ್ಧೆಯಿಂದ ಕೆಲಸ ಮಾಡಿದ್ದರೆ ಸಿಎಂ ಜನಸ್ಪಂದನ ಸಭೆಯಲ್ಲಿ ಸಹಸ್ರಾರು ಅರ್ಜಿಗಳು ಬರುತ್ತಿರಲಿಲ್ಲ ಎಂದರು.

ಚೆನ್ನಾಗಿ ಕೆಲಸ ಮಾಡಿದರೆ ಯಾರೂ ಕಿರೀಟ ತೊಡಿಸುವುದಿಲ್ಲ. ಹಾಗಂತ ಆತ್ಮಸಾಕ್ಷಿ ವಿರುದ್ಧವಾಗಿ ಕೆಲಸ ಮಾಡುವುದಲ್ಲ. ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ನಮ್ಮ ನಿಮ್ಮ ಪಾಲಿಗೆ ರಾಜ್ಯದ ಜನರೇ ದೇವರು. ಆದರೆ, ಇಂದು ಅವರ ಪಾಲಿಗೆ ನೀವು ದೇವರಾಗದಿದ್ದರೂ ಪರವಾಗಿಲ್ಲ, ದೆವ್ವಗಳಾಗದಿರಿ ಎಂದರು.

ಸರ್ಕಾರಿ ನೌಕರರಲ್ಲೇ ಹತ್ತಾರು ಸಂಘಗಳು ಹುಟ್ಟಿಕೊಂಡಿವೆ. ಕೆಲವರು ನಮಗೆ ಕೆಲಸ ಮಾಡಿ ಎಂದರೆ, ಮರುಕ್ಷಣವೇ ಕೆಲವರು ಅದು ಬೇಡ ಮತ್ತೂಂದು ಮಾಡಿ ಎನ್ನುತ್ತಾರೆ. ನೀವೆಲ್ಲ ಒಗ್ಗಟ್ಟಾಗಿ ಬಂದಾಗ ಸಮಸ್ಯೆ ಬಗೆಹರಿಸಬಹುದು ಎಂದು ಹೇಳಿದರು.

ಎನ್‌ಪಿಎಸ್‌ ರದ್ದತಿ ವಿಷಯ ಸರ್ಕಾರದ ಮಟ್ಟದಲ್ಲಿದೆ. ಇನ್ನೊಂದು ತಿಂಗಳಲ್ಲಿ ರದ್ದಾಗುವ ಸಾಧ್ಯತೆ ಇದೆ. 371 (ಜೆ) ಅನುಷ್ಠಾನ ಸಮಿತಿಯಲ್ಲಿ ಸದಸ್ಯನಾಗಿರುವ ಹಿನ್ನೆಲೆ ನಮ್ಮ ಭಾಗದ ಶಿಕ್ಷಣ, ಉದ್ಯೋಗದಲ್ಲಿನ ಮೀಸಲಾತಿ ಸೌಲಭ್ಯದ ಬಗ್ಗೆ ಸದನದಲ್ಲಿ ಮಾತನಾಡುವೆ. ಮುಖ್ಯವಾಗಿ ಈ ಭಾಗದಲ್ಲಿ ಬಡ್ತಿ ವಿಚಾರದಲ್ಲಿ ಸಾಕಷ್ಟು ಅನ್ಯಾಯವಾಗುತ್ತಿರುವ ವಿಚಾರ ಗಮನಕ್ಕಿದೆ. ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಉಪನ್ಯಾಸಕ ಡಾ| ಎನ್‌.ಕೆ.ಪದ್ಮನಾಭ ವಿಷಯ ಮಂಡಿಸಿ, ಸರ್ಕಾರಿ ನೌಕರರಿಗೆ ಹಂತ ಹಂತವಾಗಿ ಅಭದ್ರತೆ ಕಾಡುತ್ತಿದೆ. ಪ್ರತಿ ಹಂತದಲ್ಲೂ ಸರ್ಕಾರ ನೌಕರರ ಹಿತ ಮರೆಯುತ್ತಿದೆ. ಮುಖ್ಯವಾಗಿ ಪಿಂಚಣಿ ಸೌಲಭ್ಯ ರದ್ದು, ಏಜೆನ್ಸಿ ಮೂಲಕ ನೇಮಕಾತಿ, ಅನಗತ್ಯ ಕೆಲಸದ ಹೊರೆ, ಶಾಲೆಗಳನ್ನು ದುರ್ಬಲ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಬಗ್ಗೆ ನಮ್ಮ ಜನಪ್ರತಿನಿಧಿಗಳು ನಮ್ಮ ಪರ ನಿಲ್ಲಬೇಕು ಎಂದು ಒತ್ತಾಯಿಸಿದರು.

ಸಂಘದ ರಾಜ್ಯಾಧ್ಯಕ್ಷ ಎಚ್‌.ಕೆ.ರಾಮು ಮಾತನಾಡಿದರು. ಮೆಹಬೂಬ್‌ ಪಾಷಾ ಮೂಲಿಮನಿ ಪ್ರಾಸ್ತಾವಿಕ ಮಾತನಾಡಿದರು. ಶಾಸಕ ಬಸನಗೌಡ ದದ್ದಲ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಶರತ್‌ ಬಿ., ಜಿಪಂ ಸಿಇಒ ನಲಿನ್‌ ಅತುಲ್‌, ಮುಖಂಡರಾದ ತಿಮ್ಮಯ್ಯ ಪುರ್ಲೆ, ಎ.ಪುಟ್ಟಸ್ವಾಮಿ, ಬಸವರಾಜ ಗುರಿಕಾರ, ಸಿ.ಎಸ್‌.ಷಡಕ್ಷರಿ, ಆರ್‌. ಶ್ರೀನಿವಾಸ ಸೇರಿ ಅನೇಕರಿದ್ದರು.

ನಿಯಮ ಮೀರಿ; ಮುರಿಯದಿರಿ ಕೆಲವೊಮ್ಮೆ ಜನರ ಕೆಲಸ ಮಾಡಬೇಕಾದಾಗ ನಿಯಮ ಮೀರಬೇಕಾಗುತ್ತದೆ. ಆದರೆ, ಬಹುತೇಕ ನೌಕರರು ನಿಯಮಗಳನ್ನು ಮುರಿದು ಕೆಲಸ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅಂಥ ಕೆಲಸ ಮಾಡದಿರಿ. ಕೆಲ ಅಧಿಕಾರಿಗಳಿಗೆ ತಪ್ಪು ಹುಡುಕುವುದೇ ಕೆಲಸ. ಸಣ್ಣ ದೋಷ ಕಂಡರೂ ಕಡತವನ್ನೂ ಮೂಲೆಗೆ ಸೇರಿಸುತ್ತಾರೆ. ಚಿಕ್ಕಪುಟ್ಟ ತಪ್ಪುಗಳಿದ್ದರೆ ಸರಿಪಡಿಸಿ ಆ ಕೆಲಸ ಆಗುವಂತೆ ಮಾಡಿ.  ವೆಂಕಟರಾವ್‌ ನಾಡಗೌಡ,ಜಿಲ್ಲಾ ಉಸ್ತುವಾರಿ ಸಚಿವ

ತಂತ್ರಜ್ಞಾನ ಬಳಸಿಕೊಳ್ಳಿ ದೇಶದಲ್ಲಿ ಪೇಪರ್‌ರಹಿತ ಕಚೇರಿಗಳನ್ನು ಕಂಡಿದ್ದೇನೆ. ಈಗಾಗಲೇ ಬಹುತೇಕ ಕಚೇರಿಗಳು ಶೇಕಡಾವಾರು ಅದೇ ರೀತಿ ನಿರ್ಮಾಣಗೊಳ್ಳುತ್ತಿವೆ. ಆದರೂ ಅಧಿಕಾರಿಗಳು ಸಕಾಲಕ್ಕೆ ಕಡತಗಳ ವಿಲೇವಾರಿ ಮಾಡುವುದಿಲ್ಲ. ಸಿಬ್ಬಂದಿ ಜತೆ ಸಮನ್ವಯತೆ ಸಾಧಿಸುವ ಮೂಲಕ ಆಗುವ ಕೆಲಸಗಳನ್ನು ತ್ವರಿತವಾಗಿ ಮುಗಿಸಬೇಕು. ಅದಕ್ಕೆ ಆದೇಶ ಬರಲಿ, ನಮ್ಮನ್ನು ಯಾರಾದರೂ ಪ್ರಶ್ನಿಸಲಿ ಎಂದು ಕಾಯುವುದಲ್ಲ. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಚಿವ ನಾಡಗೌಡ ಸಲಹೆ ನೀಡಿದರು. 

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.