ಕುಡಿಯುವ ನೀರಿಗಾಗಿ ಎಸ್ಕೇಪ್ ಗೇಟ್ತೆರೆದು ಹಳ್ಳಕ್ಕೆ ನೀರು
Team Udayavani, Mar 6, 2018, 4:42 PM IST
ಮಸ್ಕಿ: ಕುಡಿಯುವ ನೀರಿಗಾಗಿ ಇಲ್ಲಿನ ತುಂಗಭದ್ರ ಎಡದಂಡೆಯ 69ನೇ ಮೈಲಿನಲ್ಲಿ ರೈತರೇ ಎಸ್ಕೇಪ್ ಗೇಟ್ ಗಳನ್ನು ಎತ್ತುವ ಮೂಲಕ ಹಳ್ಳಕ್ಕೆ ನೀರು ಹರಿಬಿಟ್ಟ ಘಟನೆ ಸೋಮವಾರ ನಡೆಯಿತು.
ನಗರದ ಎಡದಂಡೆ ನಾಲೆಯ ಹತ್ತಿರ ತಾಲೂಕಿನ ಬಳಗಾನೂರ ಸೇರಿದಂತೆ ಕೆಳಭಾಗದ ಹಳ್ಳಿಗಳ ಜನರಿಗೆ ಕುಡಿಯುವ ನೀರಿಗೆ ಬೇಸಿಗೆ ಮುನ್ನವೇ ಹಾಹಾಕಾರ ಶುರುವಾಗಿದೆ. ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಅನೇಕ ಸಲ ಮನವಿ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದರು. ಇದರಿಂದ ಅಸಮಧಾನಗೊಂಡ ರೈತರು ತಾವೇ ಎಸ್ಕೇಪ್
ಗೇಟ್ಗಳನ್ನು ಎತ್ತಿ ಹಳ್ಳಕ್ಕೆ ನೀರುಬಿಟ್ಟರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಗುರುಪಾದೇಶ್ವರ ಪಾಟೀಲ್ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ನೀರಾವರಿ ಅಧಿಕಾರಿಗಳು ಮತ್ತು ರೈತರ ಮಧ್ಯೆ ನೀರು ಬಿಡುವ ವಿಷಯಕ್ಕೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಅಧಿಕಾರಿಗಳು ಮತ್ತು ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಕಾಲುವೆ ಕೆಳ ಭಾಗದ ಹಳ್ಳಿಗಳಾದ ಬಳಗಾನೂರ, ದಿದ್ದಗಿ, ಸಾಗರ್ ಕ್ಯಾಂಪ್, ಲಕ್ಷ್ಮೀ ಕ್ಯಾಂಪ್ ಗೌಡನಬಾವಿ ಸೇರಿದಂತೆ ಇನ್ನಿತರ ಹಳ್ಳಿಗಳ ನೂರಾರು ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ