ಮುಂಗಾರು ಬಿತ್ತನೆಗೆ ಮುಂದಾದ ರೈತರು
Team Udayavani, Jun 13, 2020, 7:24 AM IST
ಸಾಂದರ್ಭಿಕ ಚಿತ್ರ
ದೇವದುರ್ಗ: ಪಟ್ಟಣ ಸೇರಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಆಗಾಗ ಅಲ್ಪ ಪ್ರಮಾಣದ ಮಳೆ ಸುರಿದಿದ್ದು ರೈತರು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.
ಈಗಾಗಲೇ ಹೊಲಗಳನ್ನು ಹದ ಮಾಡಿಕೊಂಡಿರುವ ರೈತರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ಪಟ್ಟಣ ಸೇರಿ ಜಾಲಹಳ್ಳಿ, ಗಬ್ಬೂರು, ಅರಕೇರಾ ಸೇರಿದಂತೆ ನಾಲ್ಕು ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಅಗತ್ಯ ಬಿತ್ತನೆ ಬೀಜ ಪೂರೈಕೆಯಾಗಿದ್ದು, ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಿದ ರೈತರು ಬಿತ್ತನೆಗೆ ಮುಂದಾಗಿದ್ದಾರೆ.
ದೇವದುರ್ಗ ರೈತ ಸಂಪರ್ಕ ಕೇಂದ್ರಕ್ಕೆ ಸಜ್ಜೆ 850 ಕೆಜಿ, ಅರಕೇರಾ 850 ಕೆಜಿ, ಜಾಲಹಳ್ಳಿ 1200 ಕೆಜಿ, ಗಬ್ಬೂರು 200 ಕೆಜಿ, ದೇವದುರ್ಗ ರೈತ ಸಂಪರ್ಕ ಕೇಂದ್ರಕ್ಕೆ ಭತ್ತ 113 ಕ್ವಿಂಟಲ್, ಅರಕೇರಾ 113 ಕ್ವಿಂಟಲ್, ಜಾಲಹಳ್ಳಿ 113ಕ್ವಿಂಟಲ್, 42 ಕ್ವಿಂಟಲ್, ಸೂರ್ಯಕಾಂತಿ ದೇವದುರ್ಗ ರೈತ ಸಂಪರ್ಕ ಕೇಂದ್ರಕ್ಕೆ 1.20 ಕ್ವಿಂಟಲ್, ಅರಕೇರಾ 0.90 ಕ್ವಿಂಟಲ್, ಜಾಲಹಳ್ಳಿ 1.20 ಕ್ವಿಂಟಲ್, ಗಬ್ಬೂರು ಇಲ್ಲ. ದೇವದುರ್ಗ ರೈತ ಸಂಪರ್ಕ ಕೇಂದ್ರಕ್ಕೆ ತೊಗರಿ 23 ಕ್ವಿಂಟಲ್, ಅರಕೇರಾ 38.50 ಕ್ವಿಂಟಲ್, ಜಾಲಹಳ್ಳಿ, 33 ಕ್ವಿಂಟಲ್, ಗಬ್ಬೂರು 38 ಕ್ವಿಂಟಲ್ ಬಿತ್ತನೆ ಬೀಜ ಪೂರೈಕೆಯಾಗಿವೆ. ನಾಲ್ಕೂ ಹೋಬಳಿ ಕೇಂದ್ರಕ್ಕೆ ತಲಾ 2.10 ಕ್ವಿಂಟಲ್ ಹೆಸರು ಪೂರೈಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಡಾ| ಎಸ್. ಪ್ರಿಯಾಂಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ