ಸಬಲೀಕರಣ ಯೋಜನೆ ಸದ್ಬಳಕೆಯಾಗಲಿ: ಹಸಮಕಲ್
Team Udayavani, Jan 14, 2022, 5:57 PM IST
ಸಿಂಧನೂರು: ಎಲ್ಲ ರಂಗದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ನಗರಸಭೆ ಸಿಎಒ ದುರುಗಪ್ಪ ಹಸಮಕಲ್ ಹೇಳಿದರು.
ನಗರಸಭೆಯಲ್ಲಿ ನಲ್ಮ್ ಯೋಜನೆಯಡಿ ಸಾಮಾಜಿಕ ಮತ್ತು ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಪ್ರದೇಶ ಮಟ್ಟದ ಒಕ್ಕೂಟಗಳ ಪದಾಧಿಕಾರಿಗೆ ಹಾಗೂ ಸ್ವಸಹಾಯ ಸಂಘದ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಗುಂಪು ರಚನೆ ಮಾಡಿಕೊಂಡರೆ, ಸಾಕಷ್ಟು ಅನುಕೂಲವಾಗುತ್ತದೆ. ನಾಯಕತ್ವ ಗುಣ ಬೆಳೆಯುತ್ತದೆ. 10 ಜನರ ಮಹಿಳೆಯರು ಸೇರಿ ಗುಂಪು ರಚಿಸಿಕೊಳ್ಳಬೇಕು. 10 ಮಹಿಳಾ ಗುಂಪುಗಳು ಸೇರಿ ಪ್ರದೇಶ ಮಟ್ಟದ ಒಕ್ಕೂಟ ರಚಿಸಿಕೊಳ್ಳಬಹುದು. ಉಳಿತಾಯ ಗುಂಪುಗಳ ದಾಖಲಾತಿ ನಿರ್ವಹಣೆ ಹಾಗೂ ಉಳಿತಾಯ ಚಟುವಟಿಕೆ, ಆಂತರಿಕ ಸಾಲ ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಸರಕಾರದಿಂದ ಆವರ್ತ ನಿಧಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸುನಿತಾ ಚನ್ನಾರೆಡ್ಡಿ ಮಾತನಾಡಿದರು. ಯುಎಲ್ ಡಿಪಿ ಸಂಪನ್ಮೂಲ ವ್ಯಕ್ತಿ ಗಿರಿಜಾರಾಮ್, ಜಿಲ್ಲಾ ಕೌಶಾಲಾಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ರಸೂಲ್ ಪಿಪಿಟಿ ಮೂಲಕ ತರಬೇತಿ ನೀಡಿದರು. ನಗರಸಭಾ ವ್ಯವಸ್ಥಾಪಕಿ ರೇಖಾ, ಸ್ಪಂದನಾ, ನಂದೀಶ್ವರ ಪ್ರದೇಶ ಮಟ್ಟ ಒಕ್ಕೂಟದ ಪದಾಧಿಕಾರಿಗಳು ಹಾಗೂ ಎಸ್ಎಚ್ಜಿ ಗುಂಪಿನ ಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ