ಗರಿಷ್ಠ ಪರಿಹಾರಕ್ಕೆ ರೈತರ ಆಗ್ರಹ


Team Udayavani, Jan 2, 2018, 2:56 PM IST

ray-1.jpg

ರಾಯಚೂರು: ನಾರಾಯಣಪುರ ಬಲದಂಡೆ ವಿಸ್ತರಣೆ ಕಾಲುವೆಗಾಗಿ ಭೂ ಸ್ವಾಧಿಧೀನಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ
ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿದ್ದು, ರೈತರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.

ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಗೆ ಭೂ ಸಂತ್ರಸ್ತ ರೈತರೆಲ್ಲ ಆಗಮಿಸಿದ್ದರು. ವಿಸ್ತರಣೆ ಕಾಲುವೆ ವ್ಯಾಪ್ತಿಗೆ ಕಲ್ಮಲಾ, ಅಸ್ಕಿಹಾಳ, ಯರಮರಸ್‌ ಕ್ಯಾಂಪ್‌, ರಾಂಪುರ, ಚಂದ್ರಬಂಡಾ ಸೇರಿ ವಿವಿಧ ಗ್ರಾಮಗಳು ಸೇರಲಿದ್ದು, ಎಲ್ಲ ಕಡೆಯಿಂದಲೂ ರೈತರು ಆಗಮಿಸಿದ್ದರು. ಎಡಿಸಿ ಗೋವಿಂದರೆಡ್ಡಿ ಮಾತನಾಡಿ, ಈಗಾಗಲೇ ಭೂಮಿ ಸರ್ವೆ ಕಾರ್ಯ ಮುಗಿದಿದ್ದು, ರೈತರಿಗೆ ನೋಟಿಸ್‌ ವಿತರಣೆ ಮಾಡಲಾಗಿದೆ. ಸರ್ಕಾರ ರೈತರಿಂದ ಅಭಿಪ್ರಾಯ ಪಡೆದು ವರದಿ ನೀಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ರೈತರು ಮಾತನಾಡಿ, ಕಾಲುವೆ ವ್ಯಾಪ್ತಿಗೆ ಜಮೀನು ಹಾಗೂ ಕೃಷಿಯೇತರ ಜಮೀನು ಕೂಡ ಒಳಗೊಳ್ಳಲಿದೆ. ಬಯಲು ಪ್ರದೇಶಕ್ಕೆ ಎಕರೆಗೆ 25ರಿಂದ 50 ಲಕ್ಷ ರೂ. ಹಾಗೂ ನೀರಾವರಿ ಪ್ರದೇಶಗಳಿಗೆ 50ರಿಂದ 80 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ ಉದ್ಯೋಗ ಮೀಸಲಾತಿಯನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
 
ನೀರಾವರಿ ಇಲಾಖೆ ಕಚೇರಿಗೆ ತೆರಳಿದರೆ ರೈತರಿಗೆ ಕಿಂಚಿತ್ತು ಗೌರವ ನೀಡುವುದಿಲ್ಲ. ಹೀಗಾಗಿ ಕಚೇರಿಯನ್ನು ನಗರದ ಆಸುಪಾಸು ಸ್ಥಳಾಂತರಿಸಬೇಕು. ಜಮೀನು ಮಾತ್ರವಲ್ಲದೇ, ನಿವೇಶನಗಳು ಕೂಡ ಸ್ವಾ ಧೀನಕ್ಕೆ ಒಳಪಡುತ್ತಿವೆ. ದರ ನಿಗದಿ ವಿಚಾರದಲ್ಲಿ ಪರಿಶೀಲಿಸಬೇಕು. ಜಿಎಸ್‌ಟಿ ಜಾರಿಯಾಗುವ ಮುಂಚೆ ಇದ್ದ ದರಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಎಡಿಸಿ ಗೋವಿಂದರೆಡ್ಡಿ ಮಾತನಾಡಿ, ನಿಮ್ಮ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭೂ ಸ್ವಾಧಿಧೀನಕ್ಕೆ ಜಿಎಸ್‌ಟಿ ಅನ್ವಯವಾಗುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1500 ಎಕರೆಗೂ ಹೆಚ್ಚು ಭೂಮಿ ಸ್ವಾ ಧೀನಪಡಿಸಿಕೊಳ್ಳಲಾಗುತ್ತಿದೆ. ಸುಮಾರು 900 ರೈತರಿಗೆ ಪರಿಹಾರ ವಿತರಿಸಬೇಕಿದೆ. ಶೀಘ್ರದಲ್ಲೇ ಸಚಿವ ಸಂಪುಟ ಸಭೆ ನಡೆಸಲಾಗುವುದು. ಹೀಗಾಗಿ ಸರ್ಕಾರ ರೈತರಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದರಿಂದ ಸಭೆ ನಡೆಸಿದ್ದಾಗಿ ಹೇಳಿದರು. ನಂತರ ಜಿಲ್ಲೆಯ ಕವಿತಾಳ ಮತ್ತು ಲಿಂಗಸುಗೂರು ಭಾಗದಲ್ಲಿ ಸಭೆ ನಡೆಸಿದರು. ಸಹಾಯಕ ಆಯುಕ್ತ ಮಲ್ಲಪ್ಪ ಪೂಜಾರಿ, ನೂರಾರು ರೈತರು ಪಾಲ್ಗೊಂಡಿದ್ದರು.

ಎನ್‌ಆರ್‌ಬಿಸಿ ಕಾಲುವೆ ವ್ಯಾಪ್ತಿಗೆ ಜಮೀನು ಹಾಗೂ ಕೃಷಿಯೇತರ ಜಮೀನು ಕೂಡ ಒಳಗೊಳ್ಳಲಿದೆ. ಬಯಲು ಪ್ರದೇಶಕ್ಕೆ ಎಕರೆಗೆ 25ರಿಂದ 50 ಲಕ್ಷ ರೂ. ಹಾಗೂ ನೀರಾವರಿ ಪ್ರದೇಶಗಳಿಗೆ 50ರಿಂದ 80 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ ಉದ್ಯೋಗ ಮೀಸಲಾತಿಯನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು
 ವಿವಿಧ ಗ್ರಾಮಗಳ ರೈತರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.