ಎಲ್ಲರೂ ಸಂಘಟಿತರಾಗಿ ಹೋರಾಡಬೇಕು
Team Udayavani, Dec 18, 2021, 3:24 PM IST
ಮಸ್ಕಿ: ಕಾಂಗ್ರೆಸ್ನ ಎಲ್ಲ ಮುಖಂಡರು, ಕಾರ್ಯಕರ್ತರು ಪುರಸಭೆಯ 22 ವಾರ್ಡ್ಗಳ ಅಭ್ಯರ್ಥಿಗಳಿಗೆ ಬೆನ್ನೆಲುಬಾಗಿ ನಿಂತು ಪ್ರಚಾರ ಮಾಡುವ ಮೂಲಕ ಪುರಸಭೆಯ ಅಧಿಕಾರ ಗದ್ದುಗೆ ಹಿಡಿಯಬೇಕು ಎಂದು ಶಾಸಕ ಆರ್. ಬಸನಗೌಡ ತುರುವಿಹಾಳ ಹೇಳಿದರು.
ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಎಲ್ಲ ಅಭ್ಯರ್ಥಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.
ಒಂದು ವಿಧಾನಸಭಾ ಕ್ಷೇತ್ರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಅತಿ ಮಹತ್ವ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಪ್ರಾಬಲ್ಯ ಸಾಧಿಸಿದರೆ ಸಾರ್ವತ್ರಿಕ ಚುನಾವಣೆಯಲ್ಲೂ ಸಹಜವಾಗಿ ಜನ ಬೆಂಬಲ ಸಿಗಲಿದೆ. ಹೀಗಾಗಿ ಪ್ರತಿಯೊಬ್ಬರು ಈ ಚುನಾವಣೆಯನ್ನು ಅತಿ ಮಹತ್ವದ ಚುನಾವಣೆ ಎಂದು ಪರಗಣಿಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್, ಹನುಮಂತಪ್ಪ ಮುದ್ದಾಪೂರ ಮಾತನಾಡಿದರು. ಮುಖಂಡರಾದ ಶ್ರೀಶೈಲಪ್ಪ ಬ್ಯಾಳಿ, ಸಿದ್ದಣ್ಣ ಹೂವಿನಬಾವಿ, ಎಚ್.ಬಿ. ಮುರಾರಿ, ಬಸನಗೌಡ ಮುದಬಾಳ, ಕೃಷ್ಣ ಡಿ.ಚಿಗರಿ, ನಿರುಪಾದಿ ವಕೀಲ, ಮಲ್ಲಯ್ಯ ಬಳ್ಳಾ, ವೆಂಕಟರೆಡ್ಡಿ ಹಾಲಾಪೂರ ಇದ್ದರು.