ಸಮಾಜಮುಖೀ ಕಾರ್ಯಗಳಿಗೆ ಪ್ರೋತ್ಸಾಹ ನೀಡಿ: ಸಜ್ಜನ್
Team Udayavani, Jan 6, 2022, 6:09 PM IST
ಲಿಂಗಸುಗೂರು: ಸಮಾಜಮುಖೀ ಕೆಲಸ ಮಾಡುವವರಿಗೆ ನಿತ್ಯವೂ ಪ್ರೋತ್ಸಾಹ ನೀಡಬೇಕು ಎಂದು ಸಿಪಿಐ ಮಹಾಂತೇಶ ಸಜ್ಜನ್ ಹೇಳಿದರು.
ಪಟ್ಟಣದಲ್ಲಿ ಸಮೃದ್ಧಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಉಚಿತ ಬಟ್ಟೆ ವಿತರಣೆ ಹಾಗೂ ಅನ್ನಸಂತರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮೃದ್ಧಿ ಗೆಳೆಯರ ಬಳಗ ಪಟ್ಟಣದ ಎರಡು ಕಡೆಗಳಲ್ಲಿ ಕರುಣೆ ಪೆಟ್ಟಿಗೆಯನ್ನು ಇಟ್ಟಿದ್ದಾರೆ. ಸಾರ್ವಜನಿಕರು ಅವಶ್ಯಕತೆಯಿಲ್ಲದ ಬಟ್ಟೆಗಳನ್ನು ತಂದು ಪೆಟ್ಟಿಗೆಯಲ್ಲಿ ಹಾಕುತ್ತಿದ್ದಾರೆ. ಆ ಬಟ್ಟೆಗಳನ್ನು ಒಗೆದು ಇಸ್ತ್ರೀ ಮಾಡಿ ಅವುಗಳನ್ನು ಅವಶ್ಯಕತೆ ಇದ್ದವರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದುದಲ್ಲದೆ ಮದುವೆ-ಇತರೆ ಸಮಾರಂಭದಲ್ಲಿ ಉಳಿದ ಅಡುಗೆಯನ್ನು ವೇಸ್ಟ್ ಮಾಡದೇ ಅದನ್ನು ಸಂಗ್ರಹ ಮಾಡಿ ಬಡವರಿಗೆ ನಿರ್ಗತಿಕರಿಗೆ ಹಂಚಿಕೆ ಮಾಡುವ ಕೆಲಸ ಪುಣ್ಯ ಕೆಲಸವಾಗಿದೆ. ಇಂತಹ ಕಾರ್ಯಗಳಿಗೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಬೇಕೆಂದರು.
ಈ ವೇಳೆ ಪುರಸಭೆ ಉಪಾಧ್ಯಕ್ಷ ಮಹ್ಮದ್ ರಫಿ, ಜೆಡಿಎಸ್ ತಾಲೂಕು ಅಧ್ಯಕ್ಷ ನಾಗಭೂಷಣ, ಮಹ್ಮದ್ ಪ್ರೋಟ್, ಡಾ| ಜಲಾಲುದ್ದೀನ್, ಸಮೃದ್ಧಿ ಗೆಳೆಯರ ಬಳಗದ ಅಧ್ಯಕ್ಷ ಬಸವರಾಜ ಪಾಟೀಲ್, ಮಂಜುನಾಥ ವಕೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು